ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಕೊರಳಿಗೆ ಡಿನೋಟಿಫಿಕೇಷನ್‌ ಉರುಳುಕಲ್ಲು!

Date:

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಕಟದಲ್ಲಿ ಸಿಲುಕಿಸಿದೆ.

ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಡಿನೋಟಿಫೈ ಮಾಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ಹೂಡಿದ್ದ ಪ್ರಕರಣದಲ್ಲಿ ರಾಜ್ಯ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು. ಈ ಬಿ ರಿಪೋರ್ಟನ್ನು ರಾಜ್ಯ ಹೈಕೋರ್ಟ್​ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪನ್ನು ಕುಮಾರಸ್ವಾಮಿ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿದ್ದರು​.‌ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕುಮಾರಸ್ವಾಮಿಯವರ ಈ ಮೇಲ್ಮನವಿಯನ್ನು ವಜಾಗೊಳಿಸಿದೆ. ಪರಿಣಾಮವಾಗಿ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ಕಾಯಿದೆಯಡಿ ವಿಚಾರಣೆ ಮುಂದುವರೆಯಲಿದೆ.

ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತ ಮತ್ತು ರಾಜೇಶ್ ಬಿಂದದಲ್ ಅವರನ್ನು ಈ ಪೀಠ ಒಳಗೊಂಡಿತ್ತು. ಭ್ರಷ್ಟಾಚಾರ ತಡೆ ಕಾಯ್ದೆ ತಿದ್ದುಪಡಿಯ ಅಡಿಯಲ್ಲಿ ವಿನಾಯಿತಿ ನೀಡುವಂತೆ ಕೋರಿ ಎಚ್‌.ಡಿ ಕುಮಾರಸ್ವಾಮಿ ಸಲ್ಲಿಸಿರುವ ಮೇಲ್ಮನವಿಯಲ್ಲಿ ಯಾವುದೇ ‘ಮೆರಿಟ್’ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಯಿದೆ ತಿದ್ದುಪಡಿ ಜಾರಿಯಾಗುವ ಮೊದಲೇ ನಡೆದಿದೆ ಎನ್ನಲಾಗಿರುವ ಕೃತ್ಯಕ್ಕೆ ಆನಂತರ ಮಾಡಿರುವ ತಿದ್ದುಪಡಿಯನ್ನು ಪೂರ್ವಾನ್ವಯವಾಗಿ ಅನ್ವಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಕುಮಾರಸ್ವಾಮಿ ಅವರ ಅಹವಾಲನ್ನು ತಳ್ಳಿಹಾಕಿದೆ.

2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫೈ ಮಾಡಿರುವ ಆರೋಪವನ್ನು ಕುಮಾರಸ್ವಾಮಿ  ಎದುರಿಸಿದ್ದಾರೆ. ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫೈ ಮಾಡಲಾಗಿದೆ. 2010ರಲ್ಲಿ ಇದೇ ಜಾಗವನ್ನು 4.14 ಕೋಟಿ ರೂಪಾಯಿಗೆ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ | ಸಂಸದ ಕುಮಾರ ನಾಯಕ್, ಅಧಿಕಾರಿಗಳ ತಪ್ಪಿಗೆ ಸರ್ಕಾರದ ಮುಂದಿನ ಕ್ರಮವೇನು?

ಎಂ.ಎಸ್. ಮಹದೇವಸ್ವಾಮಿ ಎಂಬುವರು 2012ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಇದನ್ನು ಆಧರಿಸಿ ನ್ಯಾಯಾಲಯ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.

2019ರಲ್ಲಿ ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದಾಗ ಲೋಕಾಯುಕ್ತರು ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯವು ಆರೋಪಗಳು ವಿಚಾರಣೆಗೆ ಅರ್ಹವೆಂದು  ಕುಮಾರಸ್ವಾಮಿಯವರಿಗೆ ಸಮನ್ಸ್‌ ಜಾರಿಗೊಳಿಸಿತ್ತು.

ಈ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ರಾಜ್ಯ ಹೈಕೋರ್ಟ್‌ ಕದ ಬಡಿದಿದ್ದರು. ಆರೋಪಗಳು ಗಂಭೀರವಾಗಿದ್ದು, ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ತನ್ನ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದಿತ್ತು ರಾಜ್ಯ ಹೈಕೋರ್ಟ್‌. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...