ಇಸ್ರೋಗೆ ಅಭಿನಂದನೆ ಸಲ್ಲಿಸಿದರೂ ನಟ ಪ್ರಕಾಶ್ ರಾಜ್‌ರನ್ನು ಕಾಡಿದ ಟ್ರೋಲಿಗರು

Date:

  • ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು, ಇದು ದಾರಿಯಾಗಲಿ’ ಎಂದು ಅಭಿನಂದಿಸಿ ನಟ ಟ್ವೀಟ್
  • ಸಿನಿಮಾವೊಂದರಲ್ಲಿ ಪ್ರಕಾಶ್ ರೈ ಅವರ ಕೆನ್ನೆಗೆ ಹೊಡೆಯುವ ವಿಡಿಯೋ ತುಣುಕು ಹಂಚಿ ಟ್ರೋಲ್

ಚಂದ್ರಯಾನ-3 ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಸುದ್ದಿಗೊಳಗಾಗಿದ್ದ ನಟ ಪ್ರಕಾಶ್ ರಾಜ್, ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೂ ಕೂಡ ಹಲವು ನೆಟ್ಟಿಗರು ಅವರನ್ನು ಟ್ರೋಲ್‌ ಮಾಡುತ್ತಿದ್ದಾರೆ.

ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ, ಪ್ರಕಾಶ್ ರಾಜ್ ಕೂಡಾ ಇಸ್ರೋಗೆ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದರು.

ಟ್ವೀಟ್‌ನಲ್ಲಿ, ‘ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು, ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು, ಇದು ದಾರಿಯಾಗಲಿ’ ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ನಟ ಪ್ರಕಾಶ್ ರಾಜ್ ಮಾಡಿದ್ದ ಟ್ವೀಟ್ ಹಲವರಲ್ಲಿ ಅಸಮಾಧಾನ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದನ್ನೇ ಗುರಿಯನ್ನಾಗಿಸಿರುವ ಟ್ರೋಲಿಗರು, ತೆಲುಗು ಚಿತ್ರ ‘ರಂಗ ಮಾರ್ತಾಂಡ’ದಲ್ಲಿ ಹಾಸ್ಯ ನಟ ಬ್ರಹ್ಮಾನಂದಂ ಅವರು ಪ್ರಕಾಶ್ ರೈ ಅವರ ಕೆನ್ನೆಗೆ ಹೊಡೆಯುವ ವಿಡಿಯೋ ತುಣುಕನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ರೈಗೆ ಕಿಚಾಯಿಸಿದ್ದಾರೆ.

ಇದೇ ರೀತಿಯಲ್ಲಿ ಹಲವು ಮಂದಿ ಪ್ರಕಾಶ್ ರಾಜ್ ಅವರನ್ನು ಕಾಲೆಳೆದಿದ್ದು, ಪ್ರಕಾಶ್ ಅವರ ಫೋಟೋ ಬಳಸಿಕೊಂಡು ‘ವಿಕ್ರಮ್ ನಿಂದ ಬಂದ ಮೊದಲ ಫೋಟೋ’ ಎಂದು ಚಂದ್ರನ ಅಂಗಳ ಗುಂಡಿಯಲ್ಲಿರುವಂತೆ ಎಡಿಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ಚಂದ್ರಯಾನ-3 ಕುರಿತು ಅವರು ಇತ್ತೀಚಿಗೆ ಮಾಡಿದ್ದ ಚಾಯ್ ವಾಲಾ ಟ್ವೀಟ್ ಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ವ್ಯಕ್ತಿಯೊಬ್ಬ ಚಹಾ ಮಗುಚುವ ವ್ಯಂಗ್ಯ ಚಿತ್ರ ಪೋಸ್ಟ್ ಮಾಡಿದ್ದ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ ಎಂದು ಕ್ಯಾಪ್ಶನ್ ಬರೆದಿದ್ದರು.

ನಂತರ ಸ್ಪಷ್ಟನೆ ನೀಡಿದ್ದ ಅವರು ‘ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುವುದು. ನಾನು ನಮ್ಮ ಕೇರಳದ ಚಾಯ್​ವಾಲಾರನ್ನು ಸಂಭ್ರಮಿಸುವ ಆರ್ಮ್​ಸ್ಟ್ರಾಂಗ್ ಕಾಲದ ಜೋಕ್ ಹೇಳಿದ್ದೆ. ಟ್ರೋಲಿಗರಿಗೆ ಕಂಡ ಚಾಯ್​ವಾಲಾ ಯಾರು? ಸ್ವಲ್ಪ ಪ್ರೌಢಿಮೆ ಬೆಳೆಸಿಕೊಳ್ಳಿ’ ಎಂದು ಟೀಕಿಸಿದವರಿಗೆ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...