ಕೆ ಎಚ್ ಮುನಿಯಪ್ಪಗೆ ಕಗ್ಗಂಟಾದ ದೇವನಹಳ್ಳಿ ಕ್ಷೇತ್ರ: ಕಾಂಗ್ರೆಸ್‌ನಲ್ಲಿ ಸಾಮೂಹಿಕ ರಾಜೀನಾಮೆ

Date:

  • ಕ್ಷೇತ್ರ ಪ್ರವೇಶಕ್ಕೂ ಮೊದಲೇ ಮುನಿಯಪ್ಪಗೆ ವಿರೋಧ
  • ಸ್ಥಳೀಯರಿಗೆ ಮನ್ನಣೆ ನೀಡಿ ಎಂದ ದೇವನಹಳ್ಳಿ ಕಾಂಗ್ರೆಸ್ಸಿಗರು

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ ಎಚ್ ಮುನಿಯಪ್ಪ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ.

ಮುನಿಯಪ್ಪಗೆ ಕ್ಷೇತ್ರದಿಂದ ಟಿಕೆಟ್ ನೀಡುವುದನ್ನು ವಿರೋಧಿಸಿ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಮುಖಂಡರು ರಾಜೀನಾಮೆ ಸಲ್ಲಿಸಿದ್ದಾರೆ.

ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕಿಳಿಯಲು ಸಜ್ಜಾದಂತೆ, ದೇವನಹಳ್ಳಿಯಿಂದ ಅದೃಷ್ಟ ಪರೀಕ್ಷೆಗೆ ಕೆ ಎಚ್ ಮುನಿಯಪ್ಪ ಮುಂದಾಗಿದ್ದರು. ಆದರೆ ಇದಕ್ಕೆ ದೇವನಹಳ್ಳಿ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರಿಗೆ ದೇವನಹಳ್ಳಿ ಟಿಕೆಟ್ ನೀಡದಂತೆ ವಿರೋಧ ವ್ಯಕ್ತವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರಿಗೆ ಟಿಕೆಟ್ ನೀಡಿದಲ್ಲಿ ಕ್ಷೇತ್ರದಲ್ಲಿ ಪಕ್ಷ ಸೋಲುವ ಭೀತಿ ಇದೆ. ಜೊತೆಗೆ ಎಡಗೈ ಸಮುದಾಯದ ಮತಗಳು ಚದುರುವ ಸಾಧ್ಯತೆ ಇದೆ. ಹೀಗಾಗಿ ಕೆ ಹೆಚ್ ಮುನಿಯಪ್ಪಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ.

ಹಲವು ವರ್ಷಗಳಿಂದ ಸ್ಥಳೀಯರು ಟಿಕೆಟ್ ಆಕಾಂಕ್ಷಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡದೆಯೇ ಹೊರಗಿನಿಂದ ಬರುವವರು ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ ಎನ್ನುವುದೇ ಇಲ್ಲಿನ ಕಾಂಗ್ರೆಸ್ ನಾಯಕರ ಆಕ್ರೋಶ.

ದಲಿತ ಮತಗಳ ಪ್ರಾಬಲ್ಯ ಹೊಂದಿರುವ ಮೀಸಲು ಕ್ಷೇತ್ರದಲ್ಲಿ ದಶಕಗಳಿಂದ ಕಾಂಗ್ರೆಸ್, ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಕಳೆದ ಎರಡು ಚುನಾವಣೆಗಳಿಂದ ಇಲ್ಲಿನ ಮತದಾರರು ಜೆಡಿಎಸ್ ನತ್ತ ಒಲವು ತೋರಿ ಕಾಂಗ್ರೆಸ್ ಗೆ ಹಿನ್ನೆಡೆಯುಂಟಾಗುವಂತೆ ಮಾಡಿದ್ದಾರೆ. ಈ ಕಾರಣದಿಂದ ಮತಕ್ಷೇತ್ರದಲ್ಲಿ ಮರಳಿ ಕಾಂಗ್ರೆಸ್ ಗೆಲುವು ದಾಖಲಿಸಲು ಮುನಿಯಪ್ಪರನ್ನು ಕಣಕ್ಕಿಳಿಸಿಲು ಕೈ ಪಡೆ ಯೋಜನೆ ರೂಪಿಸಿದೆ.

ಸದ್ಯ ವ್ಯಕ್ತವಾಗಿರುವ ವಿರೋಧವನ್ನು ಪಕ್ಷ ಹೇಗೆ ಶಮನಗೊಳಿಸುತ್ತದೆ ಎನ್ನುವುದರ ಮೇಲೆ ಕೆ ಎಚ್ ಮುನಿಯಪ್ಪನವರ ರಾಜ್ಯ ರಾಜಕಾರಣ ಪ್ರವೇಶದ ಭವಿಷ್ಯ ನಿರ್ಧಾರವಾಗಲಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...