ಅಮಿತ್ ಶಾ ನಿರ್ದೇಶನದಂತೆ ದೇವರಾಜೇಗೌಡ ಮಾತು ಆಡುತ್ತಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ ಆರೋಪ

Date:

ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ ಅವರೇ ದೇವರಾಜೇಗೌಡರ ಬಾಯಿಯಿಂದ ಈ ಎಲ್ಲ ಮಾತನ್ನು ಹೇಳಿಸಿರುವ ಸಾಧ್ಯತೆ ಇಲ್ಲ ಎಂದು ಹೇಗೆ ಹೇಳಲು ಸಾಧ್ಯ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡನ ಹೇಳಿಕೆಗೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಪ್ರಿಯಾಂಕ್‌ ಖರ್ಗೆ, “ದೇವರಾಜೇಗೌಡರು ವಕೀಲರು, ನ್ಯಾಯಾಧೀಶರ ಮುಂದೆನೇ ಸಾಕ್ಷಿ ಸಮೇತ ಹೇಳಿಕೆಯನ್ನು ನೀಡಬಹುದಾಗಿತ್ತಲ್ಲವೇ? ಮಾಧ್ಯಮಗಳ ಮುಂದೆ ಒಂದು, ಕೋರ್ಟ್ ನಲ್ಲಿ ಇನ್ನೊಂದು ಹೇಳಿಕೆಯನ್ನು ನೀಡಿದರೆ, ಇವರ ಮಾತನ್ನು ನಂಬಲು ಸಾಧ್ಯ?” ಎಂದರು.

“ನೂರು ಕೋಟಿ ಏನು ಹುಡುಗಾಟವಲ್ಲ. ಅಮಿತ್ ಶಾ ಅವರಿಗೆ ಈ ರೀತಿ ಆಫರ್ ಇದೆ, ಇಡಿ ಅಥವಾ ಐಟಿ ದಾಳಿ ನಡೆಸಿ ಎಂದು ಮನವಿ ಮಾಡಬೇಕಾಗಿತ್ತು. ಬಿಜೆಪಿ ಅಥವಾ ಜೆಡಿಎಸ್ ಅವರಿಗೆ ಇದು ಬರೀ ರಾಜಕೀಯ. ಕುಟುಂಬಕ್ಕೆ ಅಂಟಿರುವ ಕಳಂಕವನ್ನು ದೂರ ಮಾಡಬೇಕು ಎಂದು ಅವರಿಗಿಲ್ಲ” ಎಂದು ಪರೋಕ್ಷವಾಗಿ ದೇವೇಗೌಡರ ಕುಟುಂಬದ ವಿರುದ್ದ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಐಟಿ ಒಂದು ಸರ್ಕಾರಿ ಸಂಸ್ಥೆ, ಸಿಬಿಐನಿಂದ ಮಾತ್ರ ನ್ಯಾಯ ಸಿಗುತ್ತದೆ ಎನ್ನುವುದು ತಪ್ಪಲ್ಲವೇ, ಅಮಿತ್ ಶಾ ಜೊತೆ ನೇರ ಸಂಪರ್ಕದಲ್ಲಿ ಅವರಿದ್ದಾರಲ್ಲವೇ, ನೂರು ಕೋಟಿ ಆಫರ್ ಬಗ್ಗೆ ಅವರಿಗೆ ತಿಳಿಸಬೇಕಾಗಿತ್ತು” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ 

ದೇವರಾಜೇಗೌಡ ಆರೋಪವೇನು?

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವೇಳೆಯಲ್ಲಿಯೇ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, “ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜೊತೆಗೆ ಮಾತನಾಡಿಲ್ಲ” ಎಂದು ಹೇಳಿದರು.

“ಡಿ ಕೆಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಹೇಳು. ಪೆನ್‌ಡ್ರೈವ್‌ನ ಕುಮಾರಸ್ವಾಮಿ ಹಂಚಿದ್ದರು ಅಂತ ಹೇಳು. ನಿನಗೆ ಸಮಸ್ಯೆ ಆಗಲ್ಲ. ಸೆಕ್ಯೂರ್ ಮಾಡ್ತೀನಿ ಅಂತ ಭರವಸೆ ನೀಡಿದ್ದರು” ಎಂದು ದೇವರಾಜೇಗೌಡ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...