ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ ಸೂಚಿಸಿ, ಸಿದ್ಧಾಂತಕ್ಕೆ ಜೋತು ಬಿದ್ದಿಲ್ಲ ಎಂದ ದೇವೇಗೌಡ

Date:

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರತಿಪಾದಿಸಿದರು.

ರಾಜ್ಯಸಭೆಯಲ್ಲಿ ಗುರುವಾರ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು, “ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ” ಎಂದರು.

“ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ ಹಾಗೂ ಅದರ ಮೌಲ್ಯ ₹1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಜಾತ್ಯತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ. ವಕ್ಫ್ ಆಸ್ತಿ ದುರ್ಬಳಕೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ವಿಧೇಯಕವೂ ಆರ್ಥಿಕ ಮತ್ತು ಸಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ, ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ” ಎಂದು ಹೇಳಿದರು.

“ತುಳಿತಕ್ಕೆ ಒಳಗಾದ ದುರ್ಬಲರ ಪರವಾಗಿ ನಾನು ವಕ್ಫ್ ಮಸೂದೆ ಮತ್ತು ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತೇನೆ. ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿ ಆಗಿ ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ನಿರ್ಧಾರಗಳನ್ನು ಮಾಡಿದ್ದೇನೆ. ಅವರ ಒಳ್ಳೆಯದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿದ್ದೇನೆ. ಹಾಗಂತ ನಾನು ಯಾವುದೇ ಸಿದ್ಧಾಂತಕ್ಕೆ ಜೋತು ಬಿದ್ದಿಲ್ಲ. ನಾನೊಬ್ಬ ರೈತ. ರೈತರಿಗೂ ಒಳ್ಳೆಯದು ಮಾಡಿದ್ದೇನೆ” ಎಂದರು.

“ನಾನು ಯಾವುದೇ ಸಿದ್ಧಾಂತದವನಲ್ಲ, ನಾನು ರೈತ. ಮುಸ್ಲಿಂ ಮಾತ್ರವಲ್ಲ ಬಹಳಷ್ಟು ಸಮುದಾಯಕ್ಕೆ ಮೀಸಲಾತಿ ನೀಡಿದ್ದೇನೆ. ಸಣ್ಣಪುಟ್ಟ ಸಮುದಾಯಗಳಿಗೆ ಮೀಸಲು ಸೌಲಭ್ಯ ನೀಡಿ ಅವರ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅನೇಕ ಹೋರಾಟ, ಸಂಘರ್ಷಗಳನ್ನು ಮಾಡಿದ್ದೇನೆ. ಆದರೆ, ಯಾವತ್ತೂ ನಾನು ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿಲ್ಲ. ಮಾಡುವುದೂ ಇಲ್ಲ. ಆದರೆ, ಇಲ್ಲಿ ನಡೆಯುತ್ತಿರುವುದು ನೋಡಿ ಬೇಸರ ಆಗುತ್ತದೆ” ಎಂದು ದೇವೇಗೌಡರು ಅತೃಪ್ತಿ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...