ಬಿಜೆಪಿ ಒಂದು ಸೀಟನ್ನೂ ಘೋಷಿಸಿಲ್ಲ, ಹೋಗಿ ಅವರನ್ನು ಪ್ರಶ್ನಿಸಿ; ಪತ್ರಕರ್ತನಿಗೆ ದೇವೇಗೌಡರ ಕುಟುಕು

Date:

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಹಾಸನ ಟಿಕೆಟ್‌ ಗೊಂದಲದ ವಿಚಾರ ಸಕ್ಕತ್ ಸದ್ದು ಮಾಡುತ್ತಿದೆ. ಎಚ್‌ ಡಿ ರೇವಣ್ಣ ಮತ್ತು ಕುಮಾರಸ್ವಾಮಿ ಅವರ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ ಹಾಸನ ಟಿಕೆಟ್‌ ಹಂಚಿಕೆ ಬಗ್ಗೆ ಪ್ರಶ್ನೆ ಮಾಡಿದ ಪತ್ರಕರ್ತರೊಬ್ಬರಿಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಚಳಿ ಬಿಡಿದ್ದಾರೆ.

ದೇವೇಗೌಡ ಅವರು ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ವೇಳೆ, ಪತ್ರಕರ್ತರೊಬ್ಬರು ಹಾಸನ ಟಿಕೆಟ್‌ ವಿಚಾರವಾಗಿ ಪ್ರಶ್ನೆ ಕೇಳಿದ್ದಾರೆ. ಪತ್ರಕರ್ತನ ಪ್ರಶ್ನೆಗೆ ಬಹಳ ತೀಕ್ಷ್ಣವಾಗಿ ದೇವೇಗೌಡರು ತಿವಿದಿದ್ದಾರೆ.

“ಅದು ಬಿಡಿ, ನೀವು ಹಾಸನದ ವಿಚಾರಕ್ಕೆ ಬರ್ತಾ ಇದಿರಿ. ನಾವು ಇನ್ನೂ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ. ಅದರಲ್ಲಿ ಮಾಡ್ತೇವೆ. ಈಗಾಗಲೇ ಜೆಡಿಎಸ್‌ ಒಂದು ಪಟ್ಟಿ ಬಿಡುಗಡೆ ಮಾಡಿದೆ. ನಿಮಗೆ ಬೇರೆ ಪ್ರಶ್ನೆಯೇ ಇಲ್ವಾ?” ಎಂದು ದೇವೇಗೌಡರು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಷ್ಟ್ರೀಯ ಪಕ್ಷ ಬಿಜೆಪಿ ಇನ್ನೂ ಒಂದು ಸ್ಥಾನದ ಅಭ್ಯರ್ಥಿಯನ್ನೂ ಘೋಷಿಸಿಲ್ಲ. ಹಾಸನದ ಬಗ್ಗೇನೇ ಕೆದಕೋದ್ಯಾಕೆ. ಹೋಗಿ ಬಿಜೆಪಿ ನಾಯಕರನ್ನು ಪ್ರಶ್ನಿಸಿ” ಎಂದು ಪತ್ರಕರ್ತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ನಾವು 96-97 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯದ್ದು ಇನ್ನೂ ಪಟ್ಟಿ ಬಂದಿಲ್ಲ. ಕಾಂಗ್ರೆಸ್ ಎರಡನೇ ಪಟ್ಟಿಗೆ ತಿಣುಕಾಡುತ್ತಿದೆ. ಅವರನ್ನ ಕೇಳೋಗಿ” ಎಂದು ಹೇಳಿದ್ದಾರೆ.

ದೇವೇಗೌಡರು ಪತ್ರಕರ್ತರಿಗೆ ಚಾಟಿ ಬೀಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ಗಳಿಸುತ್ತಿದೆ. “ದೇವೇಗೌಡರು 80-90 ದಶಕದಲ್ಲಿ ಹೇಗಿದ್ದಿರಬಹುದು?” ಎನ್ನುವ ಮಾತುಗಳು ಹರಿಹಾಡುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...