ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿ ಕೆ ಶಿವಕುಮಾರ್

Date:

“ನಮ್ಮ ಸರ್ಕಾರದ ಬಳಿ 136+ ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ನಿನ್ನೆ ‘ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಇಲ್ಲ’ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿ ಕೆ ಶಿವಕುಮಾರ್, “ದೇವೇಗೌಡರು ಎಷ್ಟು ಭವಿಷ್ಯ ಕಾಲವನ್ನು ನೋಡಿದ್ದಾರೋ ನಾನು ಅಷ್ಟೇ ಭವಿಷ್ಯ ಕಾಲವನ್ನು ನೋಡಿದ್ದೇನೆ” ಎಂದು ತಿಳಿಸಿದರು.

“ದೇವೇಗೌಡರಿಗೆ 60 ವರ್ಷಗಳ ರಾಜಕೀಯದ ಅನುಭವವಿದ್ದರೆ, ನನಗೆ 40 ವರ್ಷಗಳ ರಾಜಕಾರಣದ ಅನುಭವವಿದೆ. 136+ ಸೀಟುಗಳು ನಮ್ಮ ಸರ್ಕಾರದ ಬಳಿ ಇವೆ. ಅವರು ತಮ್ಮ ಪಕ್ಷ ಜೀವಂತವಾಗಿ ಇರುತ್ತದೆಯೋ ಇಲ್ಲವೋ ಎಂಬುದನ್ನು ಮೊದಲು ಹೇಳಲಿ. ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುತ್ತದೆಯೇ ಅಥವಾ ತನ್ನದೇ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳಲಿದೆಯೇ ಎಂಬುದರ ಬಗ್ಗೆ ಜನರಿಗೆ ತಿಳಿಸಿಲಿ. ಅವರೇ ಕಟ್ಟಿದ ಪಕ್ಷ ಹಾಗೂ ಅದರ ಬಗ್ಗೆ ಅವರ ನಿಷ್ಠೆಯನ್ನು ನಾನು ಪ್ರಶ್ನೆ ಮಾಡುವುದಿಲ್ಲ. ನಮ್ಮ ಸರ್ಕಾರದ ಅಸ್ತಿತ್ವ ಪಕ್ಕಕ್ಕಿರಲಿ, ಅವರ ಪಕ್ಷದ ಅಸ್ತಿತ್ವವೇ ಈಗ ಇಲ್ಲವಲ್ಲ” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, “ಪ್ರಧಾನಮಂತ್ರಿ ಸ್ಥಾನದ ಬಗ್ಗೆ ನಮಗೆ ಬಹಳ ಗೌರವವಿದೆ. ಪ್ರಧಾನಮಂತ್ರಿಗಳು ಈ ವಿಚಾರವಾಗಿ ಈಗ ಯಾಕೆ ಮಾತನಾಡುತ್ತಿದ್ದಾರೆಯೋ ಗೊತ್ತಿಲ್ಲ. ಸಂವಿಧಾನ ಬದಲಿಸುತ್ತೇವೆ ಎಂದ ಅವರ ಪಕ್ಷದ ನಾಯಕರುಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಲಿಲ್ಲ ಏಕೆ?” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಕೇಳಿದರು.

“ಪ್ರಧಾನಮಂತ್ರಿಗಳಿಗೆ ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದವರನ್ನು ಮೊದಲು ತಮ್ಮ ಪಕ್ಷದಿಂದ ಉಚ್ಛಾಟಿಸಲಿ. ಆಗ ಅವರ ಬದ್ಧತೆಯನ್ನು ನಾವು ಒಪ್ಪಬಹುದು. ಈಗ ಚುನಾವಣೆ ಬಂದಿದೆ ಎಂದು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ” ಎಂದು ಡಿಸಿಎಂ ಹೇಳಿದರು.

“ನಾವು ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇವೆ. ಬಿಜೆಪಿಗೆ 400 ಸೀಟು ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದೆಲ್ಲಾ ಅವರ ಪಕ್ಷದ ನಾಯಕರು, ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇಷ್ಟು ದಿನ ಈ ವಿಚಾರವಾಗಿ ಮೌನವಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡವರು ಸೇರಿದಂತೆ ಎಲ್ಲಾ ವರ್ಗದವರು ಸಂವಿಧಾನಕ್ಕೆ ಅಪಾಯ ಬಂದಿದೆ, ನಮ್ಮ ಹಕ್ಕುಗಳಿಗೆ ಕುತ್ತು ಬಂದಿದೆ ಎಂದು ಧ್ವನಿ ಎತ್ತಿದ ನಂತರ ಪ್ರಧಾನಿ ಮೋದಿಯವರು ಈ ಹೇಳಿಕೆ ನೀಡಿದ್ದಾರೆ. ಇದು ಕೇವಲ ರಾಜಕೀಯ ಹೇಳಿಕೆ” ಎಂದು ಡಿ ಕೆ ಶಿವಕುಮಾರ್ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...