ಫಡ್ನವೀಸ್ ನಮ್ಮನ್ನು ಒಟ್ಟುಗೂಡಿಸಿದರು: 20 ವರ್ಷಗಳ ಬಳಿಕ ಸಹೋದರ ಉದ್ಧವ್ ಜೊತೆ ವೇದಿಕೆ ಹಂಚಿದ ರಾಜ್ ಠಾಕ್ರೆ

Date:

ಸುಮಾರು ಎರಡು ದಶಕಗಳ(20 ವರ್ಷಗಳ) ಬಳಿಕ ಠಾಕ್ರೆ ಸಹೋದರರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇಂದು ಮುಂಬೈನಲ್ಲಿ ನಡೆದ ಮರಾಠಿ ವಿಜಯ ರ್‍ಯಾಲಿಯಲ್ಲಿ ಒಂದಾಗಿದ್ದಾರೆ. ತಮ್ಮನ್ನು ಒಂದಾಗಿಸಿದ ಶ್ರೇಯಸ್ಸನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ನೀಡಿದ್ದಾರೆ.

‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿವೆ.

ಇದನ್ನು ಓದಿದ್ದೀರಾ? ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸುವ ವಿವಾದಾತ್ಮಕ ನೀತಿಯನ್ನು ಠಾಕ್ರೆ ಸಹೋದರರು ಜೊತೆಯಾಗಿ ವಿರೋಧಿಸಿದ್ದಾರೆ. ಸರ್ಕಾರ ಈ ನೀತಿಯನ್ನು ಹಿಂಪಡೆದ ಬಳಿಕ ಸಹೋದರರು ಜೊತೆಯಾಗಿ ಸೇರಿ ವಿಜಯ ರ್‍ಯಾಲಿ ನಡೆಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ ಠಾಕ್ರೆ, “ಬಾಲ್ ಠಾಕ್ರೆಗೆ, ಇತರ ಅನೇಕರಿಗೆ ಮಾಡಲು ಸಾಧ್ಯವಾಗದ್ದನ್ನು, ದೇವೇಂದ್ರ ಫಡ್ನವೀಸ್ ಮಾಡಿದರು. ನಮ್ಮನ್ನು ಒಟ್ಟುಗೂಡಿಸಿದರು” ಎಂದು ಹೇಳಿದ್ದಾರೆ. ಹಾಗೆಯೇ, “ನಿಮಗೆ ವಿಧಾನಸಭೆಯಲ್ಲಿ ಅಧಿಕಾರವಿರಬಹುದು, ನಮಗೆ ರಸ್ತೆಗಳಲ್ಲಿ ಅಧಿಕಾರವಿದೆ” ಎಂದೂ ಹೇಳಿದರು.

“ಈ ತ್ರಿಭಾಷಾ ಸೂತ್ರ ಕೇಂದ್ರ ಸರ್ಕಾರ ತಂದಿರುವುದು. ಇಂದು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಎಲ್ಲ ಪ್ರಕ್ರಿಯೆ ಇಂಗ್ಲೀಷ್‌ನಲ್ಲಿದೆ. ಅದು ಯಾವುದೇ ಬೇರೆ ರಾಜ್ಯದಲ್ಲಿರುವುದು ಅಲ್ಲ. ಮಹಾರಾಷ್ಟ್ರ ಎಚ್ಚರವಾದಾಗ, ಏನಾಗುತ್ತದೆ ಎಂದು ನೀವು ನೋಡುತ್ತೀರಿ. ಮುಂಬೈ ಅಥವಾ ಮಹಾರಾಷ್ಟ್ರದ ಮೇಲೆ ನಿಮ್ಮ ಕೈ ಹಾಕಲು ಪ್ರಯತ್ನಿಸಿದರೆ ಏನಾಗುತ್ತದೆ ಎಂದು ನೋಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

2005ರಲ್ಲಿ ಮಾಲ್ವನ್ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಮಯದಲ್ಲಿ ರಾಜ್ ಮತ್ತು ಉದ್ಧವ್ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣ ರಾಜ್ ಠಾಕ್ರೆ ಶಿವಸೇನೆಯನ್ನು ತೊರೆದರು. 2005ರ ನವೆಂಬರ್‌ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ ತಮ್ಮ ಚಿಕ್ಕಪ್ಪ ಸ್ಥಾಪಿಸಿದ ಶಿವಸೇನೆಗೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದರು. “ನಾನು ಕೇಳಿದ್ದು ಗೌರವ ಮಾತ್ರ. ನನಗೆ ಸಿಕ್ಕಿದ್ದು ಅವಮಾನ ಮಾತ್ರ” ಎಂದು ಠಾಕ್ರೆ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...