ಮಹಾರಾಷ್ಟ್ರ ಬಿಜೆಪಿ ಮುಖಂಡನ ಅಶ್ಲೀಲ ವಿಡಿಯೋ ಪ್ರಕರಣ | ತನಿಖೆಗೆ ಆದೇಶಿಸಿದ ಡಿಸಿಎಂ ಫಡ್ನವೀಸ್

Date:

  • ಬಿಜೆಪಿಯ ಮಾಜಿ ಸಂಸದ ಕಿರಿಟ್‌ ಸೋಮಯ್ಯ ಅವರದ್ದು ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ
  • ‘ಆಡಳಿತ ಮೈತ್ರಿಕೂಟದ ನಿಜವಾದ ಮುಖ ಈಗ ಹೊರಬಂದಿದೆ’ ಎಂದ ವಿಪಕ್ಷಗಳು

ಮಹಾರಾಷ್ಟ್ರದ ರಾಜಕಿಯ ಬಿಕ್ಕಟ್ಟಿನ ಚರ್ಚೆಗೊಳಗಾಗುತ್ತಿರುವ ನಡುವೆಯೇ ಬಿಜೆಪಿ ಮುಖಂಡ ಕಿರಿಟ್‌ ಸೋಮಯ್ಯ ಅವರದ್ದು ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋವೊಂದು ಜಾಲತಾಣಗಳಲ್ಲಿ ವೈರಲ್‌ ಆಗಿರುವ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿಯೂ ಆಗಿರುವ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಆರೋಪಗಳ ಕುರಿತು ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ ಫಡ್ನವೀಸ್, ‘ಗೃಹ ಸಚಿವಾಲಯವು ಮುಂಬೈ ಅಪರಾಧ ವಿಭಾಗಕ್ಕೆ ವಿಚಾರಣೆ ನಡೆಸುವಂತೆ ಸೂಚಿಸಿದೆ. ಹಿರಿಯ ಅಧಿಕಾರಿ ತನಿಖೆ ನಡೆಸುತ್ತಾರೆ. ಅದು ನ್ಯಾಯಯುತವಾಗಿರುತ್ತದೆ ಮತ್ತು ಯಾರನ್ನೂ ರಕ್ಷಿಸುವುದಿಲ್ಲ’ ಎಂದು ಹೇಳಿದರು.

ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹೇಳಿಕೆ ನೀಡಿರುವ ಮಾಜಿ ಸಂಸದ ಕಿರಿಟ್ ಸೋಮಯ್ಯ, ‘ಈ ವಿಡಿಯೋ ನಕಲಿಯಾಗಿದ್ದು, ನಾನು ಯಾವ ಮಹಿಳೆಗೂ ಕಿರುಕುಳ ನೀಡಿಲ್ಲ. ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಫಡ್ನವೀಸ್‌ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಆ ಪತ್ರವನ್ನು ಟ್ವಿಟರ್‍‌ನಲ್ಲೂ ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲ ಬೆಳವಣಿಗೆಗಳ ನಡುವೆ, ‘ಆಡಳಿತ ಮೈತ್ರಿಕೂಟದ ನಿಜವಾದ ಮುಖ ಈಗ ಹೊರಬಂದಿದೆ’ ಎಂದು ಶಿವಸೇನೆ (ಯುಬಿಟಿ) ನೇತೃತ್ವದ ಪ್ರತಿಪಕ್ಷಗಳು ಟೀಕಿಸಿವೆ.

ವಿಡಿಯೋವನ್ನು ಮೊದಲು ಮರಾಠಿ ನ್ಯೂಸ್‌ ಚಾನಲ್‌ ಲೋಕಶಾಹಿ ಪ್ರಸಾರ ಮಾಡಿದ್ದು, ಬಳಿಕ ಇದು ವೈರಲ್‌ ಆಗಿದೆ. 8 ತಾಸಿನ ವಿಡಿಯೋ ಬಹಿರಂಗವಾಗಿದ್ದು, ಮಹಿಳೆ ಜತೆ ಸೋಮಯ್ಯ ರಾಸಲೀಲೆ ನಡೆಸಿದ ದೃಶ್ಯಗಳಿವೆ ಎನ್ನಲಾಗಿದೆ. ಆದರೆ ವಿಡಿಯೋದಲ್ಲಿನ ಮಹಿಳೆ ಈವರೆಗೂ ದೂರು ನೀಡಿಲ್ಲ. ‘ಹೀಗಾಗಿ ಮಹಿಳೆಯು ಕಾನೂನು ಮೇಲೆ ನಂಬಿಕೆ ಇರಿಸಿ ದೂರು ನೀಡಬೇಕು’ ಎಂದು ಮಹಾರಾಷ್ಟ್ರ ವಿಧಾನಪರಿಷತ್ ಉಪಸಭಾಪತಿ ನೀಲಂ ಗೋರೆ ಆಗ್ರಹಿಸಿದ್ದಾರೆ.

ಇದರ ನಡುವೆ ಫಡ್ನವೀಸ್‌ ತನಿಖೆಗೆ ಆದೇಶಿಸಿದ್ದು, ‘ವಿಡಿಯೋದಲ್ಲಿನ ಮಹಿಳೆ ಪತ್ತೆ ಮಾಡಲಾಗುವುದು. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು’ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? I-N-D-I-A ಮುಂದಿನ ಸಭೆ ಮುಂಬೈನಲ್ಲಿ : ಮಲ್ಲಿಕಾರ್ಜುನ ಖರ್ಗೆ

ಆದರೆ ವಿಪಕ್ಷಗಳು, ‘ಆಡಳಿತ ಮೈತ್ರಿಕೂಟದ ಸ್ವಭಾವ ಮತ್ತು ನಿಜವಾದ ಮುಖ ಈಗ ಬಹಿರಂಗಗೊಂಡಿದೆ. ಕಿರಿಟ್‌ ಸೋಮಯ್ಯ ಹಲವು ಶಾಸಕರು ಮತ್ತು ಸಂಸದರನ್ನು ಹೆದರಿಸಿ ಹಣ ವಸೂಲಿ ಮಾಡಿದ್ದಾರೆ. ಇದೀಗ ಸಾಕಷ್ಟು ಮಹಿಳೆಯರನ್ನು ಇ.ಡಿ. ತನಿಖೆ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಸೋಮಯ್ಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಕಾಂಗ್ರೆಸ್‌ ಶಾಸಕಿ ಯಶೋಮತಿ ಠಾಕೂರ್‌ ಆಗ್ರಹಿಸಿದ್ದಾರೆ.

ಮಾಜಿ ಸಂಸದರ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದಾರೆ ಎಂದು ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಯುಬಿಟಿ ಸೇನೆಯ ಅಂಬಾದಾಸ್ ದಾನ್ವೆ ಹೇಳಿದ್ದಾರೆ.

“ಸೋಮಯ್ಯ ಮಹಿಳೆಯರನ್ನು ಶೋಷಣೆ ಮಾಡಿದ್ದನ್ನು ತೋರಿಸುವ ವೀಡಿಯೊಗಳ ಪೂರ್ಣ ಪೆನ್ ಡ್ರೈವ್ ನನ್ನ ಬಳಿ ಇದೆ. ನಾನು ಅದನ್ನು ಪರಿಷತ್ತಿನ ಅಧ್ಯಕ್ಷರಿಗೆ ಸಲ್ಲಿಸುತ್ತೇನೆ. ಈ ಬಗ್ಗೆ ತನಿಖೆ ಮಾಡಬೇಕು. ಆರೋಪ ಹೊತ್ತಿರುವ ಮಾಜಿ ಸಂಸದ ಕೇಂದ್ರ ಸರ್ಕಾರದ ಭದ್ರತೆಯೊಂದಿಗೆ ತಿರುಗಾಡುತ್ತಿದ್ದಾರೆ” ಎಂದು ಅಂಬಾದಾಸ್ ದಾನ್ವೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...