ಧಾರವಾಡ ಕ್ಷೇತ್ರ | ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರಿಂದ ಹಕ್ಕೊತ್ತಾಯ

Date:

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರನ್ನು ಬದಲಿಸಬೇಕು ಎಂದು ವಿವಿಧ ಮಠಾಧೀಶರು ಬಿಜೆಪಿಯನ್ನು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ಸಾಮಾಜಿಕ ಸಮಸ್ಯೆ, ಧಾರ್ಮಿಕ ಸಮಸ್ಯೆ ಹಾಗೂ ರಾಜಕೀಯ ಸಮಸ್ಯೆ ಬಗ್ಗೆ ಚರ್ಚಿಸಲು ಬುಧವಾರ ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ಕರೆದಿದ್ದ ಮಠಾಧಿಪತಿಗಳ ಚಿಂತನ ಮಂಥನ ಸಭೆಯಲ್ಲಿ ಪ್ರಲ್ಹಾದ್‌ ಜೋಶಿ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ.

ಭಾರತೀಯ ಜನತಾ ಪಕ್ಷ ಮಾರ್ಚ್‌ 31ರೊಳಗೆ ಧಾರವಾಡ ಲೋಕಸಭಾ ಕ್ಷೇತ್ರ ಅಭ್ಯರ್ಥಿಯೆಂದು ಘೋಷಿಸಿರುವ ಪ್ರಲ್ಹಾದ್‌ ಜೋಶಿಯವರನ್ನು ಬದಲಿಸಬೇಕು ಎಂದು ಮಠಾಧೀಶರ ಸಭೆ ಹಕ್ಕೊತ್ತಾಯ ಮಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರುಸಾವಿರ ಮಠದ ಜಗದ್ಗುರು ಡಾ. ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ, ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯದಲ್ಲಿ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸುಮಾರು ನೂರಾರು ಮಠಾಧಿಪತಿಗಳು ಪಾಲ್ಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

“ವೀರಶೈವ ಲಿಂಗಾಯತ ಧಾರ್ಮಿಕ ಅವನತಿ ಆಗುತ್ತಿದೆ ಎಂಬ ವಿಚಾರ ಕುರಿತು, ಸಾಮಾಜಿಕವಾಗಿ ಒಳಪಂಗಡಗಳು ಪರಿಣಾಮ, ಸಮಾಜದ ನಾಯಕರಿಗೆ ಪೆಟ್ಟು ಬಿದ್ದಾಗ ಮಠಾಧಿಪತಿಗಳು ಮಾತನಾಡಬೇಕು. ಉತ್ತರ ಭಾರತದಲ್ಲಿ ಸಾಧು ಸನ್ಯಾಸಿಗಳು ರಾಜಕಾರಣ ಮಾಡುತ್ತಾರೆ. ದಕ್ಷಿಣ ಭಾರತ ಮಾಡುತ್ತಿಲ್ಲ. ನಾವು ಸಹ ಚುನಾವಣೆ ನಿಲ್ಲಬೇಕೋ ಬೇಡವೋ ಎಂಬ ಚರ್ಚೆ ಆಗಿ ಅನಿವಾರ್ಯವಾಗಿ ಮಠಾಧಿಪತಿಗಳು ಸೇರಿ ಸರ್ವಾನುಮತದ ತೀರ್ಮಾನ ಮಾಡಲಾಗಿದೆ” ಎಂದು ದಿಂಗಾಲೇಶ್ವರ ಸ್ವಾಮೀಜಿ ಸುದ್ದಿಗಾರರಿಗೆ ವಿವರಿಸಿದರು.

“ಬಹುಸಂಖ್ಯಾತ ಲಿಂಗಾಯತ ನಾಯಕರು ತುಳಿತಕ್ಕೊಳಗಾಗಿದ್ದಾರೆ. ಮಹಿಳಾ ಜನಪ್ರತಿನಿಧಿಗಳು ಅವಮಾನಕ್ಕೆ ಒಳಗಾಗಿದ್ದಾರೆ. ಪ್ರಲ್ಹಾದ್‌ ಜೋಶಿಯವರಿಂದ ವೀರಶೈವ ಲಿಂಗಾಯತ ನಾಯಕರಿಗೆ ಅನ್ಯಾಯವಾಗಿದ್ದು, ಲಿಂಗಾಯತರಿಂದ ಆರಿಸಿ ಬಂದಿರುವ ಇವರು ಲಿಂಗಾಯತ ನಾಯಕ ಬೇಕು ಎಂಬ ಹಿನ್ನೆಲೆಯಲ್ಲಿ ಇಂದು ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮ ಸಮಾಜದ ಮೇಲೆ ಚುನಾವಣೆ ಬಂದಾಗ ಮಾತ್ರ ಇವರಿಗೆ ಪ್ರೀತಿ ಯಾಕೆ ಬರುತ್ತದೆ? ಇವರಿಗೆ ಅಧಿಕಾರದ ಮದ ಬಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸವಣೂರ ಕಲ್ಮಠದ ಚನ್ನಬಸವ ಸ್ವಾಮೀಜಿ, ಸದಾಶಿವಪೇಟದ ಗದಿಗೇಶ್ವರ ಸ್ವಾಮೀಜಿ, ಬೊಮ್ಮನಹಳ್ಳಿ ಶಿವಯೋಗಿಶ್ವರ ಸ್ವಾಮೀಜಿ, ವಿಜಯಪುರದ ಸಿದ್ದಲಿಂಗ ದೇವರು, ಸಂಗನಬಸವ ದೇವರು ಶಿವಲಿಂಗಸ್ವಾಮಿ ಮಂಟೂರ, ಚನ್ನಬಸವೇಶ್ವರ ಸ್ವಾಮೀಜಿ ಸವಣೂರು ಸೇರಿದಂತೆ ಪ್ರಮುಖ ಸ್ವಾಮೀಜಿ ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...