ಧಾರವಾಡ ಲೋಕಸಭಾ ಕ್ಷೇತ್ರ | ಜಗದೀಶ್ ಶೆಟ್ಟರ್ ಗೆ ನಿರಾಸೆ, ಪ್ರಲ್ಹಾದ್ ಜೋಶಿ ಮತ್ತೆ ಕಣಕ್ಕೆ

Date:

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಈಗ ಸಂಪೂರ್ಣ ಉತ್ತರ ಸಿಕ್ಕಿತು. ಈ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಅಂತಿಮ ಪಟ್ಟಿ ಬಿಡುಗಡೆಯಾಗಿ ಜನರಲ್ಲಿದ್ದ ಕುತೂಹಲಕ್ಕೆ ಪೂರ್ಣವಿರಾಮ‌ ನೀಡಿದಂತಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭಾರತೀಯ ಜನತಾ ಪಕ್ಷದಿಂದ ಸತತ ನಾಲ್ಕು ಬಾರಿ ಸಂಸದರಾಗಿ ಹೊರಹೊಮ್ಮಿದ ಹಾಲಿ ಸಂಸದ ಪ್ರಲ್ಹಾದ್ ಜೋಶಿ ಅವರಿಗೆ ಮತ್ತೊಮ್ಮೆ‌ 5 ನೇ ಬಾರಿ ಟಿಕೆಟ್ ಲಭಿಸಿದ್ದು ವಿವಿಧ ಚರ್ಚೆ ಮತ್ತು ಗುಸುಗುಸುಗಳಿಗೆ ಮುಕ್ತಾಯ ಹೇಳಿದಂತಾಗಿದೆ. ಕಳೆದ ವಿಧಾನಸಭಾ ಚುನಾವಣೆಗೆ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗದ ಕಾರಣ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇತ್ತೀಚಿಗೆ ಕಾಂಗ್ರೆಸ್ ತೊರೆದು ಪುನಃ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದರು. ಆ ಬೆನ್ನಲ್ಲೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರಿಗೆ ಟಿಕೆಟ್ ಸಿಗಬೇಕೆಂದು ಅನೇಕ ಕಡೆಗಳಿಂದ ಒತ್ತಾಯ ಮತ್ತು ಬೇಡಿಕೆಗಳಿದ್ದವು. ಅದೂ ಈಗ ಟಿಕೆಟ್ ತಪ್ಪಿ ಹೋದ ಕಾರಣ ಜಗದೀಶ್ ಶೆಟ್ಟರ್ ಗೆ ನಿರಾಶೆ ಉಂಟುಮಾಡಿದೆ.

ಭಾರತೀಯ ರಾಜಕಾರಣಿಯಾದ ಪ್ರಲ್ಹಾದ್ ಜೋಶಿ ಮೋದಿ ಸಂಪುಟದಲ್ಲಿ ಪ್ರಭಾವಿ ಸಂಸದ. 1992-1994 ರಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಂಘಪರಿವಾರ ತ್ರಿವರ್ಣ ಧ್ವಜ ಹಾರಿಸುವ ಆಂದೋಲನದಲ್ಲಿ ಭಾಗವಹಿಸುವ ಮೂಲಕ ಪ್ರಲ್ಹಾದ್ ಜೋಶಿ ಕ್ಷೇತ್ರದ ಜನರ ಗಮನಕ್ಕೆ ಬರುತ್ತಾರೆ. ನಂತರ 2004, 2009, 2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಸ್ಪರ್ಧಿಸಿ ಚುನಾಯಿತರಾಗಿ ಹೊರಹೊಮ್ಮುತ್ತಾರೆ. 2019 ಮೇ 30 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಲ್ಹಾದ್ ಜೋಶಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

jagdish Shettar 1

1962 ನವೆಂಬರ್ 27 ರಂದು ಜನಿಸಿದ ಪ್ರಲ್ಹಾದ್ ಜೋಶಿಯವರು ಮೂಲ ವಿಜಯಪುರ. ಮತ್ತು ಇವರು ಆರಂಭಿಕ ದಿನಗಳಲ್ಲಿ ಕೈಗಾರಿಕೋದ್ಯಮಿ ಆಗಿದ್ದರು. ಹುಬ್ಬಳ್ಳಿಯ ಈದ್ಗಾ ಮೈದಾನದ ಸಮಸ್ಯೆಯ ಸಂದರ್ಭದಲ್ಲಿ ‘ಕಾಶ್ಮೀರ ಉಳಿಸಿ ಅಭಿಯಾನದಲ್ಲಿ’ ಇನ್ನಷ್ಟು ಜನರಿಗೆ ಪರಿಚಯವಾದರು. ಮತ್ತು ಹಿಂದುತ್ವ ರಾಜಕಾರಣದಲ್ಲಿ ಜನರಿಗೆ ಮತ್ತು ಹತ್ತಿರವಾದರು. ಕಳೆದ 2019 ನೇ ಲೋಕಸಭಾ ಚುನಾವಣೆಯಲ್ಲಿ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾಗಿ ನೇಮಕಗೊಂಡರು. ಈಗ ಮತ್ತೆ 5 ನೇ ಬಾರಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿದ್ದಾರೆ.

ಪ್ರಲ್ಹಾದ್ ಜೋಶಿ ಪೈಪೋಟಿಯಾಗಿ ಕಾಂಗ್ರೆಸ್ ಪ್ರಬಲ‌ ಅಭ್ಯರ್ಥಿಯ ಹುಡುಕಾಟದಲ್ಲಿದೆ ಮತ್ತು ಯಾವ ಅಭ್ಯರ್ಥಿಯನ್ನು‌ ಕಣಕ್ಕಿಳಿಸುವುದೊ ಕಾದು ನೋಡಬೇಕಿದೆ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...