ಧಾರವಾಡ | ಮತ್ತೆ ಬಿಜೆಪಿ ತೊರೆದು ಬಂಡಾಯ ಏಳುತ್ತಾರಾ ಜಗದೀಶ್ ಶೆಟ್ಟರ್?

Date:

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮುಂಬರುವ ಲೋಕಸಭಾ ಸಮೀಪದಲ್ಲಿ ಪುನಃ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಆದರೆ ಅವರಂದುಕೊಂಡ ಕಾರ್ಯ ಆಗಲೇ ಇಲ್ಲ. ಅರ್ಥಾತ್ ಲೋಕಸಭಾ ಸ್ಪರ್ಧೆಗೆ ಟಿಕೆಟ್ ಅವರ ಕೈತಪ್ಪಿ ಹೋಯಿತು. ಇನ್ನು ಉಳಿದಿರುವ ಬೆಳಗಾವಿ ಕ್ಷೇತ್ರದ ಮೇಲೆ ಆಶಾಭಾವ ಮೂಡಿಸಿಕೊಂಡು ಶೆಟ್ಟರ್ ಕುಳಿತಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.

ಈ ಕುರಿತು ಮಾರ್ಚ್ 14 ರಂದು ಶೆಟ್ಟರ್ ಸುದ್ಧಿಗಾರರೊಂದಿಗೆ ಮಾತನಾಡಿ, “ಲೋಕಸಭಾ ಚುನಾವಣೆಯ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆ ಆಗದಿರುವುದಕ್ಕೆ ಈಗಲೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಿ ಮಾತನಾಡಬೇಕೊ ಅಲ್ಲಿಯೇ ಮಾತನಾಡುತ್ತೇನೆ” ಎಂದು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ತೋರ್ಪಡಿಸಿದ್ದಾರೆ.

ಧಾರವಾಡ ಮತ್ತು ಹಾವೇರಿ ಕ್ಷೇತ್ರಗಳ ಟಿಕೆಟ್ ಕೈತಪ್ಪಿದ ಕಾರಣ, ಬೆಳಗಾವಿ ಬಗ್ಗೆ ಹೆಚ್ಚು ಗಮಹರಿಸಿದ್ದಾರೆ. ಹೈಕಮಾಂಡ್ ತೀರ್ಮಾನದ ಬಳಿಕ ಶೆಟ್ಟರ್ ಒಂದು ನಿರ್ಣಯಕ್ಕೆ ಬರುವ ಮಾತು ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಬೆಳಗಾವಿ ಟಿಕೆಟ್ ಕೂಡಾ ಶೆಟ್ಟರ್‌ಗೆ ಸಿಗದಿದ್ದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನೇ ಶೆಟ್ಟರ್ ತೆಗೆದುಕೊಳ್ತಾರಾ?, ಇಲ್ಲಾ ಬಂಡಾಯ ಏಳುತ್ತಾರಾ? ಎಂಬ ಗುಸುಗುಸುಗಳು ಆರಂಭವಾಗಿದ್ದು, ಚರ್ಚೆಗಳೂ ನಡೆದಿವೆ. ʼಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆʼ ಎನ್ನುತ್ತಲೇ ಟಿಕೆಟ್‌ಗಾಗಿ ಬೇಡಿಕೆಯಿಟ್ಟ ಶೆಟ್ಟರ್ ಈಗ ತಮ್ಮದೇ ಬಿಜೆಪಿ ನಾಯಕರ ಮೇಲೆ ಆಂತರಿಕವಾಗಿ ಆಕ್ರೋಶ ಹೊರಹಾಕುತ್ತಿದ್ದು, “ಟಿಕೆಟ್ ಹಂಚಿಕೆಯ ವಿಚಾರದಲ್ಲಿ ತಮ್ಮದೇ ಪಕ್ಷದ ನಾಯಕರು, ಯಾರು ಏನು ಮಾಡುತ್ತಿದ್ದಾರೆಂಬುದು ನನಗೆ ಚನ್ನಾಗಿ ಗೊತ್ತಿದೆ” ಎಂದು ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದಾರೆ.

ಇದನ್ನೂ ಓದಿದ್ದೀರಾ? ಧಾರವಾಡ ಲೋಕಸಭಾ ಕ್ಷೇತ್ರ | ಜಗದೀಶ್ ಶೆಟ್ಟರ್ ಗೆ ನಿರಾಸೆ, ಪ್ರಲ್ಹಾದ್ ಜೋಶಿ ಮತ್ತೆ ಕಣಕ್ಕೆ

ಅವಕಾಶವಾದಿಯಂತೆ ಪಕ್ಷದಿಂದ ಪಕ್ಷಕ್ಕೆ ತಮಗಿಷ್ಟ ಬಂದಂತೆ ಜಿಗಿಯುವ ಶೆಟ್ಟರ್‌ಗೆ ಟಿಕೆಟ್ ಸಿಗಕೂಡದು ಎಂಬುದು ಕೆಲವರ ವಾದ ಮತ್ತು ಪದೇ ಪದೇ ಬ್ರಾಹ್ಮಣರಿಗೇ ಟಿಕೆಟ್ ನೀಡುತ್ತಿರುವ ಬಗ್ಗೆ ಸ್ಪಪಕ್ಷದ ಲಿಂಗಾಯತ ನಾಯಕರು, ಕಾರ್ಯಕರ್ತರಲ್ಲಿ ಅಸಮಾಧಾನ ಉಂಟುಮಾಡಿದೆ. ಉಣಕಲ್‌ನ ಚನ್ನಬಸವಸಾಗರ ನಾಮಕರಣ ವಿಚಾರದಲ್ಲಿ ಜೋಶಿ ಕುರಿತು ಲಿಂಗಾಯತ ಸಂಘಟನೆಗಳ ಅಸಮಾಧಾನ ಮತ್ತು ಲಿಂಗಾಯತರಿಗೆ ಟಿಕೆಟ್ ನೀಡದ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಮುಂದಿನ ತಿರುವು ಏನು ಪಡೆಯುವುದೊ? ಶೆಟ್ಟರ್ ಬಂಡಾಯ ಏಳುತ್ತಾರಾ? ಮತ್ತೆ ಕಾಂಗ್ರೆಸ್ ಕಡೆಗೆ ವಾಲುತ್ತಾರಾ? ಕಾದು ನೋಡಬೇಕಿದೆ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...