ಧಾರವಾಡ | ಬಿಜೆಪಿಯಿಂದ ಸ್ವಾಮೀಜಿಗಳ ಮೇಲೆ ಒತ್ತಡ, ಲಿಂಗಾಯತರು ಜೋಶಿ ಕೈ ಹಿಡಿಯುವರೆ?

Date:

ಲಿಂಗಾಯತ ಮಠಾಧೀಶರೆಲ್ಲ ಒಂದಾಗಿ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಾರ್ಚ್ 27 ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಿಕೆಟ್ ಬದಲಾವಣೆಗೆ ಒತ್ತಾಯಿಸಿದ್ದರು.

ಮಾರ್ಚ್ 27 ರಂದು ಎಲ್ಲ ಸಮಾಜದ ಸ್ವಾಮಿಗಳ ಸಹಭಾಗಿತ್ವದಲ್ಲಿ, ದಿಂಗಾಲೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಒಂದು ಚಿಂತನ ಮಂಥನ ಸಭೆ ನಡೆಯಿತು. ಆ ಸಭೆಯ ಅಧ್ಯಕ್ಷತೆಯನ್ನು ಧಾರವಾಡದ ಮುರುಘಾಮಠದ ಶ್ರೀಗಳೇ ವಹಿಸಿಕೊಂಡಿದ್ದರು. ಆ ದಿನ ನಡೆದ ಪತ್ರಿಕಾಗೋಷ್ಠಿಯಲ್ಲಿಯೂ ಭಾಗವಹಿಸಿದ್ದರು. ಮರುದಿನ ಅವರು, ನಮಗೂ ಇದಕೂ ಯಾವುದೇ ಸಂಬಂಧವೇ ಇಲ್ಲ ಎಂಬ ಹೇಳಿಕೆ ಜನರನ್ನು ಗೊಂದಲಕ್ಕೀಡು ಮಾಡಿತ್ತು. ಆದರೆ‌ ಇದೀಗ ಸಂಬಂಧವಿಲ್ಲ ಎಂಬ ಒತ್ತಡದ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಮುರುಘಾಮಠ ಮಲ್ಲಿಕಾರ್ಜುನ ಶ್ರೀಗಳು ದಿಂಗಾಲೇಶ್ವರ ಶ್ರೀಗಳ ಧ್ವನಿಗೆ ಜೊತೆಯಾಗಿ ಬೆಂಬಲ ಸೂಚಿಸಿದ್ದಾರೆ.

ಸಭೆಯಲ್ಲಿ ತೆಗದುಕೊಂಡ ನಿರ್ಣಯಗಳು ಎಲ್ಲ ಸ್ವಾಮೀಜಿಗಳ ಸಹಮತವಾಗಿರುತ್ತವೆ. ಎಲ್ಲರ ಅಭಿಪ್ರಾಯಗಳೇ ನಿರ್ಧಾರಗಳಲ್ಲಿ ವ್ಯಕ್ತವಾಗಿರುತ್ತವೆ. ಹೀಗೆ ಆದರೆ ಜೋಶಿಯವರಿಗೆ ರಾಜಕೀಯದಲ್ಲಿ ಹಿನ್ನಡೆಯಾಗುತ್ತದೆ ಎಂಬ ಯೋಚನೆಯಿಂದ ಬಿಜೆಪಿಯವರು ಲಿಂಗಾಯತ ಸ್ವಾಮೀಜಿಗಳನ್ನು ಒತ್ತಡಕ್ಕೆ ಒಳಪಡಿಸಿ, ಹೆದರಿಸಿ ಅವರಿಂದ ಜೋಶಿ ವಿರೋಧವಿಲ್ಲ ಎಂಬ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂದು ಜನರು ಮಾತನಾಡುತ್ತಿದ್ದಾರೆ. ಅದರ ಬೆನ್ನಲ್ಲೆ ಮೂರುಸಾವಿರ ಮಠದ ರಾಜಯೋಗಿಂದ್ರ ಸ್ವಾಮೀಜಿ ಸಹಿತ ನಾವು ಜೋಶಿ ವಿರೋಧಿಗಳಲ್ಲ ಎಂಬ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಲ್ಹಾದ್ ಜೋಶಿ ಬಲಗೈ ಆಗಿರುವ ಈರೇಶ ಅಂಚಟಗೇರಿ, ನಾವು ಜೋಶಿ ವಿರೋಧವಿಲ್ಲ ಎಂಬಂತೆ ಪತ್ರವನ್ನು ಟೈಪ್ ಮಾಡಿಸಿ ಒತ್ತಾಯಪೂರ್ವಕವಾಗಿ ಲಿಂಗಾಯತ ಸ್ವಾಮೀಜಿಗಳಿಂದ ಜೋಶಿ ಪರ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂಬ ಗುಸುಗುಸು ಮಾತುಗಳೂ ಕೇಳಿಬರುತ್ತಿವೆ. ಬಿಜೆಪಿಯನ್ನು ಲಿಂಗಾಯತರೇ ಬೆಳೆಸಿದರಾದರೂ ಒಳಗೊಳಗೆ ಲಿಂಗಾಯತರನ್ನು ತುಳಿಯುತ್ತಿದೆ ಎಂದು ಜನ ಮಾತನಾಡುತ್ತಿದ್ದಾರೆ. ಈ ಕುರಿತು ಮುರುಘಾಮಠ ಸ್ವಾಮಿಗಳೂ ಸ್ಪಷ್ಟೀಕರಣ ನೀಡಿದ್ದಾರೆ.

ಇನ್ನು ಈ ಎಲ್ಲ ತಿರುವುಗಳಿಂದ ದಿಂಗಾಲೇಶ್ವರ ಶ್ರೀಗಳಿಗೆ ಮತ್ತಷ್ಟು ಬಲ ಬಂದಿರುವುದಂತೂ ಸತ್ಯ. ಇದೇ ಮುಂದುವರೆದರೆ ಲಿಂಗಾಯತರು ಜೋಶಿ ಕೈಬಿಡುವುದಂತೂ ಸತ್ಯ ಎಂಬುದು ಕೇಳಿಬರುತ್ತಿದೆ. ಒಂದು ವೇಳೆ ಮಾರ್ಚ್ 31 ಕ್ಕೆ ಕೇಂದ್ರ ಸಚಿವ ಜೋಶಿ ಟಿಕೆಟ್ ಬದಲಾವಣೆ ಮಾಡಿದರೆ ದಿಂಗಾಲೇಶ್ವರ ಶ್ರೀಗಳೆ ಕಣಕ್ಕಿಳಿಯುತ್ತಾರಾ, ಬದಲಾವಣೆ ಮಾಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗುತ್ತಾರಾ ಅಥವಾ ಬೇರೆಯವರ ಕಣಕ್ಕಿಳಿಸುತ್ತಾರಾ ಎಂಬುದು ಕುತೂಹಲಕಾರಿಯಾಗಿದೆ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...