ಕುಕ್ಕರ್ ಬಾಂಬ್ ಸ್ಫೋಟವಾದಾಗ ಬಿಜೆಪಿಗರು ತುಷ್ಟೀಕರಣ ಮಾಡಿದ್ದರಾ: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

Date:

”ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ. ಸ್ಫೋಟವಾಗಿರುವುದು ನಿಜ. ಬಿಜೆಪಿ ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್‌ನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ” ಎಂದರು.

ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಕೇಳಿದ ಸುದ್ದಿಗಾರರ ಪ್ರಶ್ನೆಗೆ ತನಿಖೆ ನಡೆಯುತ್ತಿದೆ ಎಂದು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಫೆ

”ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿಗರು ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ನಾಲ್ವರು ಶಂಕಿತರು ಪೊಲೀಸ್‌ ವಶಕ್ಕೆ

”ಸ್ಪೋಟದ ಘಟನೆಯನ್ನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದರು.

ಆಸ್ಪತ್ರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಮೈಸೂರಿನ‌ ತಮ್ಮ‌ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಪೊಲೀಸ್ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ, ಬೆಂಗಳೂರಿಗೆ ಆಗಮಿಸಿದ ಅವರು ಬ್ರೂಕ್ ವೆಲ್ ಫೀಲ್ಡ್ ಆಸ್ಪತ್ರೆ ಮತ್ತು ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದಲ್ಲಿ ಗಾಯಗೊಂಡವರನ್ನು ಮಾತಾಡಿಸಿದರು. ಇನ್ನು ರಾಮೇಶ್ವರ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಶೀಲನೆ ನಡೆಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...