ನಿಮ್ಮ ಮಗ ಸಾಯಲಿ ಅಂತಲೇ ವಿದೇಶಕ್ಕೆ ಕಳುಹಿಸಿದ್ರಾ : ಸಿಎಂ ಪ್ರಶ್ನಿಸಿದ ಕುಮಾರಸ್ವಾಮಿ

Date:

“ಪ್ರಜ್ವಲ್ ನನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದ್ರೆ ಈ ಹಿಂದೆ ವಿದೇಶಕ್ಕೆ ತಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ದರಾ? ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ಡಿ ಕುಮಾರಸ್ವಾಮಿ ಆಕ್ರೋಶದಿಂದ ಪ್ರಶ್ನಿಸಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಸಿಎಂ ಹೇಳಿಕೆಯ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಕೆಂಡಾಮಂಡಲರಾದ ಅವರು, “ಯಾರಿಗೆ ಆಗಲಿ ನೋವು ನೋವೇ. ನಿಮ್ಮ ಕುಟುಂಬದಲ್ಲಿ ಒಂದು ಘಟನೆ ನಡೆದಿದೆ. ಆಗ ನಿಮ್ಮ ಮಗನನ್ನು ನೀವೇ ಕಳಿಸಿದ್ರಾ? ಅವರ ಸಾವಿಗೆ ನೀವೇ ಕಾರಣವಾ?” ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

“ರಾಜತಾಂತ್ರಿಕ ಪಾಸ್ ಪೋರ್ಟ್ ಬಗ್ಗೆ ಇವರೆಲ್ಲಾ ಮಾತನಾಡುತ್ತಿದ್ದಾರೆ. ಆದರೆ ಇವರಿಗೆ ಕಾನೂನಿನ ತಿಳಿವಳಿಕೆಯೇ ಇಲ್ಲ. ಈಗ ಪ್ರಜ್ವಲ್ ಗೆ ವಾಪಸ್ ಕರೆದುಕೊಂಡು ಬರಲು ಪತ್ರ ಬರೆದಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಕೇಳಿದ್ದಾರೆ. ತಕ್ಷಣಕ್ಕೆ ಅದು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವೇಗೌಡರೇನು ಎಂದು ಸಿದ್ದರಾಮಯ್ಯಗೆ ಗೊತ್ತಿಲ್ಲವೇ?

“ಇದೆಲ್ಲಾ ಪ್ರಕ್ರಿಯೆ ಸಾಕಷ್ಟು ದಿನ ಆಗಬಹುದು ಎನ್ನುವ ಕಾರಣಕ್ಕೆ ತಕ್ಷಣ ವಾಪಸ್ ಬಂದು ತನಿಖೆಗೆ ಹಾಜರಾಗು ಎಂದು ಪ್ರಜ್ವಲ್ ಗೆ ಸಂದೇಶ ಕೊಟ್ಟಿದ್ದೇನೆ. ದೇವೇಗೌಡರು ಕೊನೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಮಾಧ್ಯಮದ ಹೇಳಿಕೆ ಮೂಲಕ ದೇವೇಗೌಡರು ನೀಡಿದ ಎಚ್ಚರಿಕೆ ಬಗ್ಗೆ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡುತ್ತಿದ್ದಾರೆ. ಎಷ್ಟು ವರ್ಷ ಇವರು ದೇವೇಗೌಡರ ಜತೆ ಕೆಲಸ ಮಾಡಿದ್ದಾರೆ? ಅವರು ಯಾವ ರೀತಿ ರಾಜಕಾರಣ ಮಾಡಿದ್ದಾರೆ ಎನ್ನುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ?” ಎಂದು ಹರಿಹಾಯ್ದರು.

ದೇವರಾಜೇಗೌಡ, ಶಿವರಾಮೇಗೌಡ, ಡಿಕೆಶಿ ಮಾತನಾಡಿದ್ದು ಯಾಕೆ?

“ಇದೊಂದು ರಾಜಕೀಯ ಪಕ್ಷವಾ? ಇವರಿಗೆ ಗೌರವ ಇದೆಯಾ? ಮಾನ ಮಾರ್ಯಾದೆ ಇದೆಯಾ? ಅದೇ ನಿಮ್ಮ ಡಿ.ಕೆ.ಶಿವಕುಮಾರ್, ಅದೇ ಸಿಡಿ ಶಿವು ಮಾಡಿದ್ದು ಗೊತ್ತಿಲ್ಲವೇ? ಆ ವ್ಯಕ್ತಿಯನ್ನು ಶಿವಕುಮಾರ್ ಎನ್ನುವುದು ಉಪಯೋಗಕ್ಕೆ ಬರೋದಿಲ್ಲ. ಅವರನ್ನು ಸಿಡಿ ಶಿವು ಅಂತಲೇ ಕರೆಯಬೇಕು. ಯಾಕಪ್ಪ ಸೀಡಿ ಶಿವು ಬ್ರೋಕರ್ ಶಿವರಾಮೇಗೌಡ ಜತೆ ಮಾತನಾಡಿದೆ” ಎಂದು ಡಿಕೆಶಿಯನ್ನು ಪ್ರಶ್ನಿಸಿದರು.

ತಲೆ ಹಿಡಿಯುವ ಕೆಲಸ ಮಾಡುತ್ತಿರುವುದು ಯಾರು?

“ಇಡೀ ಪ್ರಕರಣದಲ್ಲಿ ಇವರು ಯಾರದ್ದು ಪಾತ್ರ ಇಲ್ಲ ಎಂದರೆ ದೇವರಾಜೇಗೌಡ, ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಯಾಕೆ ಮಾತನಾಡಿದರು? ಇನ್ನೂ ಏನಾದರೂ ಸಾಕ್ಷ್ಯ, ಮೆಟಿರಿಯಲ್ ಇದೆಯಾ ಅಂತ ಯಾಕೆ ಕೇಳಿದರು? ಬ್ರೋಕರ್ ಕೆಲಸ, ತಲೆ ಹಿಡಿಯುವ ಕೆಲಸ ಮಾಡುತ್ತಿರುವುದು ಅವರು. ನನ್ನ ಬಗ್ಗೆ ಪಕ್ಷದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಅವಹೇಳನ ಮಾಡುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಾ?” ಎಂದು ಡಿಸಿಎಂ ವಿರುದ್ಧ ಕಿಡಿಕಾರಿದರು.

“ಗೃಹ ಸಚಿವರು ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಲಿ. ನಮ್ಮದೇನೂ ತಕರಾರು ಇಲ್ಲ. ನಿಮಗೂ ತಂದೆ ತಾಯಿ ಇದ್ದಾರೆ. ಒಡಹುಟ್ಟಿದ ಅಕ್ಕತಂಗಿಯರಿದ್ದಾರೆ. ಅರ್ಥ ಮಾಡಿಕೊಳ್ಳಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚನ್ನಗಿರಿ ಪ್ರಕರಣ; ಅಧಿಕಾರಿಗಳಿಗೆ ನಿಯಂತ್ರಣ ಇಲ್ಲ

“ಸರಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತಾವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ, ಯಾಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಬಳಕೆ ಮಾಡಿಕೊಂಡಿದ್ದಾರೆ. ಅದ್ದರಿಂದ ರಾಜ್ಯದಲ್ಲಿ ಕಾನೂನು ಸಂಪೂರ್ಣ ಕುಸಿತವಾಗಿದೆ. ಇದು ಸರ್ಕಾರದ ಸ್ವಯಂಕೃತ ಅಪರಾಧ. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ” ಎಂದು  ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...