ವಿಜಯೇಂದ್ರನ್ನ ಅಧ್ಯಕ್ಷನನ್ನಾಗಿ ಮಾಡಿ ಅಂತ ಕೇಳಿರಲಿಲ್ಲ, ನಿರೀಕ್ಷೆಯೂ ಇರಲಿಲ್ಲ : ಬಿ ಎಸ್ ಯಡಿಯೂರಪ್ಪ

Date:

‘ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತಾನೆ ಎಂಬ ನಿರೀಕ್ಷೆಯೇ ಇರಲಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ಶುಕ್ರವಾರ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿಕ ಮೊದಲ ಪ್ರತಿಕ್ರಿಯೆ ಈ ರೀತಿ ನೀಡಿದ್ದಾರೆ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯದ ಬಿಜೆಪಿ ಅಧ್ಯಕ್ಷರಾದ ಬಳಿಕ ರಾಜ್ಯದ ಉದ್ದಗಲಕ್ಕೂ ಇರುವ ಕಾರ್ಯಕರ್ತರು ಕುಣಿದು ಕುಪ್ಪಳಿಸುತ್ತಿದ್ದಾರೆ. ಬಹಳ ಸೂಕ್ತವಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಅವರು ಬಹಳ ದಿವಸಗಳ ನಂತರ ಒಂದು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಎಲ್ಲ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಕಾರಣವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೆಡೆ ಪ್ರವಾಸ ಮಾಡಲಿದ್ದೇನೆ’ ಎಂದು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯು ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಲೋಕಸಭಾ ಸ್ಥಾನ ಗೆಲ್ಲಬೇಕೆಂಬ ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ. ಆ ದಿಕ್ಕಿನಲ್ಲಿ ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದೇವೆ. ಇನ್ನಷ್ಟು ಮಾಡಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ‌ನೀಡಿದ್ದಾರೆ.

ವಿಜಯೇಂದ್ರ ನೇಮಕವಾಗುವ ಬಗ್ಗೆ ನಿರೀಕ್ಷೆ ಇತ್ತೇ? ಎಂದು ಪತ್ರಕರ್ತರು ಕೇಳಿದ್ದಕ್ಕೆ ಉತ್ತರಿಸಿದ ಬಿ ಎಸ್ ವೈ, ನಾವ್ಯಾರೂ ಈ ಆಯ್ಕೆ ಬಗ್ಗೆ ನಿರೀಕ್ಷೆಯೇ ಮಾಡಿರಲಿಲ್ಲ. ‌ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ. ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಮಾಡಿ ಎಂದು ಒಂದು ದಿನಾನೂ ದೆಹಲಿಯಲ್ಲಿ ಕೇಳಿಲ್ಲ. ಯಾರನ್ನು ಬೇಕಾದರೂ ವಿಚಾರಿಸಿ. ಅಂತಿಮ ತೀರ್ಮಾನವನ್ನು ತೆಗೆದುಕೊಂಡಿರುವುದು ಬಿಜೆಪಿ ಹೈಕಮಾಂಡ್ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...