ಮುಖ್ಯಮಂತ್ರಿ ಸ್ಥಾನದ ಘನತೆ ಸಿದ್ದರಾಮಯ್ಯ ಅವರ ನಡವಳಿಕೆಯಿಂದ ದಿನೇ ದಿನೇ ಕುಗ್ಗುತ್ತಿದೆ: ವಿಜಯೇಂದ್ರ

Date:

ಎ1 ಆರೋಪಿ ಸಿದ್ದರಾಮಯ್ಯ ಅವರೇ ಸದ್ಯ ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕಪ್ಪು ಮಸಿಯನ್ನು ಸ್ವಚ್ಛಗೊಳಿಸುವತ್ತ ಗಮನ ನೀಡಿ. ಏಕೆಂದರೆ ಕರ್ನಾಟಕದ ಸಾರ್ವಭೌಮತ್ವದ ಸಂಕೇತವಾದ ಮುಖ್ಯಮಂತ್ರಿ ಸ್ಥಾನದ ಘನತೆ ನಿಮ್ಮ ಭಂಡತನದ ನಡವಳಿಕೆಯಿಂದ ದಿನದಿಂದ ದಿನಕ್ಕೆ ಕುಗ್ಗುತ್ತಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

‘ಚೆಕ್‌ನಲ್ಲಿ ಲಂಚ ಪಡೆದ ಬಿ ವೈ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ’ ಎಂದಿದ್ದ ಸಿದ್ದರಾಮಯ್ಯ ಅವರಿಗೆ ಎಕ್ಸ್‌ ತಾಣದಲ್ಲಿ ಪ್ರತ್ಯುತ್ತರ ನೀಡಿರುವ ಅವರು, “ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡೇ ತನಿಖೆ ಎದುರಿಸುತ್ತಿರುವ ಭ್ರಷ್ಟ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೆ ಭಾಜನರಾಗಿರುವುದನ್ನು ದೇಶವೇ ಗಮನಿಸುತ್ತಿದೆ. ನೀವು ನನ್ನ ಮೇಲೆ ಮಾಡಿರುವ ಆರೋಪ ನಿರಾಧಾರ ಎನ್ನುವುದನ್ನು ನ್ಯಾಯಾಲಯವೇ ತೀರ್ಪಿತ್ತಿದೆ” ಎಂದರು.

“ನೀವೊಬ್ಬ ವಕೀಲರೂ ಆಗಿ ಮತ್ತೆ ಮತ್ತೆ ಪ್ರಸ್ತಾಪಿಸುತ್ತಿರುವುದನ್ನು ನೋಡುತ್ತಿದ್ದರೆ ವಿವೇಕಶೂನ್ಯತೆ ನಿಮ್ಮನ್ನು ಕಾಡುತ್ತಿರುವಂತಿದೆ. ದಿನದಿಂದ ದಿನಕ್ಕೆ ಬಿಗಿಯಾಗುತ್ತಿರುವ ಕಾನೂನಿನ ಕುಣಿಕೆ ನಿಮ್ಮ ನೆಮ್ಮದಿಯನ್ನು ಕಸಿದಿದ್ದು ಇದರಿಂದ ತೀವ್ರ ವಿಚಲಿತಗೊಂಡಂತಿರುವ ನೀವು ‘ಆಡಿದ್ದೇ ಆಡೋ ಕಿಸಬಾಯಿ ದಾಸ’ ಎನ್ನುವಂತೆ ಅದೇ ಸುಳ್ಳು ಆರೋಪಗಳನ್ನು ಪುನರಾವರ್ತಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮದೇ ಸರ್ಕಾರವಿದೆ ನಮ್ಮ ಮೇಲಿನ ಯಾವುದೇ ಆರೋಪವನ್ನು ಸಾಬೀತುಪಡಿಸಲು ತ್ವರಿತಗತಿಯಲ್ಲಿ ತನಿಖೆ ನಡೆಸಲು ನಿಮ್ಮ ಭತ್ತಳಿಕೆಯಲ್ಲಿ ಬ್ರಹ್ಮಾಸ್ತ್ರವೇ ಇದೆ, ಆದಾಗ್ಯೂ ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮರೆತು ಕ್ಷುಲ್ಲಕ ಆರೋಪಗಳನ್ನೇ ಚುನಾವಣಾ ಪ್ರಚಾರದ ಸರಕಾಗಿ ಬಳಸಿಕೊಳ್ಳುತ್ತಿರುವ ನಿಮ್ಮ ಪರಿಸ್ಥಿತಿ ನೋಡಿ ನಗುವಂತಾಗಿದೆ” ಎಂದಿದ್ದಾರೆ.

“ಸದನದಲ್ಲಿ ನಿಮ್ಮ ವಿರುದ್ಧದ ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದೇ ಹೆದರಿ ಪಲಾಯನ ಮಾಡಿದ ನೀವು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ‘ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ’. ಅಮಾಯಕ ದಲಿತ ಕುಟುಂಬವನ್ನು ವಂಚಿಸಿ ಭೂಮಿ ಪಡೆದುಕೊಂಡ ಆರೋಪ ನಿಮ್ಮ ಕುಟುಂಬದ ಮೇಲಿದೆ. ಅದೇ ಭೂಮಿಯನ್ನು ಮುಡಾ ಬಳಸಿಕೊಂಡಿದೆ ಎಂದು 14 ನಿವೇಶನಗಳನ್ನು ಲಪಟಾಯಿಸಿದ ತನಿಖೆ ನಿಮ್ಮ ವಿರುದ್ಧ ನಡೆಯುತ್ತಿದೆ. ನೀವು ತಪ್ಪೇ ಮಾಡದಿದ್ದರೆ ನೀವು ಕೇಳಿರುವ 62 ಕೋಟಿ ರೂ ಬರಲೇಬೇಕಾಗಿದ್ದರೆ ನೀವೇಕೆ ಮುಡಾಗೆ ನಿವೇಶನಗಳನ್ನು ಬೇಷರತ್ತಾಗಿ ರಾತ್ರೋರಾತ್ರಿ ವಾಪಸ್ ನೀಡಿದಿರಿ. ನೀವು ಸ್ವಚ್ಛರಾಗಿದ್ದರೆ ಪಾರದರ್ಶಕ ತನಿಖೆಗೆ ಅವಕಾಶ ನೀಡದೇ ಭ್ರಷ್ಟತೆಯನ್ನು ಏಕೆ ಸಮರ್ಥಿಸಿ ಕೊಳ್ಳುತ್ತಿದ್ದೀರಿ? ನೈತಿಕತೆ ಎಂಬ ಪದವನ್ನು ಕಸದಬುಟ್ಟಿಗೆ ಸೇರಿಸಿದ ನಿಮ್ಮಿಂದ ಪ್ರಾಮಾಣಿಕತೆ ಮಾತು ಕೇಳಿಬರುತ್ತಿರುವುದು ಕರ್ಕಶವಾಗಿದೆ” ಎಂದು ಕುಟುಕಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವ ನೀವು ಮೊದಲು ಸಾಮಾನ್ಯ ಪ್ರಜೆಯ (ಸ್ನೇಹಮಯಿ ಕೃಷ್ಣ) ನ್ಯಾಯಾಂಗ ಹೋರಾಟದ ವಿರುದ್ಧ ಜಯಿಸಿ ತೋರಿಸಿ ನೋಡೋಣ, ಆಮೇಲೆ ಇತರೆಲ್ಲರ ಭ್ರಷ್ಟತೆಯ ವಿರುದ್ಧ ಮಾತನಾಡುವಿರಂತೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...