ಕಾಶ್ಮೀರ ಭಾರತದ ಕಿರೀಟ; ನಿಮ್ಮ ಮನ ಗೆಲ್ಲಲು ಬಂದಿದ್ದೇನೆ: 370ನೇ ವಿಧಿ ರದ್ದತಿ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ

Date:

ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, “ಕಾಶ್ಮೀರ ಭಾರತದ ಕಿರೀಟ, ನಿಮ್ಮ ಮನ ಗೆಲ್ಲಲು ಬಂದಿದ್ದೇನೆ” ಎಂದು ತಿಳಿಸಿದರು.

ಕಾಶ್ಮೀರದ ರಾಜಧಾನಿ ಶ್ರೀನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಭಕ್ಷಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕೃಷಿ, ಪ್ರವಾಸೋದ್ಯಮ ಸೇರಿದಂತೆ ಹಲವು ರಂಗಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದರು.

“ವಿಶೇಷಾಧಿಕಾರ ರದ್ದತಿ ಬಳಿಕ ಕಾಶ್ಮೀರ ಅಭಿವೃದ್ದಿಯಲ್ಲಿ ಹೊಸ ಎತ್ತರಗಳನ್ನು ತಲುಪಿದೆ. ಜಮ್ಮು ಕಾಶ್ಮೀರ ಭಾರತದ ಕಿರೀಟ ಇದ್ದಂತೆ. ದಶಕಗಳಿಂದ ಕಾಶ್ಮೀರದ ಬಗ್ಗೆ ಇದ್ದ ಪೂರ್ವಾಗ್ರಹ ಅಂತ್ಯವಾಗಿದೆ. ಜಮ್ಮು ಕಾಶ್ಮೀರದ ಅಭಿವೃದ್ದಿ ಭಾರತದ ಮೊದಲ ಆದ್ಯತೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಮಲದ ಚಿಹ್ನೆಯೊಂದಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷವಾದ ನಂಟು ಇದೆ ಎಂದು ಹೇಳಿದರು. ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲವು ಕಣಿವೆ ರಾಜ್ಯದ ಎಲ್ಲ ಕೆರೆಗಳಲ್ಲೂ ಕಾಣ ಸಿಗುತ್ತದೆ. ಕಾಶ್ಮೀರದ ಕ್ರಿಕೆಟ್ ಸಂಸ್ಥೆಯ ಲೋಗೋದಲ್ಲೂ ಕಮಲ ಇದೆ” ಎಂದು ಪ್ರಧಾನಿ ಮೋದಿ ಹೇಳಿದರು.

“ಆರ್ಟಿಕಲ್ 370 ರದ್ದತಿ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಜಮ್ಮು ಮತ್ತು ಕಾಶ್ಮೀರ ಮಾತ್ರವಲ್ಲ ಇಡೀ ದೇಶದ ಜನತೆಗೆ ದಾರಿ ತಪ್ಪಿಸಿತ್ತು ಎಂದು ಆರೋಪಿಸಿದ ಪ್ರಧಾನಿ ಮೋದಿ, ಇಂದು ಕಾಶ್ಮೀರ ಅಭಿವೃದ್ದಿ ಕಾಣುತ್ತಿದ್ದು, ಕಾಶ್ಮೀರದ ಯಶಸ್ಸಿನ ಗಾಥೆಯನ್ನು ಇಡೀ ವಿಶ್ವವೇ ನೋಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

‘ಮದುವೆಯಾಗಲು ಕಾಶ್ಮೀರಕ್ಕೆ ಬನ್ನಿ’ ಎಂದ ಪ್ರಧಾನಿ

ಸಿನಿಮಾ ಶೂಟಿಂಗ್‌ ಸೇರಿದಂತೆ ಹಲವು ಪ್ರವಾಸೋದ್ಯಮಕ್ಕೆ ಉತ್ತಮವಾದ ಸ್ಥಳ ಜಮ್ಮು ಮತ್ತು ಕಾಶ್ಮೀರ ಎಂದು ಭಾಷಣದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿ, ‘ವೆಡ್ ಇನ್ ಇಂಡಿಯಾ’ ಎಂಬ ವಿಚಾರವನ್ನು ಪ್ರಸ್ತಾಪಿಸಿದರು.

“ದೇಶದ ನಿವಾಸಿಗಳಲ್ಲಿ ನನ್ನದೊಂದು ವಿನಂತಿ ಇದೆ. ನೀವು ಮದುವೆಯ ಸಂಭ್ರಮವನ್ನು ಆಚರಿಸಲು ಬೇರೆ ಬೇರೆ ದೇಶಗಳಿಗೆ ಹೋಗುವ ಬದಲು, ಕುಟುಂಬದೊಂದಿಗೆ ವಿಶಾಲವಾದ ಕಾಶ್ಮೀರಕ್ಕೆ ಬಂದು ಮದುವೆಯನ್ನು ಆಚರಿಸಿಕೊಳ್ಳಿ. ಇದರಿಂದಾಗಿ ಸ್ಥಳೀಯ ಜನರಿಗೂ ಉದ್ಯೋಗ ಸಿಕ್ಕಂತಾಗುತ್ತದೆ. ಹಾಗಾಗಿ, ಡೆಸ್ಟಿನೇಷನ್‌ ವೆಡ್ಡಿಂಗ್‌ಗೆ ಕಾಶ್ಮೀರವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

“ಭರವಸೆಗಳನ್ನು ಈಡೇರಿಸಲು ಮೋದಿ ಗ್ಯಾರಂಟಿ ನೀಡಲಾಗಿದೆ. ಮೋದಿಯ ಗ್ಯಾರಂಟಿ, ಪೂರ್ತಿಯಾಗುವ ಗ್ಯಾರಂಟಿ. ದಶಕಗಳಿಂದ ಕಾಶ್ಮೀರದ ಬಗ್ಗೆ ಇದ್ದ ಪೂರ್ವಗ್ರಹ ಅಂತ್ಯವಾಗಿದೆ. ಜಮ್ಮು ಕಾಶ್ಮೀರದ ಅಭಿವೃದ್ಧಿ, ಪ್ರವಾಸೋದ್ಯಮ ಈಗ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ” ಎಂದು ಪ್ರಧಾನಮಂತ್ರಿ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...