ಉಡುಪಿ ವಿಡಿಯೋ ಪ್ರಕರಣ | ‘ಪ್ರತೀಕ್’ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಬಿಜೆಪಿ ಹೋರಾಟ: ದಿನೇಶ್‌ ಗುಂಡೂರಾವ್‌

Date:

  • ಪ್ರತೀಕ್‌ನ ಸ್ಥಾನದಲ್ಲಿ ಅತೀಕ್ ಇದ್ದರೆ ಮಾತ್ರ ಬಿಜೆಪಿಯವರ ಹೋರಾಟವೇ?
  • ಎಬಿವಿಪಿ ಯುವಕ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ನವರಂದ್ರಗಳೂ ಬಂದ್ ಆಗಿತ್ತು

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಉಡುಪಿ ಪ್ರಕರಣದಲ್ಲಿ ಯಾವುದೇ ವಿಡಿಯೋ ಹರಿದಾಡಿಲ್ಲ. ಹರಿದಾಡುತ್ತಿರುವ ವಿಡಿಯೋ ಕೂಡ ನಕಲಿ. ಪೊಲೀಸರು ವಿದ್ಯಾರ್ಥಿನಿಯರ ಮೊಬೈಲ್ ರಿಟ್ರೀವ್ ಮಾಡಿದ್ದಾರೆ. ಅಲ್ಲಿ ಯಾವುದೇ ವಿಡಿಯೋಗಳಿಲ್ಲ. ಮತ್ಯಾಕೆ ಈ ರಾದ್ಧಾಂತ?” ಎಂದು ಕಿಡಿಕಾರಿದ್ದಾರೆ.

“ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದ್ದನ್ನೇ ಹುಲಿ ಹೋದಂತೆ ಬಿಂಬಿಸುತ್ತಿದ್ದಾರೆ. ಬೊಮ್ಮಾಯಿ ಅವರಿಗೊಂದು ಪ್ರಶ್ನೆ. ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ಎಬಿವಿಪಿ ಘಟಕದ ಅಧ್ಯಕ್ಷ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಬಿಟ್ಟಾಗ ಎಲ್ಲಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತೀಕ್ ಗೌಡ ಎಂಬ ಎಬಿವಿಪಿ ಯುವಕನೊಬ್ಬ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಎಲ್ಲ ನಾಯಕರ ನವರಂದ್ರಗಳೂ ಬಂದ್ ಆಗಿತ್ತು. ಈಗ ಧರ್ಮರಕ್ಷಕರ ಮುಖವಾಡ ತೊಟ್ಟು ಅಖಾಡಕ್ಕಿಳಿದಿದ್ದಾರೆ‌. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಇವರ ಹೋರಾಟವೇ?” ಎಂದು ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ.

“ಬೊಮ್ಮಾಯಿಯವರೇ, ಪೊಲೀಸರು ನಿಮ್ಮ ಆಡಳಿತದಲ್ಲಿ ರಾಜಕೀಯದ ಒತ್ತಡಕ್ಕೆ ಮಣಿದಿರಬಹುದು. ಆದರೆ, ನಾವು ಪೋಲಿಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರತೀಕ್ ಗೌಡ ಎಂಬಾತನನ್ನು ನಮ್ಮ ಪೊಲೀಸರು ಒದ್ದು ಒಳಗಾಕ್ಕಿದ್ದಾರೆ. ಬಹುಶಃ ಧರ್ಮ ರಕ್ಷಣೆಯ ಗ್ರಾಫ್ ನಿಮಗಿಂತ ನಮ್ಮದ್ದೇ ಜಾಸ್ತಿ ಇದೆಯಲ್ಲವೇ?” ಎಂದು ತಿರುಗೇಟು ನೀಡಿದ್ದಾರೆ.

“ಪ್ರಾಜ್ಞರಾದ ಬೊಮ್ಮಾಯಿ ಅವರು ಬಿಜೆಪಿಯ ಟೂಲ್‌ಕಿಟ್‌ನ ಭಾಗವಾಗಬಾರದು. ಉಡುಪಿ ಪ್ರಕರಣ ವಯೋಸಹಜ ಚೇಷ್ಟೆ ಮತ್ತು ಹುಡುಗಾಟ ಎಂದು ಬೊಮ್ಮಾಯಿಯವರಿಗೂ ಕೂಡ ತಿಳಿದಿದೆ. ಆದರೂ ಪಾಪ ಬಿಜೆಪಿಯಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಬೊಮ್ಮಾಯಿಯವರು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಕುತೂಹಲವೆಂದರೆ ಸಿಎಂ ಆದವರು ವಿಪಕ್ಷ ಸ್ಥಾನ ಪಡೆಯಲು ಇಷ್ಟೆಲ್ಲಾ ಮಾಡಬೇಕೆ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿಗೆ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್

“ಉಡುಪಿಯ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಸಂಗದ‌ ಹಿಂದೆ ಧಾರ್ಮಿಕ ಷಡ್ಯಂತ್ರವಿಲ್ಲ ಎಂಬುದು ಪೊಲೀಸರ ತನಿಖೆಯಿಂದ ಸಾಬೀತಾಗಿದೆ. ಆದರೆ, ಬಿಜೆಪಿಯವರು ತಮಿಳುನಾಡಿನ ಯಾವುದೋ ವಿಡಿಯೋವನ್ನು ಉಡುಪಿಯದ್ದೇ ಎಂದು ಬಿಂಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯ ಮನೆದೇವರೇ ಸುಳ್ಳು. ಆದರೂ ಇಂತಹ ವಿಚಾರದಲ್ಲೂ ಈ ಸುಳ್ಳು ಬೇಕೇ?” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಉಡುಪಿ ವಿಡಿಯೋ ಪ್ರಕರಣವನ್ನು ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ವಿಡಿಯೋ ಘಟನೆಯಲ್ಲಿರುವ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಬಂಧಿಸಿ, ಸಮಗ್ರ ನಡೆಸಬೇಕು. ಇಲ್ಲವಾದಲ್ಲಿ ಜುಲೈ 27ರಂದು ಮಹಿಳಾ ಮೋರ್ಚಾದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ಕೊಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಂ ಎನ್ ರವಿಕುಮಾರ್ ಹೇಳಿಕೆ ನೀಡಿದ್ದರು.

ಅಲ್ಲದೆ ಬುಧವಾರ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್‌ ಭೇಟಿ ನೀಡಿ ಪೊಲೀಸರೊಂದಿಗೆ ಮಾತು ಕತೆ ನಡೆಸಿ. ಪರಿಶೀಲನೆಗೆ ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...