ಕಾಂಗ್ರೆಸ್ ಸರಕಾರದ ಬಗ್ಗೆ ಚರ್ಚಿಸುವುದು ಕೆಸರಿನ ಮೇಲೆ ಕಲ್ಲು ಹಾಕಿದಂತೆ: ಹೆಚ್.ಡಿ.ಕುಮಾರಸ್ವಾಮಿ

Date:

ರಾಜ್ಯ ಕಾಂಗ್ರೆಸ್ ಸರಕಾರದ ಬಗ್ಗೆ ಚರ್ಚೆ ಮಾಡುವುದು, ಕೆಸರಿನ ಮೇಲೆ ಕಲ್ಲು ಹಾಕುವುದು, ಎರಡೂ ಒಂದೇ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

ಚನ್ನಪಟ್ಟಣದ ಆಕ್ಕೂರು ಗ್ರಾಮದಲ್ಲಿ ವಿವಿಧೋದ್ದೇಶ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟನೆ ನೆರವೇರಿಸಿದ ನಂತರ ಅವರು ಮಾಧ್ಯಮಗಳು ‘ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ, ಅದಕ್ಕೆ ನೀವೇನು ಹೇಳುತ್ತೀರಿ’ ಎಂದಾಗ “ಈ ಸರ್ಕಾರದ ಬಗ್ಗೆ ಹೇಳಲಿಕ್ಕೆ ಏನೂ ಇಲ್ಲ. ಎಲ್ಲಿ ನೋಡಿದರೂ ಇವರು ಮಾಡಿರುವ ಕೆಲಸಗಳ ಸಾಕ್ಷಿ ಗುಡ್ಡೆಗಳೇ ಕಾಣುತ್ತಿವೆ. ಚನ್ನಪಟ್ಟಣ ಉಪ ಚುನಾವಣೆ ಮುಗಿದು ನಾಲ್ಕು ತಿಂಗಳಾಯಿತು. ಅಕ್ಕೂರು ಕೆರೆಗೆ ನೀರು ತುಂಬಿಸಿದ್ದಾರಾ” ಎಂದು ಪ್ರಶ್ನಿಸಿದರು.

“ಈ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ ಮಾಡುವುದು ಯಾರಿಗೂ ಬೇಕಿಲ್ಲ. ಜನರಿಗೂ ಅದು ಬೇಕಿಲ್ಲ. ಬಸ್ ಪ್ರಯಾಣ ದರ ಏರಿಕೆ ಮಾಡಲಾಯಿತು. ಮನಸೋ ಇಚ್ಛೆ ಎಲ್ಲಾ ಕಡೆ ತೆರಿಗೆ, ದರ ಏರಿಕೆ ಮಾಡುತ್ತಾ ಹೋದರು. ಜನರು ಯಾರಾದರೂ ತಲೆ ಕೆಡಿಸಿಕೊಂಡರಾ? ಶೇ.40ರಿಂದ 50ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದರು. ಯಾರಾದರೂ ತಲೆ ಕೆಡಿಸಿಕೊಂಡರೆ? ಈಗ ವಿದ್ಯುತ್ ಸ್ಮಾರ್ಟ್ ಮೀಟರ್ ಹಾಕಿ ಅದರ ಬೆಲೆ ಶೇ.400ರಿಂದ 800ರಷ್ಟು ಏರಿಕೆ ಮಾಡುತ್ತಾರಂತೆ. ಪತ್ರಿಕೆಯಲ್ಲಿ ಸುದ್ದಿ ಬಂದಿದೆ. ಅದರ ಬಗ್ಗೆ ಯಾರಾದರೂ ಮಾತನಾಡುತ್ತಿದ್ದಾರೆಯೇ? ಇದರ ಯಾವುದರ ಬಗ್ಗೆಯೂ ಜನ ತಲೆಕೆಡಿಸಿಕೊಳ್ಳುತ್ತಿದ್ದಾರೆಯೇ? ಇಲ್ಲ.. ಅವರಿಗೆ ₹2000ವೇ ದೊಡ್ಡದು. ಈ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ ಮಾಡಲು ಜನರಿಗೆ ಬೇಕಿಲ್ಲದೆ ಇರುವಾಗ ಪ್ರತಿಪಕ್ಷಗಳು ಏನು ಮಾಡಲು ಸಾಧ್ಯ?” ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸರ್ಕಾರದ ಬಗ್ಗೆ ಚರ್ಚೆ ಮಾಡಲಿಕ್ಕೆ ಏನೂ ಇಲ್ಲ. ಈ ಸರ್ಕಾರದಿಂದ ಜನರಿಗೆ ಏನು ನಿರೀಕ್ಷೆ ಇಲ್ಲ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಜನರ ಪರಿಸ್ಥಿತಿ ಏನಾಗಿದೆ? ರೈತರ ಸ್ಥಿತಿ ಏನಾಗಿದೆ ಎನ್ನುವುದು ಗೊತ್ತಿದೆ. ಚನ್ನಪಟ್ಟಣ, ರಾಮನಗರಕ್ಕೆ ನಾನು ಏನು ಒಳ್ಳೆಯದು ಮಾಡಿದ್ದೇನೆ ಎನ್ನುವುದು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ. ಯಾರೋ ಬರೋಬ್ಬರನ್ನು ತೃಪ್ತಿ ಮಾಡಿಲ್ಲ. ನಾನೇನು ಎನ್ನುವುದು ಜನರಿಗೆ ಗೊತ್ತಿದೆ. ಯಾರಿಗೋ ಉತ್ತರ ಕೊಟ್ಟುಕೊಂಡು ನಾನು ಕೂರಲು ಸಾಧ್ಯವಿಲ್ಲ” ಎಂದರು.

ಸರ್ಕಾರದ ಗುತ್ತಿಗೆಯಲ್ಲಿ ರಾಜ್ಯ ಕಾಂಗ್ರೆಸ್ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕೊಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಯಾವ ಜಾತಿಗೆ ಎಷ್ಟು ಮೀಸಲಾತಿ ಕೊಡಬೇಕು ಎನ್ನುವ ಬಗ್ಗೆ ನನಗೆ ಗೊತ್ತಿಲ್ಲ. ಕೇವಲ ವೋಟಿಗಾಗಿ ಎಲ್ಲಾ ನಡೆಯುತ್ತಿದೆ. ರಾಜ್ಯದ ಜನರಿಗೆ ಅಭಿವೃದ್ಧಿ ಬೇಕು. ಯಾರಿಗೆ ಗುತ್ತಿಗೆ ಕೊಟ್ಟರೆ ಏನು ಉಪಯೋಗ? ಎಲ್ಲಿ ಗುತ್ತಿಗೆ ಕೊಟ್ಟರೂ ಅಲ್ಲಿಯೂ ಪರ್ಸಂಟೇಜ್ ವ್ಯವಹಾರ ಇದ್ದೇ ಇರುತ್ತದೆ” ಎಂದು ವ್ಯಂಗ್ಯವಾಡಿದರು.

“ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷನಿಗೆ ನಾನು ಕೇಳಲು ಬಯಸುತ್ತೇನೆ. ನಾನು 2006 ಮತ್ತು 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರತಿ ತಿಂಗಳು ರಾಜ್ಯದ ಗುತ್ತಿಗೆದಾರರಿಗೆ ದುಡ್ಡು ಬಿಡುಗಡೆಆಯಾಡುತ್ತಿದ್ದೆ. ಅವತ್ತು ಯಾವ ಕಮೀಶನ್ ನಡೆಯುತ್ತಿತ್ತು? ಗುತ್ತಿಗೆದಾರರು ಹೇಳಬೇಕು. ಯಾವ ಗುತ್ತಿಗೆದಾರ ಬಂದು ನಮಗೆ ಪರ್ಸಂಟೇಜ್ ಕೊಟ್ಟಿದ್ದ? ಆಗ ಇಂಥದ್ದು ಚರ್ಚೆಯಲ್ಲಿಯೇ ಇರಲಿಲ್ಲ. ಈಗ ಇವೆಲ್ಲಾ ಚರ್ಚೆ ಆಗುತ್ತಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...