ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಲು ಚರ್ಚೆಯಾಗಿದೆ, ಮೈತ್ರಿಯಲ್ಲಿ ಬಿರುಕು ಇಲ್ಲ: ಕುಮಾರಸ್ವಾಮಿ

Date:

ಜೆಡಿಎಸ್​-ಬಿಜೆಪಿ ನಾಯಕರ ನಡುವೆ ಯಾವುದೇ ವಿಶ್ವಾಸ ಕಡಿಮೆಯಾಗಿಲ್ಲ. ನಮ್ಮ ಶಕ್ತಿ ಬಗ್ಗೆ ಮಾತನಾಡಿದ್ದೇವೆ. ಬಿಜೆಪಿ ಹೈಕಮಾಂಡ್‌ ನಾಯಕರು ನಮ್ಮನ್ನು ತುಂಬಾ ಗೌರವಯುತವಾಗಿ ನೋಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಪ್ರಾರಂಭದಿಂದಲೂ ನಾವು ಮೂರು ಕ್ಷೇತ್ರ ಕೇಳಿದ್ದೇವೆ. ನಾವು ಕೇಳಿದ್ದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವಿಸಿದ್ದಾರೆ. ಸೋಮವಾರದ ಸಭೆಯಲ್ಲಿ 28 ಕ್ಷೇತ್ರದಲ್ಲೂ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕು ಅಂತ ಚರ್ಚೆಯಾಗಿದೆ” ಎಂದರು.

ಬಿಜೆಪಿ ಜೊತೆಗಿನ ಮೈತ್ರಿಗೆ ಕಾಂಗ್ರೆಸ್ ಕಾರಣ​

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ಕಾಂಗ್ರೆಸ್. ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದೀರಿ. ಜನ ತಿರಸ್ಕಾರ ಮಾಡಿದಾಗ ನಮ್ಮ ಮನೆ ಬಾಗಿಲಿಗೆ ಬಂದ್ದಿದ್ದು ನೀವು. ಈಗ ಬನ್ನಿ ಕಾಂಗ್ರೆಸ್​ಗೆ ಅಂತ ಡಿ ಕೆ ಶಿವಕುಮಾರ್ ಕರೆಯುತ್ತಿದ್ದಾರೆ” ಎಂದರು.

“ಕಾಂಗ್ರೆಸ್ ಜತೆ ಸರ್ಕಾರ ಮಾಡಿದಾಗ ಪಕ್ಷ ನಾಶಕ್ಕೆ ಹೊರಟಿದ್ದರು. ನಮ್ಮ ಶಾಸಕರಿಗೆ ಬ್ರೈನ್ ವಾಶ್ ಮಾಡಿ ಪಕ್ಷಕ್ಕೆ ಸೇರಿಸಿಕೊಂಡರು. ಹಂತ ಹಂತವಾಗಿ ರಾಜಕೀಯವಾಗಿ ಮುಗಿಸಲು ಪ್ರಯತ್ನ ಮಾಡಿದ್ರಿ. ಯಾವ ರೀತಿ ನಮ್ಮ ಶಕ್ತಿ ಕುಂದಿಸಲು ಯತ್ನಿಸಿದ್ದೀರಿ” ಎಂದು ಗೊತ್ತು ಎಂದು ಡಿಕೆಶಿ ವಿರುದ್ಧ ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು; ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ!

“ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಡಿ ಕೆ ಶಿವಕುಮಾರ್ ಅಯ್ಯೋ ಪಾಪ ಎಂದಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನೀವು ಮಂಡ್ಯದಲ್ಲಿ ಏನೂ ಮಾಡಿದ್ದಿರಾ ಅಂತ ಗೋತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಜಯದೇವ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ನೀವು ಕಾರಣ” ಎಂದರು.

“ನಮ್ಮ ಕಾರ್ಯಕರ್ತರಿಗೆ ಕಾಂಗ್ರೆಸ್​ಗೆ ಬನ್ನಿ ಎಂದು ಕರೆ ಕೊಡುತ್ತಿರಾ? ನನ್ನ ಕಾರ್ಯಕರ್ತರಿಗೆ ನಿಮ್ಮಿಂದ ರಕ್ಷಣೆ ಪಡೆಯುವ ದುಸ್ಥಿತಿ ಬಂದಿಲ್ಲ. ಪದೇ ಪದೇ ಬಿಜೆಪಿ ಬಿಟೀಮ್ ಎಂದು ಹೇಳಿದ್ರಿ. ಹಂತ ಹಂತವಾಗಿ ನಮ್ಮ ಪಕ್ಷ ಮುಗಿಸಲು ಪ್ರಯತ್ನ ಪಟ್ಟಿದ್ದೀರಿ, ರಾಜಕೀಯವಾಗಿ ನಮಗೆ ವಿಷ ಹಾಕಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...