ಕಾರು ಇಲ್ಲದವನನ್ನು ಯಾರೂ ಮದುವೆಯಾಗಲು ಬಯಸಲ್ಲ: ತೇಜಸ್ವಿ ಬಳಿ ಸುರಂಗ ರಸ್ತೆ ಸಮರ್ಥಿಸಿಕೊಂಡ ಡಿ ಕೆ ಶಿವಕುಮಾರ್

Date:

ಸುರಂಗ ರಸ್ತೆ ಯೋಜನೆಯ ಕುರಿತು ನಿರಂತರ ವಾಗ್ದಾದ ನಡೆಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಂಚಾರ ಅವ್ಯವಸ್ಥೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗಗಳ ಬಗ್ಗೆ ಚರ್ಚಿಸಿದರು. ಕಾರು ಮಾತ್ರ ಸಾಗಲು ಅವಕಾಶ ನೀಡುವ ಬಹುಕೋಟಿ ಮೌಲ್ಯದ ಸುರಂಗ ರಸ್ತೆ ಯೋಜನೆಯನ್ನು ರದ್ದುಗೊಳಿಸುವಂತೆ ಸೂರ್ಯ ವಾದಿಸಿದರು. ಹಾಗೆಯೇ ಮೆಟ್ರೋದಂತಹ ಸಾಮೂಹಿಕ ಸಾರಿಗೆಯಲ್ಲಿ ಹೂಡಿಕೆ ಮಾಡಿ ಎಂದು ಸೂಚಿಸಿದರು. ಇದನ್ನು ನಿರಾಕರಿಸಿದ ಡಿ ಕೆ ಶಿವಕುಮಾರ್, “ಕಾರು ಇಲ್ಲದ ವ್ಯಕ್ತಿಯನ್ನು ಯಾರೂ ಮದುವೆಯಾಗಲು ಬಯಸಲ್ಲ” ಎಂದು ವ್ಯಂಗ್ಯವಾಡಿದರು.

ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವುದು ಉತ್ತಮ. ಇದರಿಂದ ಖಾಸಗಿ ವಾಹನ ಬಳಕೆಯನ್ನು ಕಡಿಮೆ ಮಾಡಬಹುದು ಎಂಬ ತೇಜಸ್ವಿ ಸೂರ್ಯ ವಾದವನ್ನು ವಿರೋಧಿಸಿದ ಡಿ ಕೆ ಶಿವಕುಮಾರ್, “ನೀವು ವಾಹನ ಚಲಾಯಿಸುವುದನ್ನು ನಾನು ತಡೆಯಬಹುದೇ? ಇದು ಸಾಮಾಜಿಕ ಜವಾಬ್ದಾರಿಯ ವಿಷಯ. ಜನರು ತಮ್ಮ ಕುಟುಂಬಗಳೊಂದಿಗೆ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಅದನ್ನು ತಡೆಯಲಾಗುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟನಲ್ ರೋಡ್ ದೈತ್ಯ ಯೋಜನೆಯನ್ನು ಸಾರ್ವಜನಿಕ ಚರ್ಚೆಗಿಡಲಿ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, “ಅಗತ್ಯವಿದ್ದರೆ, ಸಂಸದರು ತಮ್ಮ ಮತದಾರರಿಗೆ ತಮ್ಮ ಕಾರುಗಳನ್ನು ಮನೆಯಲ್ಲಿಯೇ ಬಿಟ್ಟು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮನವಿ ಮಾಡಬಹುದು. ಎಷ್ಟು ಜನರು ಅದನ್ನು ಅನುಸರಿಸುತ್ತಾರೆ ನೋಡೋಣ. ಇಂದು ಕಾರು ಇಲ್ಲದ ಹುಡುಗನನ್ನು ಮದುವೆಯಾಗಲು ಹಿಂಜರಿಯುತ್ತಾರೆ. ಸಂಸದರಿಗೆ ಅಂತಹ ಸಾಮಾಜಿಕ ವಾಸ್ತವಗಳ ಬಗ್ಗೆ ಅರಿವು ಅಗತ್ಯ. ನಮಗೆ ಬೇಕಾಗಿರುವುದು ಹಣ, ಸಲಹೆಯಲ್ಲ” ಎಂದರು.

ಈ ಹಿಂದೆ ಸುರಂಗ ಯೋಜನೆಯನ್ನು ವಿರೋಧಿಸಿದ್ದ ತೇಜಸ್ವಿ ಸೂರ್ಯ, “ಸುಮಾರು 69,000 ಪ್ರಯಾಣಿಕರನ್ನು ಚಲಿಸಬಲ್ಲ ಮೆಟ್ರೋ ಮಾರ್ಗಕ್ಕೆ ಹೋಲಿಸಿದರೆ, ಸುರಂಗದಲ್ಲಿ ಒಂದು ದಿಕ್ಕಿನಲ್ಲಿ ಗಂಟೆಗೆ ಕೇವಲ 1,800 ಕಾರುಗಳು ಮಾತ್ರ ಚಲಿಸುತ್ತದೆ. ನಾವು ಹೆಚ್ಚಿನ ಕಾರುಗಳಲ್ಲ, ಹೆಚ್ಚಿನ ಜನರು ಚಲಿಸಲು ಸಾಧ್ಯವಾಗುವತ್ತ ಗಮನಹರಿಸಬೇಕು. ಸುರಂಗ ಮಾರ್ಗವು ಕೇವಲ ಒಂದು ಸಣ್ಣ ಭಾಗದ ಪ್ರಯಾಣಿಕರಿಗೆ ಮಾತ್ರ ಸೇವೆ ನೀಡುತ್ತದೆ. ಆದರೆ ಸಾರ್ವಜನಿಕ ಸಾರಿಗೆಯು ಬೆಂಗಳೂರಿನ ದೀರ್ಘಕಾಲದ ಸಂಚಾರ ಸಮಸ್ಯೆಗಳಿಗೆ ದೀರ್ಘಾವಧಿಯ ಪರಿಹಾರವನ್ನು ನೀಡುತ್ತದೆ” ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...