ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Date:

“ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ. ಬೇರೆಯವರು ಹೇಳುವ ಮುನ್ನವೇ ನಮ್ಮ ಸರ್ಕಾರ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸೂಚನೆ ನೀಡಿದೆ. ದೇವಾಲಯಗಳಲ್ಲಿ ಯಾವ ಪೂಜೆ, ಪುನಸ್ಕಾರ ಮಾಡಬೇಕೋ ಅದನ್ನು ಮಾಡಲಾಗುವುದು. ಬೇರೆಯವರಿಂದ ನಾವು ಹೇಳಿಸಿಕೊಳ್ಳುವ ಪ್ರಮೇಯವೇ ಇಲ್ಲ” ಎಂದರು.

“ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದ್ದಾನೆ, ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವುದೂ ಬೇಡ, ಒತ್ತಡ ಹಾಕುವುದೂ ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...