ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಶಂಕಿತನ ಗುರುತು ಪತ್ತೆ; ಶೀಘ್ರವೇ ಬಂಧನ: ಡಿ.ಕೆ. ಶಿವಕುಮಾರ್

Date:

“ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ನಡೆಯುವುದಕ್ಕೂ ಮುನ್ನ 28ರಿಂದ 30 ವರ್ಷ ವಯಸ್ಸಿನ ಯುವಕ ಬ್ಯಾಗ್‌ ಅನ್ನು ಕೆಫೆಯೊಳಗೆ ಇಟ್ಟಿದ್ದಾರೆ. ಆತನ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಗುರುತು ಪತ್ತೆಯಾಗಿದೆ. ದುಷ್ಕರ್ಮಿಯನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಸ್ಫೋಟ ನಡೆದ ವೈಟ್‌ಫೀಲ್ಢ್‌ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, ಇದೊಂದು ಅಲ್ಪ ತೀವ್ರತೆಯ ಸ್ಫೋಟವಾಗಿದೆ. ಈ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಬಾಂಬ್ ನಿಗ್ರಹ ದಳ, ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸುತ್ತಿದೆ. ಈ ಪ್ರಕರಣದ ತನಿಖೆಗೆ 7-8 ತಂಡಗಳನ್ನು ನೇಮಿಸಲಾಗಿದೆ. ಈ ಸ್ಫೋಟದಲ್ಲಿ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನ ನಾಗರಿಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ತಿಳಿಸಿದರು.

“12 ಗಂಟೆ ಸುಮಾರಿಗೆ 28-30 ವರ್ಷ ವಯಸ್ಸಿನ ವ್ಯಕ್ತಿ ಬಸ್‌ನಲ್ಲಿ ಬಂದಿಳಿದು, ಹೊಟೇಲ್‌ನಲ್ಲಿ ರವಾ ಇಡ್ಲಿ ಸೇವಿಸಿದ್ದಾನೆ. ಬಳಿಕ ಬ್ಯಾಗ್‌ ಅನ್ನು ಇಟ್ಟು ಹೋಗಿದ್ದಾನೆ. ಆತ ಹೋದ ಒಂದು ಗಂಟೆಯ ನಂತರ ಸ್ಫೋಟ ಸಂಭವಿಸಿದೆ. ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತನ ಚಹರೆ ಕೂಡ ದಾಖಲಾಗಿದೆ. ಶೀಘ್ರದಲ್ಲೇ ಪತ್ತೆ ಹಚ್ಚಿ ಬಂಧಿಸುತ್ತೇವೆ. ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದು, ತನಿಖಾಧಿಕಾರಿಗಳಿಗೆ ಮುಕ್ತ ಅವಕಾಶ ನೀಡಲಾಗಿದೆ.” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಕೇಂದ್ರದ ವೈಫಲ್ಯ ಕಾರಣವಲ್ಲವೇ ?

ಬಿಜೆಪಿ ನಾಯಕರು ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರು ಏನಾದರೂ ಟೀಕೆ, ಆರೋಪ ಮಾಡಲಿ. ನಾವು ನಮ್ಮ ನಗರ ಹಾಗೂ ರಾಜ್ಯದ ಘನತೆ ರಕ್ಷಣೆ ಮಾಡಲು ಪ್ರಯತ್ನಿಸುತ್ತೇವೆ. ಅವರ ಅಧಿಕಾರ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಏನೆಲ್ಲಾ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ. ಆದಷ್ಟು ಬೇಗ ಈ ಪ್ರಕರಣದ ರೂವಾರಿಗಳನ್ನು ಸೆರೆ ಹಿಡಿಯುತ್ತೇವೆ. ಪೊಲೀಸರು ಕಾನೂನು ಪಾಲನೆ ಮಾಡಲಿದ್ದಾರೆ. ಬೆಂಗಳೂರಿನ ಎಲ್ಲೆಡೆ ಕ್ಯಾಮೆರಾಗಳಿದ್ದು ಆದಷ್ಟು ಬೇಗ ಇವರನ್ನು ಪತ್ತೆ ಹಚ್ಚುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ತನಿಖೆ ಚುರುಕುಗೊಳಿಸಿದ ಪೊಲೀಸರು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನ ಗುರುತು ಪತ್ತೆಯಾಗಿದೆ. ಘಟನೆಯ ತನಿಖೆ ನಡೆಸುತ್ತಿರುವ ಪೊಲೀಸರು, ಹೋಟೆಲ್ ಹಾಗೂ ಸುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದು, ಅದರಲ್ಲಿ ಸುಮಾರು 25ರಿಂದ 30 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಈ ಬಾಂಬ್ ಇಟ್ಟಿರುವುದು ಸ್ಪಷ್ಟವಾಗಿ ಕಾಣಿಸಿದೆ. ಆತನ ಚಹರೆಯ ಗುರುತು ನಿಖರವಾಗಿ ಕಾಣಿಸುತ್ತಿದ್ದು, ಆತನನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...