ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣ ವಚನದ ಮೂಲಕ ಎಚ್‌ಡಿಕೆಗೆ ಡಿಸಿಎಂ ಡಿಕೆಶಿ ತಿರುಗೇಟು

Date:

“ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬೇರೆಯವರ ಸಂಗತಿ ಅವರಿಗೆ ಏಕೆ ಬೇಕು? ಲೋಕದ ಡೊಂಕು ನೀವೇಕೆ ತಿದ್ದುವಿರಿ ಎಂಬ ಬಸವಣ್ಣನವರ ವಚನದಂತೆ ಮೊದಲು ಅವರು ಅವರ ಮನೆಯನ್ನು ಸರಿಮಾಡಿಕೊಳ್ಳಲಿ. ಅದು ಬಿಟ್ಟು ಬೇರೆಯವರ ಬಗ್ಗೆ ಏಕೆ ಮಾತನಾಡುತ್ತೀರಾ? ನಿಮ್ಮಲ್ಲಿರುವ, ನಿಮ್ಮ ಮನೆಯಲ್ಲಿರುವ ಡೊಂಕನ್ನು ಮೊದಲು ತಿದ್ದಿಕೊಳ್ಳಿ. ನಾವೆಲ್ಲರೂ ಬಸವಣ್ಣನವರ ಈ ಮಾತನ್ನು ಪಾಲನೆ ಮಾಡಿಕೊಂಡು ನಡೆಯೋಣ. ರಾಜ್ಯಪಾಲರ ಬಳಿ ಹೋಗಿರುವ ಅವರಿಗೆ “ಆಲ್ ದ ಬೆಸ್ಟ್.”” ಎಂದರು.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಯಾವುದೇ ಸಂತ್ರಸ್ತೆಯರು ದೂರು ನೀಡಿಲ್ಲ ಎನ್ನುವ ಕೇಂದ್ರ ಮಹಿಳಾ ಆಯೋಗದ ಹೇಳಿಕೆ ಬಗ್ಗೆ ಕೇಳಿದಾಗ “ಈಗಲಾದರೂ ಕೇಂದ್ರ ಮಹಿಳಾ ಆಯೋಗ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದೆ ಎಂಬುದೇ ಸಮಾಧಾನದ ಸಂಗತಿ. ಆಯೋಗದ ಹೇಳಿಕೆಯ ವಿಚಾರ ನನಗೂ ಮಾಧ್ಯಮಗಳ ಮೂಲಕ ತಿಳಿಯಿತು. ಉತ್ತರ ನೀಡುವುದು ನನ್ನ ಕೆಲಸವಲ್ಲ, ಅದಕ್ಕೆ ಪೊಲೀಸ್ ಇಲಾಖೆ ಹಾಗೂ ತನಿಖಾಧಿಕಾರಿಗಳು ನೀಡಲಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಐಟಿ ಅಧಿಕಾರಿಗಳು ಯಾವುದೇ ಸಂತ್ರಸ್ತರು ಬಂದು ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ ಎಂದಾಗ “ಸಂತ್ರಸ್ತೆಯರಿಗೆ ಪ್ರಭಾವಿ ರಾಜಕಾರಣಿಗಳಿಂದ ಬೆದರಿಕೆ, ಅಪಾಯ ಇದೆ ಎನ್ನುವ ಭಯವಿದೆ. ಅವರು ಬಂದು ಏಕೆ ಭೇಟಿ ಮಾಡುತ್ತಾರೆ? ಎಂದು ಕೇಳಿದರು.

“ನಮ್ಮ ನಾಡು ಬಸವಣ್ಣನವರ ತತ್ವ, ಆದರ್ಶಗಳ ಆಧಾರದ ಮೇಲೆ ನಡೆಯುತ್ತಿದೆ. ಜಗತ್ತಿನಲ್ಲಿ ಮೊದಲನೇ ಸಂಸತ್ತು ಕಟ್ಟಿದವರು‌ ಬಸವಣ್ಣ. ಅವರು ಹಾಕಿಕೊಟ್ಟ ಬುನಾದಿ ಮೇಲೆ ನಾವು ಇಂದಿಗೂ ನಡೆಯುತ್ತಿದ್ದೇವೆ.

ನಮ್ಮ ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮವೂ “ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಎನ್ನುವ ತತ್ವದ ಮೇಲೆ ನಡೆಯುತ್ತಿದೆ. ಯಾವುದೇ ಜಾತಿ, ಧರ್ಮಗಳ ಬೇಧವಿಲ್ಲದೆ ಎಲ್ಲರಿಗೂ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಅನ್ನ ಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಮಹಿಳಾ ಸಬಲೀಕರಣದ ಯೋಜನೆ ಹಾಗೂ ಯುವನಿಧಿ ಕಾಯಕ ಕೇಂದ್ರೀತ ಯೋಜನೆಗಳ ಮೂಲಕ ಸಮಾನತೆಯಿಂದ ಕೂಡಿದ ಸಮಾಜ ನಿರ್ಮಾಣಕ್ಕೆ ಬಸವಣ್ಣನವರೇ ಸ್ಪೂರ್ತಿ” ಎಂದು ತಿಳಿಸಿದರು.

“ಬಸವಣ್ಣನವರ ಆದರ್ಶ ತತ್ವಗಳು ಎಲ್ಲೆಡೆ ಹರಡಲಿ ಎಂದು ಅವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯ ಮಾಡಿದ್ದೆವು. ಈಗ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಸಂಸ್ಕೃತಿಯೇ ನಮ್ಮ ದೇಶದ ಆಸ್ತಿ. ಬಸವಣ್ಣನವರ ಆಚಾರ, ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕೇವಲ ಮಾತಿನಲ್ಲಿ ಹೇಳದೆ ಕೃತಿ ರೂಪದಲ್ಲಿ ತರಬೇಕು ಎಂಬುದೇ ನಮ್ಮ ಆಶಯ. ಅವರ ತತ್ವ, ಸಿದ್ದಾಂತ ಹಾಗೂ ಅವರ ಹಾದಿಯಲ್ಲಿ ನಾವು ನಡೆಯಬೇಕು” ಎಂದು ಡಿ ಕೆ ಶಿವಕುಮಾರ್ ಕಿವಿಮಾತು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...