ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂದು ಭವಿಷ್ಯ ನುಡಿದ ಬೆಳಗಾವಿಯ ಜೈನ ಮುನಿ

Date:

ಡಿ ಕೆ ಶಿವಕುಮಾರ್ ಸಿಎಂ ಆಗ್ತಾರೆ, ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಮಂತ್ರಿಯಾಗ್ತಾರೆ… ಹೀಗಂತ ಭವಿಷ್ಯ ನುಡಿದವರು ಯಾವುದೇ ರಾಜಕೀಯ ಧುರೀಣರಲ್ಲ, ಬದಲಾಗಿ ಬೆಳಗಾವಿಯ ಜೈನ ಮುನಿಯೋರ್ವರು.

ಬೆಳಗಾವಿಯ ಹಲಗಾದ ಜೈನ್ ಬಸದಿಯ ಪ.ಪೂ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಈ ರೀತಿಯ ಹೇಳಿಕೆ ನೀಡಿದ್ದಾರೆ.

ಶಾಸಕ ವಿನಯ್ ಕುಲಕರ್ಣಿ ಅವರು ಬೆಳಗಾವಿ ತಾಲೂಕಿನ ಹಲಗಾದ ಗ್ರಾಮದಲ್ಲಿರುವ ಜೈನ ಬಸದಿಗೆ ಭೇಟಿ ನೀಡಿದ್ದು, ಈ ವೇಳೆ ಜೈನ ಮುನಿ ಸಿದ್ದಸೇನ ಮಹಾರಾಜರು, ‘ನೀವು ಸಚಿವರಾಗುತ್ತೀರಿ, ಧಾರವಾಡ ಜಿಲ್ಲಾ ಉಸ್ತುವಾರಿ ಆಗುತ್ತೀರಿ’ ಎಂದು ಹೇಳಿ ಆಶೀರ್ವಾದ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ವಿನಯ್ ಕುಲಕರ್ಣಿಗೆ ಆಶೀರ್ವಾದ ಮಾಡಿದ ಬಳಿಕ ಜೈನ ಮುನಿಗಳು, ‘ಡಿಕೆ ಶಿವಕುಮಾರ್ ಅವರಿಗೂ ಆಶೀರ್ವಾದ ಕೊಟ್ಟಿದ್ದೇನೆ. ಅವರೂ ಕೂಡ ಮುಖ್ಯಮಂತ್ರಿಯಾಗುತ್ತಾರೆ. ಡಿಕೆ ಶಿವಕುಮಾರ್ ಅವರು ಒಂದು ವರ್ಷ ಮೊದಲು ಇಲ್ಲಿಗೆ ಬಂದಿದ್ದರು. ಬರುವ ಸಮಯದಲ್ಲಿ ಸಿಎಂ ಆಗುತ್ತೀರಿ ಎಂದು ಆಶೀರ್ವಾದ ಕೊಟ್ಟಿದ್ದೆ. ಏನೋ ಒಂದು ಅವಕಾಶ ಇತ್ತು. ಆದರೆ, ಅದು ನಡೆದಿಲ್ಲ. ಈಗಲೂ ನನಗೆ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ’ ಎಂದು ಹೇಳಿಕೆ ನೀಡಿದ್ದಾರೆ.

ವಿನಯ್ ಕುಲಕರ್ಣಿಯವರು ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಎಲ್ಲ ಸಮುದಾಯಕ್ಕೆ ಬೇಕಾದ ವ್ಯಕ್ತಿ. ಈಗ ಶಾಸಕರಿದ್ದೀರಿ, ಬರುವ ದಿನಗಳಲ್ಲಿ ಸಚಿವರಾಗಿ ಎಂದು ಆಶೀರ್ವಾದ ಕೊಟ್ಟಿದ್ದೇನೆ.

ನಾಳೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಒಂದಲ್ಲ ನೂರು ಪರ್ಸಂಟ್ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಆಶೀರ್ವಾದ ಕೊಟ್ಟಿದ್ದೇನೆ. ಇದರ ಅರ್ಥ ಸಿದ್ದರಾಮಯ್ಯನವರನ್ನು ಕುರ್ಚಿ ಕೆಳಗೆ ಇಳಿಸಿ ಅಂತೇನಲ್ಲ. ಸಿದ್ದರಾಮಯ್ಯನವರಿಗೂ ನನ್ನ ಆಶೀರ್ವಾದ ಇದೆ. 2013ರಲ್ಲಿ ಸಿದ್ದರಾಮಯ್ಯನವರಿಗೆ ನಾನು ಆಶೀರ್ವಾದ ಮಾಡಿದ್ದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಇಬ್ಬರೂ ಕೂಡಿ ತಾವೇ ಅಡ್ಜಸ್ಟ್‌ಮೆಂಟ್ ಮಾಡಿ, ಅರ್ಧ ಅರ್ಧ ಅಧಿಕಾರ ಮಾಡುತ್ತಾರೆ ಎಂದು ತಿಳಿಸಿದರು.

ಸಿಎಂ ಕುರ್ಚಿಗೆ ಸಂಬಂಧಿಸಿ ಮಾಧ್ಯಮ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಜನರು ದಿನಕ್ಕೊಂದು ಅಭಿಪ್ರಾಯ ವ್ಯಕ್ತವಾಗುತ್ತಿದ್ದಾರೆ. ಈ ನಡುವೆಯೇ ಜೈನ ಮುನಿಗಳು, ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದು, ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...