ಡಿಕೆಶಿ ‘ಬೆಂಗಳೂರು ನಡಿಗೆ’; ಆರ್‌ಎಸ್‌ಎಸ್‌ ಬಟ್ಟೆ ಧರಿಸಿ ಶಾಸಕ ಮುನಿರತ್ನ ಹೈಡ್ರಾಮ

Date:

ಬೆಂಗಳೂರು ಜನರ ಸಮಸ್ಯೆ ಮತ್ತು ಅಭಿಪ್ರಾಯ ಆಲಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ನಡೆಸುತ್ತಿದ್ದಾರೆ. ಭಾನುವಾರ ಬೆಳಗ್ಗೆ ಮತ್ತಿಕೆರೆಯ ಬಳಿಕ ಜೆ.ಪಿ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆದಿದೆ. ಈ ವೇಳೆ, ಬಿಜೆಪಿ ಶಾಸಕ ಮುನಿರತ್ನ ಅವರು ಆರ್‌ಎಸ್‌ಎಸ್‌ ಬಟ್ಟೆ ಧರಿಸಿ ಹೈಡ್ರಾಮ ನಡೆಸಿದ್ದಾರೆ. ತಮ್ಮ ಮೇಲೆ ಡಿ.ಕೆ ಶಿವಕುಮಾರ್ ಕೈ ಎತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಿಕೆರೆಯ ಜೆ.ಪಿ ಪಾರ್ಕ್‌ ಮುನಿರತ್ನ ಪ್ರತಿನಿಧಿಸುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಇದೇ ಕಾರಣದಿಂದಾಗಿ, ಪಾರ್ಕ್‌ನಲ್ಲಿ ನಡೆಯುತ್ತದ್ದ ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ವೇಳೆಗೆ ಮುನಿರತ್ನ ಪಾರ್ಕ್‌ಗೆ ಬಂದಿದ್ದರು. ಅವರನ್ನು ಡಿ.ಕೆ ಶಿವಕುಮಾರ್ ನಿರ್ಲಕ್ಷ್ಯಸಿ, ವೇದಿಕೆ ಎಡೆಗೆ ಹೋದರು. ಮುನಿರತ್ನ ಜನರ ನಡುವೆ ಕುರ್ಚಿಯಲ್ಲಿ ಕುಳಿತರು ಎಂದು ಹೇಳಲಾಗಿದೆ.

ವೇದಿಕೆಯಿಂದ ಮುನಿರತ್ನ ಅವರನ್ನು ‘ಹೇಯ್, ಕಪ್ಪು ಟೋಪಿ ಎಂಎಲ್‌ಎ ಬಾರಯ್ಯ’ ಎಂದು ಡಿ.ಕೆ ಶಿವಕುಮಾರ್ ಕರೆದಿದ್ದಾರೆ. ಆದರೆ, ವೇದಿಕೆಗೆ ಬರಲು ನಿರಾಕರಿಸಿದ ಮುನಿರತ್ನ ಜನರ ನಡುವೆಯೇ ಕುಳಿತಿದ್ದಾರೆ. ಬಳಿಕ, ಪ್ರತಿಭಟನೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬೂಟು- ಅಸ್ತವ್ಯಸ್ತಗೊಂಡ ಭಾರತದ ಸಂಕೇತ

“ಇಂದೊಂದು ಸರ್ಕಾರಿ ಕಾರ್ಯಕ್ರಮ. ಆದರೆ, ಇಲ್ಲಿನ ಸಂಸದರು ಮತ್ತು ಶಾಸಕರನ್ನು ಆಹ್ವಾನಿಸಿಲ್ಲ. ಸೋತ ಅಭ್ಯರ್ಥಿಯನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡುತ್ತಿದ್ದಾರೆ. ಇದೊಂದು ರಾಜಕೀಯಕ್ಕಾಗಿ ನಡೆಯುತ್ತಿರುವ ಕಾರ್ಯಕ್ರಮ. ಜನರ ಸಮಸ್ಯೆ, ಕುಂದುಕೊರತೆ ಆಲಿಸುವ ಕಾರ್ಯಕ್ರಮವಲ್ಲ” ಎಂದು ಮುನಿರತ್ನ ಕೂಗಾಡಿದ್ದಾರೆ.

“ನಾನು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಅಲ್ಲಿಂದ ಇಲ್ಲಿಗೆ ಬಂದಿದ್ದೇನೆ. ನನಗೆ ಶಾಸಕ ಎನ್ನುವ ಗೌರವ ಕೊಡದೆ, ‘ಏ ಕರಿ ಟೋಪಿ ಎಂಎಲ್‌ಎ’ ಎಂದಿದ್ದಾರೆ. ರೀತಿ ದಬ್ಬಾಳಿಕೆ ಮಾಡುವುದು ಸರಿಯೇ” ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ಮುಂದುವರೆದು ಆರೋಪಗಳನ್ನು ಮಾಡಿದ ಮುನಿರತ್ನ, “ಸಚಿವರು (ಡಿಕೆಶಿ) ನನ್ನ ಮೇಲೆಯೇ ಕೈ ಎತ್ತಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಶಾಸಕನಾಗಿರುವ ನನ್ನನ್ನೇ ಅವಮಾನಿಸಿದ್ದಾರೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...