ರಾಹುಲ್ ಗಾಂಧಿ ಅನರ್ಹತೆ ಹಿಂದೆ ರಾಜಕೀಯ ದ್ವೇಷ ಎದ್ದು ಕಾಣುತ್ತಿದೆ: ಡಿ ಕೆ ಶಿವಕುಮಾರ್ ಕಿಡಿ

Date:

  • ದೇಶದಲ್ಲಿ ಬಿಜೆಪಿಗೆ ಮತ್ತು ಕಾಂಗ್ರೆಸ್ಸಿಗೆ ಬೇರೆ ಬೇರೆ ಕಾನೂನು ಇದೆಯಾ: ಡಿಕೆಶಿ
  • ರಾಹುಲ್‌ ಅನರ್ಹವು ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆದ ದಾಳಿ

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿ ಕಾರಿದರು.

ಸದಾಶಿವನಗರ ನಿವಾಸ ಬಳಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ‘ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಮತ್ತು ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ. ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯಾ”ಎಂದು ಪ್ರಶ್ನಿಸಿದರು.

“ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆದ ದಾಳಿ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೇ. 95 ರಷ್ಟು ಹಾಲಿ ಶಾಸಕರಿಗೆ ಟಿಕೆಟ್

“ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು. ಆ ಮೂಲಕ ಚಂದ್ರನ ಹಿಂದೆ ಸೂರ್ಯನ ಬೆಳಕು ಆಗಮಿಸಲಿದೆ” ಎಂದು ಕಾವ್ಯಾತ್ಮಕವಾಗಿ ಹೇಳಿದರು.

‘ಶೇ. 95 ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ. ಧ್ರುವನಾರಾಯಣ ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ” ಎಂದರು.

ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಬಗ್ಗೆ ಕೇಳಿದಾಗ, “ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ” ಎಂದು ತಿಳಿಸಿದರು.

ಕ್ಷೇತ್ರ ಆಯ್ಕೆ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಪ್ರಶ್ನಿಸಿದಾಗ, ‘ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಛಿಸಿದ್ದು, ಪಕ್ಷ ಟಿಕೆಟ್ ನೀಡಿದೆ. ಎರಡನೇ ಕ್ಷೇತ್ರವಾಗಿ ಕೋಲಾರ ಮತ್ತು ಬದಾಮಿ ಸಿದ್ದರಾಮಯ್ಯ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್ ಕೇಳಿ” ಎಂದಷ್ಟೇ ಹೇಳಿದರು.

ಮೀಸಲಾತಿ ಬೋಗಸ್

ಮೀಸಲಾತಿ ಹೆಚ್ಚಳ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಇದೆಲ್ಲವೂ ಬೋಗಸ್ ಘೋಷಣೆ. ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...