ಯಾರಿಗೂ ಒಂದು ರೂಪಾಯಿ ಲಂಚ ನೀಡಬೇಡಿ: ಡಿಕೆ ಶಿವಕುಮಾರ್ ಕರೆ

Date:

  • ಲಂಚ ಕೇಳುವವರ ವಿರುದ್ಧ ದೂರು ನೀಡಲು ದೂರವಾಣಿ ಆರಂಭಿಸುತ್ತೇವೆ
  • ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಕೆ ಶಿವಕುಮಾರ್ ಸಲಹೆ

ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಹಾಕಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಕನಕಪುರದಲ್ಲಿ ನಡೆದ ಜನಸಂಪರ್ಕ ಸಭೆ‌ ನಡೆಸಿ ಮಾತನಾಡಿದ ಅವರು, “ಕಂದಾಯ, ಪಂಚಾಯಿತಿ ಅಧಿಕಾರಿ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ” ಎಂದರು.

“ಜನರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ನಮ್ಮ ತಾಲ್ಲೂಕಿನಲ್ಲಿ ಉತ್ತಮವಾದ ಆಡಳಿತ ನಡೆಯಬೇಕು. ಈ ಹಿಂದಿನ ತಹಶೀಲ್ದಾರ್ ಇದ್ದಾಗ ಒಂದಷ್ಟು ತೊಂದರೆಗಳು ಇದ್ದವು. ಕನಕಪುರ- ರಾಮನಗರ ಜಿಲ್ಲೆಯ ಜನರ ಎಲ್ಲ ಜಮೀನುಗಳಿಗೆ ಸೂಕ್ತ ದಾಖಲೆಗಳನ್ನು ಅಧಿಕಾರಿಗಳು ಮಾಡಿಕೊಡಬೇಕು. ಡ್ರೋನ್ ತಂತ್ರಜ್ಞಾನದ ಮೂಲಕ ಜಮೀನುಗಳ ಸರ್ವೇ ಕಾರ್ಯ ನಡೆಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತಿದೆ, ಸ್ವಲ್ಪ ತಡವಾಗಬಹುದು ಆದರೆ ಆದಷ್ಟು ಬೇಗ ಜನರ ಸೇವೆಗೆ ಸಿಗಲಿದೆ. ತಾಯಿ- ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿ ಆರೋಗ್ಯದ ವಿಚಾರದಲ್ಲಿ ಜನರಿಗೆ ಉತ್ತಮ ಸೌಲಭ್ಯ ದೊರೆಯುತ್ತಿದೆ. ಆದಷ್ಟು ಬೇಗ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ತುಂಬಲಾಗುವುದು” ಎಂದು ತಿಳಿಸಿದರು.

ಜಮೀನು ಮಾರಾಟ ಬೇಡ

“ಮುಂದಿನ ದಿನಗಳಲ್ಲಿ ನಿಮ್ಮ ಜಮೀನುಗಳಿಗೆ ಒಳ್ಳೆಯ ಬೆಲೆ ಬರುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭೂಮಿಗಳನ್ನು ಮಾರಾಟ ಮಾಡಿಕೊಳ್ಳಬೇಡಿ. ಕನಕಪುರ, ಸಾತನೂರು, ಕೋಡಿಹಳ್ಳಿ, ದೊಡ್ಡ ಆಲಹಳ್ಳಿ ಇಲ್ಲೆಲ್ಲಾ ಮೊದಲು ಭೂಮಿಯ ಬೆಲೆ ಎಷ್ಟಿತ್ತು ಈಗ ಎಷ್ಟಿದೆ ಎಂದು ನೀವೆ ಅಂದಾಜು ಮಾಡಿ. ನಾನು ಏನೇನು ಮಾಡಲು ಸಾಧ್ಯ ಆ ಕೆಲಸವನ್ನು ಮಾಡಿದ್ದೇನೆ. ಇದಕ್ಕೆ ಎಷ್ಟೊಂದು ವಿವಾದ ಮಾಡಿದರು. ನಾನು ನಿಮ್ಮ ಗೌರವ ಉಳಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇನೆ” ಎಂದರು.

1500ಕ್ಕೂ ಹೆಚ್ಚು ಅರ್ಜಿ ವಿಲೇವಾರಿ

ಡಿ ಕೆ ಶಿವಕುಮಾರ್‌ ಅವರು ಬೆಳಗಿನಿಂದ ಸಂಜೆವರೆಗೂ ಇಡೀ ದಿನ ಕನಕಪುರದ ಅಂಬೇಡ್ಕರ್ ಭವನದಲ್ಲಿ ಕುಳಿತು ಸುಮಾರು 1500 ಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಿದರು.

ಶ್ರೀರಕ್ಷಾ ಎಂಬ ಯುವತಿ, ಕೆಲಸ ಮತ್ತು ವಿದ್ಯಾಭ್ಯಾಸ ನಿಮಿತ್ತ ಬಹಳಷ್ಟು ಮಂದಿ ನಿತ್ಯ ಬೆಂಗಳೂರಿಗೆ ಓಡಾಡುತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಅಡಿ ಬರುವ ದುಡ್ಡು, ಮೆಟ್ರೋ ರೈಲಿಗೆ ಖರ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿಂದ ಹಾರೋಹಳ್ಳಿವರೆಗೆ ಇರುವ ಬಿಎಂಟಿಸಿ ಬಸ್ ಸೌಲಭ್ಯವನ್ನು ಕನಕಪುರದವರೆಗೆ ವಿಸ್ತರಿಸಿ. ಬೆಳಗ್ಗೆ ಮತ್ತು ಸಂಜೆ 20 ಬಸ್ ಗಳ ಸಂಚಾರ ವ್ಯವಸ್ಥೆ ಮಾಡಿ ಎಂದು ಕೇಳಿಕೊಂಡರು. ಡಿಸಿಎಂ ಅವರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡುವುದಾಗಿ ಭರವಸೆ ನೀಡಿದರು.

ಟಿ ಬೇಕುಪ್ಪೆಯ ಹೊನ್ನೇಗೌಡ, ಸಂಬೇಗೌಡನ ದೊಡ್ಡಿಯ ಮರೀಗೌಡ ತಾವು ಅಂಗವಿಕಲರಾಗಿದ್ದು, ತ್ರಿಚಕ್ರ ವಾಹನ ಕೊಡಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಡಿಸಿಎಂ ಅವರು ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಕನಕಪುರದ 25 ಮಂದಿ ಪೌರಾಕಾರ್ಮಿಕರು ತಮಗೊಂದು ಮನೆ ಬೇಕೆಂದು ಮನವಿ ಮಾಡಿದಾಗ ಸಕಾರಾತ್ಮಕವಾಗಿ ಸ್ಪಂದಿಸಿದರು. ಮತ್ತೊಂದು ಸುತ್ತು ಸಮಾಲೋಚನೆ ನಡೆಸಿ ಮನೆ ಸ್ವರೂಪ ತೀರ್ಮಾನಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...