ಜನಾಂದೋಲನ ಸಭೆ | ನನ್ನ ನಾಯಕತ್ವಕ್ಕೆ 135 ಸೀಟು, ಎಚ್‌ಡಿಕೆ ನಾಯಕತ್ವಕ್ಕೆ 19 ಸೀಟು: ಡಿಕೆಶಿ ತಿರುಗೇಟು

Date:

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ ಸಂಘಟನೆಗೂ ಒಂದು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು” ಎಂದು ಲೇವಡಿ ಮಾಡಿದರು.

ಜನ ನನ್ನ ನಾಯಕತ್ವಕ್ಕೆ 135 ಸೀಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಿಸ್ಟರ್ ಕುಮಾರಸ್ವಾಮಿ, ನಾನು ತಿಹಾರ್ ಜೈಲನ್ನೂ ನೋಡಿ ಆಗಿದೆ, ನೀವು ನನ್ನ ಹಾಗೂ ನನ್ನ ಕುಟುಂಬದ ಮೇಲೆ ಹಾಕಿರುವ ಕೇಸ್ ಗಳನ್ನು ನೋಡಿ ಆಯಿತು. ಇದಾದ ನಂತರವೇ ಜನ ಈ ಡಿ.ಕೆ. ಶಿವಕುಮಾರ್ ನಾಯಕತ್ವಕ್ಕೆ 135 ಸೀಟುಗಳನ್ನು ಕೊಟ್ಟು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಿನ್ನ ನಾಯಕತ್ವಕ್ಕೆ ಜನ ಬರೀ 19 ಸೀಟು ಕೊಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಮೌನವೇಕೆ?

“ಕುಮಾರಸ್ವಾಮಿ ಅವರು ನಾನು ಪೆನ್ ಡ್ರೈವ್ ಬಿಡುಗಡೆ ಮಾಡಿದೆ ಎಂದು ಸುಳ್ಳು ಆರೋಪ ಮಾದಿದ್ದರು. ಈ ಡಿ.ಕೆ. ಶಿವಕುಮಾರ್ ಅಂತಹ ನೀಚ ರಾಜಕಾರಣ ಮಾಡುವುದಿಲ್ಲ ಎಂದು ರಾಜ್ಯದ ಜನತೆಗೆ ಗೊತ್ತಿದೆ. ಈಗ ಕುಮಾರಸ್ವಾಮಿ ಅವರೇ ಈ ಪೆನ್ ಡ್ರೈವ್ ಗಳನ್ನು ಬಿಟ್ಟಿರುವುದು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರೇಕೆ ಚರ್ಚೆ ಮಾಡುತ್ತಿಲ್ಲ. ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುವ ದೇಶದ ಪ್ರಧಾನಮಂತ್ರಿಗಳು ಈ ಪ್ರಕರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

ನಿಮ್ಮ ತಂದೆ ರಾಜೀನಾಮೆ ಕೊಟ್ಟಿದ್ದೇಕೆ?

“ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು. ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿದ್ದೇಕೆ?” ಎಂದು ಕುಟುಕಿದರು.

ದೇವೇಗೌಡರ ಕುಟುಂಬದ ಭೂಕಬಳಿಕೆ ಬಗ್ಗೆ ಬಿಜೆಪಿ ಜಾಹೀರಾತು

“ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಯವರು ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು. ಮುಡಾದಲ್ಲಿ ಆ ಕುಟುಂಬ ಮಾಡಿದ ಅಕ್ರಮ ನಿವೇಶನಗಳ ಬಗ್ಗೆ ಕುಮಾರಸ್ವಾಮಿ ಅವರ ಅರ್ಜಿ ಸಮೇತ ಪ್ರಕಟಣೆ ಮಾಡಿದ್ದಿರಿ. ಈ ಬಗ್ಗೆ ಉತ್ತರ ನೀಡುವಿರಾ ಯಡಿಯೂರಪ್ಪನವರೇ? ಅಶೋಕಣ್ಣ, ಸಿ ಟಿ ರವಿ ಇದಕ್ಕೆ ಉತ್ತರ ಕೊಡ್ರಪ್ಪ? ನಿಮ್ಮ ಪಕ್ಷ ನೀಡಿರುವ ಪ್ರಕಟಣೆ ಬಗ್ಗೆ ಚರ್ಚೆ ಮಾಡಿ” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...