ಕುಮಾರಸ್ವಾಮಿ ಹುಚ್ಚರಾಗಿದ್ದು, ತಾಳ್ಮೆ ಕಳೆದುಕೊಂಡಿದ್ದಾರೆ: ಡಿ ಕೆ ಶಿವಕುಮಾರ್‌ ತಿರುಗೇಟು

Date:

  • ಕುಮಾರಸ್ವಾಮಿಯ ಪೊಗರು, ಬ್ಯಾಕ್ ಮೇಲ್‌ಗೆ ನಾನು ಹೆದರುವುದಿಲ್ಲ
  • ಲೆಕ್ಕ ಬೇಕೇ ಕೊಡುತ್ತೇನೆ, ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ: ಡಿಕೆಶಿ

ಪೊಗರು ಮಾತುಗಳು, ಬ್ಲ್ಯಾಕ್ ಮೇಲ್‌ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ, ಕನಕೋತ್ಸವ ಮಾಡಿದಾಗ ಅನುಮತಿ ಪಡೆದು ಕರೆಂಟ್ ಬಳಸಿದ್ದರೆ, ಲುಲು ಮಾಲ್ ಸೇರಿದಂತೆ ದೊಡ್ಡ ಕಟ್ಟಡ ಕಟ್ಟುವಾಗ ಎಷ್ಟು ಕರೆಂಟ್ ಎಳೆದುಕೊಂಡಿಲ್ಲ, ಅದಕ್ಕೆ ಲೆಕ್ಕ ಕೊಡುವರೇ? ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

“ಕುಮಾರಸ್ವಾಮಿ ಹುಚ್ಚರಾಗಿದ್ದಾರೆ. ಅವರು ತಮ್ಮ ತಾಳ್ಮೆ ಕಳೆದುಕೊಂಡಿದ್ದಾರೆ. ಹತಾಶೆಯಲ್ಲಿ ಅವರು ಬಾಯಿಗೆ ಬಂದದ್ದು ಮಾತನಾಡುತ್ತಿದ್ದಾರೆ. ಅವರು ಏನೇನು ಕೇಳುತ್ತಾರೆ, ಅವರ ಆಚಾರ ವಿಚಾರ, ಮಾತುಗಳಿಗೆ ರಾಜ್ಯದ ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಇನ್ನು ಬೇಕಾದರೆ ಆ ಉತ್ತರವನ್ನು ನಾನು ಕೊಡುತ್ತೇನೆ. ಅವರು ಕೇಳುತ್ತಿರುವ ಲೆಕ್ಕಾಚಾರದ ಪಟ್ಟಿ ಕೊಡೋಣ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿ ಪೂರ್ವ ತಯಾರಿ ಇಲ್ಲದೆ ಆರೋಪ ಮಾಡ್ತಿದ್ದಾರಾ?

ನಿಮ್ಮ ಮಾಲ್ ಅನ್ನು ಖರಾಬು ಭೂಮಿಯಲ್ಲಿ ಕಟ್ಟಿದ್ದೀರಿ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಒಂದು ಸಂಸ್ಥೆಗೆ ಸೇರಿದ್ದು. ಆ ಸಂಸ್ಥೆಯವರು ದಾಖಲೆ ಮುಂದಿಟ್ಟು ಟೆಂಡರ್ ಕರೆದಿದ್ದರು. ಅದನ್ನು ನಮ್ಮ ಸ್ನೇಹಿತರು ಖರೀದಿ ಮಾಡಿದ್ದರು. ಅವರಿಂದ ನಾನು ಖರೀದಿ ಮಾಡಿ ಜಂಟಿ ಸಹಯೋಗದಲ್ಲಿ ಮಾಲ್ ಕಟ್ಟಿದ್ದೇವೆ. ಅದರಲ್ಲಿ ಏನಾದರೂ ತಪ್ಪಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ. ನನ್ನನ್ನು ಈ ರೀತಿ ನಿಯಂತ್ರಿಸಲು ಅವರು ಈಗಾಗಲೇ ಬೇಕಾದಷ್ಟು ಪ್ರಯತ್ನ ಮಾಡಿದ್ದಾರೆ. ಅವರ ತಂದೆಯವರು ಕೂಡ 10-15 ವರ್ಷಗಳ ಹಿಂದೆಯೇ ಜಯರಾಜ್ ಎಂಬ ಅಧಿಕಾರಿ ಮೂಲಕ ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದರು. ಈಗಲೂ ಯಾವುದೇ ರೀತಿಯ ತನಿಖೆ ಮಾಡಿಸಲಿ. ನಾನು ಎಲ್ಲದಕ್ಕೂ ಸಿದ್ಧ” ಎಂದರು.

“ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಯಾಗಿ ಪ್ರತಿ ಸಂದರ್ಭದಲ್ಲೂ ನನ್ನ ಆಸ್ತಿ ವಿವರ ಘೋಷಿಸಿದ್ದೇನೆ. ನಾನು ಅಕ್ರಮವಾಗಿ ಕರೆಂಟ್ ಬಳಸಿರುವ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ನಾನು ಕಟ್ಟಿರುವ ಮಾಲ್ ಅನ್ನು ನನ್ನ ಪಾರ್ಟ್ನರ್ ಶೋಭಾ ಡೆವಲಪ್ಪರ್ಸ್ ಅವರು ಕಟ್ಟಿದ್ದು, ನೀವು ಎಷ್ಟು ಕರೆಂಟ್ ಬಳಸಿದ್ದೀರಿ ಎಂದು ದಾಖಲೆ ಸಮೇತ ತಂದು ತೋರಿಸಿ ಎಂದು ಅವರಿಗೆ ಹೇಳುತ್ತೇನೆ” ಎಂದು ತಿಳಿಸಿದರು.

ಜಮೀರ್ ಅಹ್ಮದ್ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕೇಳಿದಾಗ, “ನನಗೆ ಈ ವಿಚಾರ ತಿಳಿದಿಲ್ಲ. ತಿಳಿದ ನಂತರ ಮಾತನಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...