ಕುಮಾರಸ್ವಾಮಿಗೆ ಕೆಲಸ ಇಲ್ಲ, ಪ್ರಚಾರಕ್ಕಾಗಿ ಆರೋಪ ಮಾಡುತ್ತಾರೆ: ಡಿ ಕೆ ಸುರೇಶ್ ಲೇವಡಿ

Date:

  • ‘ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ’
  • ‘ಕುಮಾರಸ್ವಾಮಿಗೆ ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ’

ಮಾಜಿ ಮುಖ್ಯಮಂತ್ರಿ ಎಚ್ ​ಡಿ ಕುಮಾರಸ್ವಾಮಿ ಪ್ರಚಾರಕ್ಕಾಗಿ ಆರೋಪ ಮಾಡಿದರೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಭ್ರಷ್ಟಾಚಾರ ಆರೋಪ ಮಾಡಿ ಪ್ರಚಾರದಲ್ಲಿ ಇರಬೇಕು ಅಂತ ಕೆಲವರು ಬಯಸುತ್ತಾರೆ ಎಂದು ಸಂಸದ ಡಿ ಕೆ ಸುರೇಶ್‌ ಕುಟುಕಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಗುತ್ತಿಗೆದಾರರು ಎರಡೂವರೆ ವರ್ಷದಿಂದ ಬಿಲ್ ಪೆಂಡಿಂಗ್ ಇದೆ ಅಂದಿದ್ದಾರೆ. ಕೆಲಸ ಮಾಡಿದವರಿಗೆ ಹಣ ಸಿಗುತ್ತದೆ ಎಂದು ಸರ್ಕಾರವೇ ಸ್ಪಷ್ಟಪಡಿಸಿದೆ. ಆದರೆ, ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

‘ಕುಮಾರಸ್ವಾಮಿಗೆ ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ. ಇನ್ನು ನಾಲ್ಕು ವರ್ಷ ಬಿಟ್ಟೇ ಕ್ಷೇತ್ರಕ್ಕೆ ಹೋಗುತ್ತಾರೆ. ಇಲ್ಲಿಯೇ ಇದ್ದು ಏನಾದರೂ ಮಾಡಬೇಕಲ್ಲ, ಕೆಲಸ ಇಲ್ಲದಾಗ ರಾಜಕೀಯ ಮಾಡಲೇಬೇಕಲ್ಲವೆ? ಹೀಗೇ ಬದುಕಬೇಕಲ್ಲ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳಪೆ ಕಾಮಗಾರಿಗೆ 40% ಕಮಿಷನ್ ಕಾರಣ ಎಂಬ ಆರೋಪಗಳಿತ್ತು. ಹೀಗಾಗಿ ತನಿಖೆ ಮಾಡಿ ಹಣ ಬಿಡುಗಡೆ ಮಾಡುವುದಾಗಿ ಸಿಎಂ ಡಿಸಿಎಂ ಹೇಳಿದ್ದಾರೆ. ಇರಿಗೇಷನ್, ಪಿಡಬ್ಲ್ಯೂಡಿ ಸೇರಿ ಯಾವ ಇಲಾಖೆಯಲ್ಲೂ ಹಣ ಕೊಟ್ಟಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್: ಮಾಜಿ ಶಾಸಕ ಸುರೇಶ್‌ ಗೌಡ ಆರೋಪ

“ಸರ್ಕಾರದ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿವೆ. ಇದರ ಗಮನ ಡೈವರ್ಷನ್ ಮಾಡಬೇಕು ಅಂತ ಆರೋಪಗಳು ಮಾಡುತ್ತಿದ್ದಾರೆ. ಅಕ್ಕಿ ಯಾಕೆ ಅಂತ ಬಾಯಿ ಬಡಿದುಕೊಂಡರು. ಈಗ ಅಕ್ಕಿ ಕೊಟ್ಟಾಯ್ತು. ಕರೆಂಟ್ ಯಾಕೆ ಅಂದರು? ಕರೆಂಟ್ ಕೊಟ್ಟಾಯ್ತು. ಎಲ್ಲ ಕಾರ್ಯಕ್ರಮ ಅನುಷ್ಠಾನ ಆಗುತ್ತಿರುವಾಗ ಏನು ಮಾಡಬೇಕು ಅವರು? ಆರೋಪ ಮಾಡಿ ಓಡಿಹೋಗುವವರನ್ನು ಬಹಳಷ್ಟು ಜನರನ್ನು ನೋಡಿದ್ದೇವೆ” ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್​​ಗೆ ಸಮಾಜ ಸೇವೆಯಿಂದ ಸುಧಾಮ್ ದಾಸ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದಾರೆ. ಈ ವಿಚಾರವಾಗಿಯೂ ಪ್ರತಿಕ್ರಿಯಿಸಿ, “ನನ್ನ ಹೆಸರಿಗೂ ವಿರೋಧ ಇದೆಯಪ್ಪ. ಎಲ್ಲವನ್ನು ಹೈಕಮಾಂಡ್, ಪಕ್ಷ ತೀರ್ಮಾನ ಮಾಡುತ್ತದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...