ಮೋದಿ, ಅಮಿತ್ ಶಾರಂತಹ ‘ಸಾಮಾನ್ಯ ವ್ಯಕ್ತಿಗಳಿಗೆ’ ಡಿಎಂಕೆ ಹೆದರಲ್ಲ: ಎ ರಾಜಾ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ‘ಸಾಮಾನ್ಯ ವ್ಯಕ್ತಿಗಳಿಗೆ’ ಡಿಎಂಕೆ ಹೆದರಲ್ಲ. ಬಿಜೆಪಿ ತಮಿಳುನಾಡಿನಲ್ಲಿ ನೆಲೆಗೊಳ್ಳದಂತೆ ನೋಡಿಕೊಳ್ಳುವ ಬಿಜೆಪಿ ವಿರೋಧಿ ಸಿದ್ಧಾಂತ ನಮ್ಮ ರಾಜ್ಯದಲ್ಲಿದೆ ಎಂದು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಹಿರಿಯ ನಾಯಕ, ಸಂಸದ ಎ ರಾಜಾ ಸೋಮವಾರ ಹೇಳಿದರು.

ಭಾನುವಾರ ಮಧುರೈನಲ್ಲಿ ಆಡಳಿತಾರೂಢ ಡಿಎಂಕೆ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ವರ್ಷ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ? ತಮಿಳುನಾಡು | ಬಿಜೆಪಿ ನಾಯಕನ ಕೊಲೆ; ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯೆಯಾಗಿ ಡಿಎಂಕೆ ನಾಯಕ ರಾಜಾ ಅವರು ಸೋಮವಾರ ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ಬಿಜೆಪಿಯ ಹಿರಿಯ ನಾಯಕರ ಹೇಳಿಕೆಗಳು ಶುದ್ಧ ಸುಳ್ಳು, ಅಸಹ್ಯಕರ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ದೆಹಲಿ ಅಥವಾ ಮಹಾರಾಷ್ಟ್ರವಲ್ಲದೆ ದ್ರಾವಿಡ ಸಿದ್ಧಾಂತವನ್ನು ಎದುರು ಹಾಕಿ ಬಿಜೆಪಿ ತಮಿಳುನಾಡಿನಲ್ಲಿ ನೆಲೆಗೊಳ್ಳಲು ಸಾಧ್ಯವಿಲ್ಲ” ಎಂದರು.

“ಅರವಿಂದ್ ಕೇಜ್ರಿವಾಲ್(ದೆಹಲಿಯಲ್ಲಿ) ಅಧಿಕಾರಕ್ಕೆ ಹೇಗೆ ಬಂದರು? ಅವರು ಭ್ರಷ್ಟಾಚಾರವನ್ನು ಮಾತ್ರ ವಿರೋಧಿಸಿದರು. ಅವರಿಗೆ ಸಿದ್ಧಾಂತವಿದೆಯೇ? ಅವರ ಹಿಂದೆ ನಾಯಕರು ಇದ್ದರಾ? ನಾವು ಅಮಿತ್ ಶಾ ಮತ್ತು ಮೋದಿಗೆ ಹೆದರುವುದಿಲ್ಲ. ಅವರು ಸಾಮಾನ್ಯ ವ್ಯಕ್ತಿಗಳು” ಎಂದು ತಿಳಿಸಿದರು.

“ಅವರ(ಮೋದಿ-ಶಾ) ರಾಜಕೀಯ ಸಿದ್ಧಾಂತವು ಎಲ್ಲೆಡೆ ಆಕ್ರಮಣ ಮಾಡಿ ಗೆಲ್ಲುತ್ತಿದೆ. ಆದರೆ ಅದು ಇಲ್ಲಿ(ತಮಿಳುನಾಡು) ಗೆಲ್ಲಲು ಏಕೆ ಸಾಧ್ಯವಾಗುತ್ತಿಲ್ಲ? ಏಕೆಂದರೆ ಬಿಜೆಪಿಯ ಸಿದ್ಧಾಂತಕ್ಕೆ ನಮ್ಮಲ್ಲಿ ಪರ್ಯಾಯ ಸಿದ್ಧಾಂತವಿದೆ. ದ್ರಾವಿಡ ಸಿದ್ಧಾಂತವು ಇರುವವರೆಗೆ ಅವರು ತಮಿಳುನಾಡಿನಲ್ಲಿ ನೆಲೆಗೊಳ್ಳಲು ಅವಕಾಶ ನೀಡಿಲ್ಲ. ನಾವು ದೆಹಲಿ, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿಲ್ಲ. ನಾವು ತಮಿಳುನಾಡು ಜನರು, ನಾವು ದ್ರಾವಿಡರು. ಬಿಜೆಪಿ ಇಲ್ಲಿಗೆ ಬರಲು ಸಾಧ್ಯವಿಲ್ಲ” ಎಂದು ತಿರುಗೇಟು ನೀಡಿದರು.

2026ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಯಾರಿ ನಡೆಸುತ್ತಿದೆ. ಆಡಳಿತಾರೂಢ ಡಿಎಂಕೆ ವಿರುದ್ಧ ಬಿಜೆಪಿ, ಬಿಜೆಪಿ ವಿರುದ್ಧ ಡಿಎಂಕೆ ನಿರಂತರ ವಾಗ್ದಾಳಿ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...