ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

Date:

  • ಹಿಂದಿನ ಸರ್ಕಾರದ ಜನಪರ ಯೋಜನೆ ಮುಂದುವರೆಸಲು ಸಿಎಂಗೆ ಮನವಿ
  • ಸಿದ್ದರಾಮಯ್ಯಗೆ ಪತ್ರ ಮೂಲಕ ಕೋರಿಕೊಂಡ ಮಾಜಿ ಸಿಎಂ ಬೊಮ್ಮಾಯಿ

ಕಾಂಗ್ರೆಸ್‌ನ ಗ್ಯಾರಂಟಿ ಜಾರಿ ಸಲುವಾಗಿನ ಆರ್ಥಿಕತೆ ಹೊಂದಾಣಿಕೆ ಮಾಡಿಕೊಳ್ಳಲು, ಸರ್ಕಾರ ಇತರೆ ಯೋಜನೆಗಳ ಅನುದಾನಕ್ಕೆ ಕತ್ತರಿ ಹಾಕದಿರುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಬಸವರಾಜ ಬೊಮ್ಮಾಯಿ, ಹಳೆಯ ಸರ್ಕಾರ ರೂಪಿಸಿದ್ದ ಯೋಜನೆಗಳನ್ನೂ ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಇತರೆ ಯೋಜನೆಗಳ ಅನುದಾನಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಕೇಳಿಕೊಂಡಿದ್ದಾರೆ.

ಅವರ ಪತ್ರ ಸಾರಾಂಶ ಹೀಗಿದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಪೌಷ್ಟಿಕ ಕಾರ್ಯಕ್ರಮಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಎಸ್ಸಿಪಿ, ಟಿಎಸ್ ಪಿ ಅನುದಾನವನ್ನು ಕಡಿತಗೊಳಿಸಬಾರದು, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿದ ಹಾಸ್ಟೆಲ್ ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕೆ ಅನುದಾನ ಕಡಿತಗೊಳಿಸಬಾರದು.

ಹಾಗೂ ಗ್ರಾಮೀಣ ಮೂಲಭೂತ ಸೌಕರ್ಯ ಯೋಜನೆಗಳಾದ ಜಲಜೀವನ ಮಿಷನ್, ಗೃಹ ನಿರ್ಮಾಣ, ನೀರಾವರಿ ಯೋಜನೆಗಳು ಹಾಗೂ ಪಂಚಾಯತಿಗೆ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಬೇಕು.ಸಿಎಂ ಲೆಟರ್‌

ಅದೇ ರೀತಿ ರಾಜ್ಯ, ಜಿಲ್ಲಾ ರಸ್ತೆಗಳ ನಿರ್ಮಾಣ ಪ್ರಗತಿ ಮೊಟಕುಗೊಳಿಸಬಾರದು ಹಾಗೂ ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸುವುದು, ರಾಜ್ಯದ ಹಿತದೃಷ್ಟಿಯಿಂದ ಅತ್ಯಂತ ಅವಶ್ಯವಿದೆ.

ನಗರ ಪ್ರದೇಶಗಳಲ್ಲಿ ನಗರೋತ್ಥಾನ ಸ್ಮಾರ್ಟ್ ಸಿಟಿ ಯೋಜನೆ ಮೆಟ್ರೊ, ಸಬರಬನ್ ಯೋಜನೆಗಳನ್ನು
ಮುಂದುವರೆಸುವುದು ಬೆಂಗಳೂರಿನ ಅಭಿವೃದ್ಧಿಗೆ ಅತಿ ಅವಶ್ಯವಿರುತ್ತದೆ. ಕಾಣಿಸಿದ ವಿಷಯಗಳ ಜೊತೆಗೆ ಇತರ ಇಲಾಖೆಗಳ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವುದು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಅವಶ್ಯಕತೆ ಇದೆ.

ಇದು ರಾಜ್ಯ ಸರ್ಕಾರದ ಜವಾಬ್ದಾರಿ, ಈ ಬಗ್ಗೆ ಅನುದಾನವನ್ನು ಖಚಿತ ಪಡಿಸುವುದು ಹಾಗೂ ಸಮಗ್ರ ಮಾಹಿತಿಯನ್ನು ರಾಜ್ಯದ ಜನತೆಗೆ ಕೊಡಬೇಕಾಗಿ ನಾನು ಆಗ್ರಹ ಮಾಡುತ್ತೇನೆ.

ಈ ಸುದ್ದಿ ಓದಿದ್ದೀರಾ?: ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

ತಾವು ಕೊಡುತ್ತಿರುವ ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ರೂ. ಅಗತ್ಯವಿರುವ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಾರದು ಹಾಗೂ ರಾಜ್ಯದ ಜನತೆಯ ಮೇಲೆ ಅಪರೋಕ್ಷವಾಗಿ ಹೆಚ್ಚಿನ ಭಾರ ಬೀಳಬಾರದೆಂದು ಈ ಪತ್ರ ಬರೆಯುತ್ತಿದ್ದು ಸಿಎಂ ಸೂಕ್ತ ಕ್ರಮ ಜರುಗಿಸುವ ವಿಶ್ವಾಸ ಇಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಇತ್ತ ರಾಜ್ಯ ಸರ್ಕಾರ ಮಾಜಿ ಸಿಎಂ ಪತ್ರಕ್ಕೆ ಯಾವ ಪ್ರತಿಕ್ರಿಯೆ ನೀಡಲಿದೆ ಎನ್ನುವ ಕುತೂಹಲವೀಗ ಜನರನ್ನು ಕಾಡಲಾರಂಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...