ದೇಶದ ಹೆಸರನ್ನು ಬದಲಿಸಲು ಈ ದೇಶ ನಿಮ್ಮ ಅಪ್ಪನದ್ದಾ? ಬಿಜೆಪಿ ವಿರುದ್ಧ ಕೇಜ್ರಿವಾಲ್ ಆಕ್ರೋಶ

Date:

  • ಬಿಜೆಪಿಗೆ ಧೈರ್ಯವಿದ್ದರೆ ಇಂಡಿಯಾ ಹೆಸರನ್ನು ಬದಲಿಸಲಿ: ದೆಹಲಿ ಸಿಎಂ
  • ಛತ್ತೀಸ್‌ಘಡದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

“‘ದೇಶದ ಹೆಸರನ್ನು ಬದಲಿಸಲು ಈ ದೇಶ ನಿಮ್ಮ ಅಪ್ಪನದ್ದಾ? ಇದು 140 ಕೋಟಿ ಜನರಿಗೆ ಸೇರಿದ್ದು. ಬಿಜೆಪಿಗೆ ಧೈರ್ಯವಿದ್ದರೆ ಇಂಡಿಯಾ ಹೆಸರನ್ನು ಬದಲಿಸಲಿ” ಎಂದು ಬಿಜೆಪಿ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

‘ಇಂಡಿಯಾ’ ಹೆಸರನ್ನು ಅಧಿಕೃತವಾಗಿ ‘ಭಾರತ’ ಎಂದು ಬದಲಿಸಲಾಗುತ್ತದೆ ಎಂಬ ಸುದ್ದಿಯ ನಡುವೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕೇಜ್ರಿವಾಲ್, ತಾಕತ್ತಿದ್ದರೆ ಇಂಡಿಯಾ ಹೆಸರನ್ನು ಬದಲಿಸಿ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಛತ್ತೀಸ್‌ಘಡದಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, “ಇಂಡಿಯಾ ನಿಮ್ಮ ಅಪ್ಪನಿಗೆ ಸೇರಿದ್ದಾ? ಇದು 140 ಕೋಟಿ ಜನರಿಗೆ ಸೇರಿದ್ದು. ಇಂಡಿಯಾ ನಮ್ಮ ಹೃದಯಗಳಲ್ಲಿ ನೆಲೆಸಿದೆ, ಭಾರತ ಕೂಡ ನಮ್ಮ ಹೃದಯಗಳಲ್ಲಿ ನೆಲೆಸಿದೆ, ಹಿಂದೂಸ್ತಾನವೂ ನಮ್ಮ ಹೃದಯಗಳಲ್ಲಿ ನೆಲೆಸಿದೆ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷದವರೆಗೂ ಇಂಡಿಯಾ ಹೆಸರಿನಡಿಯಲ್ಲಿ ಮೋದಿ ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿತ್ತು. ಆದರೆ ಈಗ ವಿಪಕ್ಷಗಳ ಇಂಡಿಯಾ ಬಣ ರಚನೆಯಾದ ಬಳಿಕ ಇದ್ದಕ್ಕಿದ್ದಂತೆ ದೇಶದ ಹೆಸರನ್ನು ಬದಲಿಸುವ ಬಗ್ಗೆ ಮಾತನಾಡುತ್ತಿದೆ” ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಕಿಡಿಕಾರಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ಇಂಡಿಯಾ ಹೆಸರನ್ನು ಬದಲಿಸಿ ಎಂದು ನಾನು ಅವರಿಗೆ ಸವಾಲು ಹಾಕಲು ಬಯಸುತ್ತೇನೆ” ಎಂದು ದಿಲ್ಲಿ ಸಿಎಂ ಗುಡುಗಿದರು.

ದೇಶದ 28 ವಿರೋಧ ಪಕ್ಷಗಳು ಮೈತ್ರಿಕೂಟ ರಚಿಸಲು ಒಂದುಗೂಡಿವೆ. ಇದಕ್ಕೆ ಐಎನ್‌ಡಿಐಎ ಎಂಬ ಹೆಸರು ಇಡಲಾಗಿದೆ. ಇದರಿಂದ ಬಿಜೆಪಿ ಸರ್ಕಾರ ಎಷ್ಟು ಸಿಟ್ಟಿಗೆದ್ದಿದೆ ಎಂದರೆ, ದೇಶದ ಹೆಸರನ್ನು ಭಾರತ ಎಂದು ಬದಲಿಸುತ್ತೇವೆ ಎಂದು ಅವರು ಹೇಳುತ್ತಿದ್ದಾರೆ. ನಾಳೆ, ವಿರೋಧ ಪಕ್ಷಗಳ ಮೈತ್ರಿಕೂಟವು ತಮ್ಮನ್ನು ಭಾರತ ಎಂದು ಕರೆದುಕೊಂಡರೆ, ನೀವು ದೇಶದ ಹೆಸರನ್ನು ಮತ್ತೆ ಬದಲಿಸುತ್ತೀರಾ? ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...