ಮೋದಿಗೆ ಕ್ಯಾಮೆರಾ ಮುಂದೆ ಮಾತ್ರವೇ ರಕ್ತ ಕುದಿಯುವುದಾ?

Date:

ಪಹಲ್ಗಾಮ್‌ ದಾಳಿಯ ಬಗ್ಗೆ ಅಬ್ಬರದ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ‘ನನ್ನ ಮೈಯಲ್ಲಿ ಹರಿಯುತ್ತಿರುವುದು ರಕ್ತವಲ್ಲ. ಕುದಿಯುತ್ತಿರುವ ಸಿಂಧೂರ’ ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ, “ಕ್ಯಾಮೆರಾಗಳ ಮುಂದೆ ಮಾತ್ರವೇ ನಿಮ್ಮ ಕುದಿಯುವುದೇಕೆ” ಎಂದು ಪ್ರಶ್ನಿಸಿದ್ದರೆ.

ಗುರುವಾರ, ರಾಜಸ್ಥಾನದ ಬಿಕಾನೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ, “ನನ್ನ ಮನಸ್ಸು ತಂಪಾಗಿರುತ್ತದೆ. ಆದರೆ, ರಕ್ತ ಮಾತ್ರ ಕುದಿಯುತ್ತಿರುತ್ತದೆ. ಈಗ, ಅದು ರಕ್ತವಲ್ಲ, ಕುದಿಯುತ್ತಿರುವ ಸಿಂಧೂರ” ಎಂದು ಘೋಷಿಸಿದರು. ಅವರ ಹೇಳಿಕೆಯು ಭಾರೀ ಟ್ರೋಲ್‌ಗೂ ಒಳಗಾಗಿದೆ. ಭಾರತ-ಪಾಕ್ ಸಂಘರ್ಷವನ್ನು ವ್ಯಾಪಾರದ ಬೆದರಿಕೆಯ ಅಸ್ತ್ರಬಳಸಿ ನಿಲ್ಲಿಸಿದೆ, ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪದೇ-ಪದೇ ಹೇಳುತ್ತಿರುದ್ದರೂ, ಅದರ ಬಗ್ಗೆ ಏನನ್ನೂ ಮಾತನಾಡದೆ, ಟ್ರಂಪ್ ಹೇಳಿಕೆಯನ್ನು ಅಲ್ಲಗಳೆಯದ, ಖಂಡಿಸದ ಮೋದಿ ಅವರ ರಕ್ತವು ಕ್ಯಾಮೆರಾ ಎದುರು ಮಾತ್ರವೇ ಕುದಿಯುತ್ತದೆ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಇನ್ನು, ಮೋದಿ ಹೇಳಿಕೆ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, “ಮೋದಿಯವರೇ, ಸುಳ್ಳು ಭಾಷಣಗಳನ್ನು ನಿಲ್ಲಿಸಿ. ಭಯೋತ್ಪಾದನೆಯ ವಿರುದ್ಧದ ಪಾಕಿಸ್ತಾನದ ಹೇಳಿಕೆಗಳನ್ನು ನೀವೇಕೆ ನಂಬಿಕೊಂಡಿದ್ದೀರಿ? ಟ್ರಂಪ್‌ಗೆ ತಲೆಬಾಗುವ ಮೂಲಕ ನೀವು ಭಾರತದ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದೀರಿ. ಕದನ ವಿರಾಮಕ್ಕೆ ಒಪ್ಪಿಕೊಂಡು ಭಾರತದ ಪ್ರತಿಷ್ಠೆಯ ಜೊತೆ ರಾಜಿ ಮಾಡಿಕೊಂಡಿದ್ದೀರಿ. ಬರೀ ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕದನ ವಿರಾಮ ಘೋಷಣೆ ವಿಚಾರದಲ್ಲಿ ಟ್ರಂಪ್ ನೀಡುತ್ತಿರುವ ಹೇಳಿಕೆಗಳ ಕುರಿತು ಮೋದಿ ಸರ್ಕಾರವನ್ನು ಕಾಂಗ್ರೆಸ್‌ ಪ್ರಶ್ನಿಸಿದೆ. “ಟ್ರಂಪ್ 11 ದಿನಗಳಲ್ಲಿ ಎಂಟು ಬಾರಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ತಮ್ಮದೇ ಪಾತ್ರವಿರುವುದಾಗಿ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಪ್ರಧಾನಿಗಳನ್ನು ಸಮಾನವಾಗಿ ಹೊಗಳಿದ್ದಾರೆ. ಇಬ್ಬರನ್ನೂ ಎಲ್ಲ ರೀತಿಯಲ್ಲೂ ಸಮಾನವೆಂದು ಹೇಳಿದ್ದಾರೆ. ಎರಡು ದೇಶಗಳು ಕದನ ವಿರಾಮ ಘೋಷಿಸುವಂತೆ ಮಾಡಲು ಅಮೆರಿಕ ಜೊತೆಗಿನ ವ್ಯಾಪಾರ ವಹಿವಾಟನ್ನು ಅಸ್ತ್ರವಾಗಿ ಬಳಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಅವರ ಹೇಳಿಕೆಗಳನ್ನು ಮೋದಿ ಒಮ್ಮೆಯೂ ತಿರಸ್ಕರಿಸಿಲ್ಲ. ಗಾಢ ಮೌನಕ್ಕೆ ಜಾರಿದ್ದಾರೆ. ಈ ಮೌನ ಯಾಕೆ” ಎಂದು ಕೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...