ದೆಹಲಿಗೆ ಯಾತ್ರೆ ಹೊರಡಿ, ಮೋದಿ ಮೇಲೆ ಒತ್ತಡ ಹಾಕಿ, ಬರಪರಿಹಾರ ಕೊಡಿಸಿ: ಬಿಜೆಪಿಗರನ್ನು ಕುಟುಕಿದ ಸಿಎಂ

Date:

  • ‘ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ’
  • ‘ಬಿಜೆಪಿ ನಾಯಕರು ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ’

“ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ’’ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ. ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯ ಸುತ್ತಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, “ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ. ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರ್ಕಾರ ಕಳಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ಜೇನಿನ ಹೊಳೆ ಹರಿಯತ್ತದೆ ಎಂದು ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಳ್ಳೆಕಾಯಿ ತಿನ್ನುತ್ತಿದ್ದಾರಾ? ಅವರೆಂದಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಬಾಯಿ ಬಿಟ್ಟಿದ್ದಾರಾ?” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲ ಭಯೋತ್ಪಾದಕರೂ ಮುಸ್ಲಿಮರಲ್ಲ ಎನ್ನುವ ಸತ್ಯವನ್ನು ನಂಬದವರು

“ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ಯಾತ್ರೆ ಹೊರಡಬೇಕಾಗಿರುವುದು ದೆಹಲಿಗೆ. ನಿಮ್ಮ ಪಕ್ಷದ 25 ಲೋಕಸಭಾ ಸದಸ್ಯರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ. ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿ” ಎಂದು ಆಗ್ರಹಿಸಿದ್ದಾರೆ.

“ನೆಲ-ಜಲ-ಭಾಷೆಯ ವಿಚಾರದಲ್ಲಿ ಕರ್ನಾಟಕಕ್ಕೆ, ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಾಲು ಸಾಲು ಅನ್ಯಾಯ ಮಾಡಿ ಯಾವ ಮುಖ ಹೊತ್ತು ರಾಜ್ಯ ಪ್ರವಾಸ ಹೊರಟಿದ್ದೀರಿ? ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ. ಬರಗಾಲದ ನಷ್ಟ – ನೋವನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಲು ಹೊರಟಿರುವ ನಿಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ, ಜಾಗ್ರತೆಯಿಂದಿರಿ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...