ಆನೆ ಹಾವಳಿ ತಡೆಗೆ ದೇಶೀಯ ರೇಡಿಯೋ ಕಾಲರ್ ಲೋಕಾರ್ಪಣೆ

Date:

ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀಯ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಅರಣ್ಯ ಭವನದಲ್ಲಿ ಬುಧವಾರ ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ (ಕೆ.ಪಿ. ಟ್ರ್ಯಾಕರ್) ಎಂಬ ಹೆಸರಿನ ರೇಡಿಯೋ ಕಾಲರ್ ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

6,395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈವರೆಗೆ ದಕ್ಷಿಣ ಆಫ್ರಿಕಾದೇಶದ ಆಫ್ರಿಕನ್ ವೈಲ್ಡ್ ಲೈಫ್ ಟ್ರಾಕಿಂಗ್ ಮತ್ತು ಜರ್ಮನಿಯ ವೆಕ್ಟ್ರೋನಿಕ್ ಸಂಸ್ಥೆಗಳಿಂದ ಈ ರೇಡಿಯೋ ಕಾಲ‌ರ್‌ಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಸಕಾಲದಲ್ಲಿ ಈ ರೇಡಿಯೋ ಕಾಲರ್ ಲಭ್ಯವಾಗುತ್ತಿರಲಿಲ್ಲ, ಜತೆಗೆ ಒಂದು ರೇಡಿಯೋ ಕಾಲರ್‌ಗೆ 6.5 ಲಕ್ಷ ರೂ.ವೆಚ್ಚ ತಗುಲುತ್ತಿತ್ತು. ಆದರೆ ಈಗ ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ರೇಡಿಯೋ ಕಾಲರ್‌ಗೆ 1.80 ಲಕ್ಷ ರೂ. ಆಗುತ್ತದೆ. ಇದು ಹೆಚ್ಚಿನ ರೇಡಿಯೋಕಾಲರ್‌ಗಳು ಲಭ್ಯವಾಗುವಂತೆ ಮಾಡುವುದಲ್ಲದೆ, ವಿದೇಶೀ ಅವಲಂಬನೆ ಹಾಗೂ ದುಬಾರಿ ವೆಚ್ಚ ತಗ್ಗಿಸುತ್ತದೆ” ಎಂದು ಹೇಳಿದರು.

ಜೊತೆಗೆ ಆಮದು ರೇಡಿಯೋ ಕಾಲರ್‌ಗಳ ತೂಕ 16 ರಿಂದ 17 ಕೆ.ಜಿ. ಇರುತ್ತಿತ್ತು. ಆದರೆ ಈಗ ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗಿರುವ ಕಾಲರ್ ಕೇವಲ 7 ಕೆ.ಜಿ. ತೂಕವಿದ್ದು, ಇದು ಹಗುರವಾಗಿರುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಪರಿಸರ ಸ್ನೇಹಿ ರೇಡಿಯೋ ಕಾಲರ್

“ಅರಣ್ಯ ಇಲಾಖೆ ತನ್ನ ಅಗತ್ಯಗಳಿಗೆ ಅನುಗುಣವಾಗಿ ಮತ್ತು ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಾಗುವುದಿಲ್ಲ. ಒಂದೊಮ್ಮೆ ರೇಡಿಯೋ ಕಾಲರ್‌ಗಳಲ್ಲಿ ದೋಷ ಕಂಡು ಬಂದರೆ ದುರಸ್ತಿ ಮಾಡಲು, ಬ್ಯಾಟರಿ, ಬಲ್ಬ್, ಸರ್ಕ್ಯೂಟ್ ಬದಲಾಯಿಸಲು ಅವಕಾಶವಿದೆ. ಆದರೆ ಆಮದು ರೇಡಿಯೋ ಕಾಲರ್ ಗಳಲ್ಲಿ ಈ ಅವಕಾಶ ಇರಲಿಲ್ಲ” ಎಂದರು.

ಸುರಕ್ಷತೆ ಮತ್ತು ಸಾಮುದಾಯ ಸಬಲೀಕರಣ

“ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ ರೇಡಯೋ ಕಾಲರ್ ಗಳಿಂದ ನಮ್ಮ ಕಾಡು ಮತ್ತು ವನ್ಯಜೀವಿಗಳ ಮಾಹಿತಿ ಸೋರಿಕೆ ಆಗುವ ಅಪಾಯವೂ ಇತ್ತು. ಈಗ ದೇಶೀಯವಾಗಿ ಈ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಿರುವುದರಿಂದ ಅಂತಹ ಅಪಾಯ ಇರುವುದಿಲ್ಲ. ದತ್ತಾಂಶ ಕೂಡ ಸ್ಥಳೀಯ ಸರ್ವರ್ ಗಳಲ್ಲಿ ಸುರಕ್ಷತವಾಗಿರುತ್ತದೆ” ಎಂದು ಈಶ್ವರ ಖಂಡ್ರೆ ವಿವರಿಸಿದರು.

“ಮೊದಲ ಹಂತದಲ್ಲಿ ಆನೆಗಳ ರೇಡಿಯೋ ಕಾಲರ್ ಮಾತ್ರ ಸಿದ್ಧವಾಗಿದೆ. ಹುಲಿ ಮತ್ತು ಚಿರತೆ ಕಾಲರ್‌ ಗಳ ಅಭಿವೃದ್ಧಿಯೂ ಪ್ರಗತಿಯಲ್ಲಿದ್ದು, ಇದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು” ಎಂದರು.

ದೇಶೀಯ ಆನೆ ಕಾಲರ್‌ಗಳ ಪರಿಚಯ

ಕರ್ನಾಟಕ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಹಾಗೂ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ನ ತಾಂತ್ರಿಕ ತಜ್ಞ ಗುರುದೀಪ ಅವರು ಸ್ವದೇಶಿ ಜಿಎಸ್.ಎಂ ಆಧಾರಿತ ಆನೆ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಿದ್ದಾರೆ. ಈ ಕಾಲರ್‌ ಗೆ ಕರ್ನಾಟಕ ಪರಿಶೋಧಿತ ಟ್ರ್ಯಾಕರ್ ಅಥವಾ ಕರ್ನಾಟಕ ಪ್ರಡ್ಯೂಸ್ಡ್ (ಕೆ.ಪಿ. ಟ್ರ್ಯಾಕರ್) ಎಂದು ಹೆಸರಿಸಲಾಗಿದೆ.

ಈ ಸಂದರ್ಭದಲ್ಲಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ, ಎಪಿಸಿಸಿಎಫ್ ಕುಮಾರ್ ಪುಷ್ಕರ್ ಮತ್ತು ಅಜಿತ್ ರೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...