ಭಯಪಡಬೇಡಿ, ಸತ್ಯದ ಮಾರ್ಗದಲ್ಲಿ ನಡೆಯಿರಿ; ಬಸವತತ್ವ ನೆನಪಿಸಿದ ರಾಹುಲ್ ಗಾಂಧಿ

Date:

  • 20ಕ್ಕೂ ಹೆಚ್ಚು ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗಿ
  • ಬಸವ ಜಯಂತಿಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ

ಬಸವಣ್ಣ ಅವರು ತಮ್ಮ ಜೀವನಪೂರ್ತಿ ಹೋರಾಟ ನಡೆಸಿದ್ದರು. ಹಾಗಾಗಿ ಅವರು ನಮಗೆ ಸದಾ ಆದರ್ಶ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಬಸವ ಧರ್ಮ ಪೀಠ ಆಯೋಜಿಸಿರುವ ಬಸವ ಜಯಂತಿಯಲ್ಲಿ ರಾಹುಲ್ ಗಾಂಧಿ ಅವರು ಭಾಷಣ ಮಾಡಿದ್ದಾರೆ.

ನನ್ನನ್ನು ಬಸವ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಕ್ಕೆ ಖುಷಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಇದಕ್ಕೂ ಮೊದಲು ಹಿಂದಿಯಲ್ಲೂ ಭಾಷಣ ಮಾಡಿದ ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ದರಾಮ ಸ್ವಾಮೀಜಿ ಅವರಿಗೆ ಧನ್ಯವಾದ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸವಣ್ಣ ಪ್ರಜಾಪ್ರಭುತ್ವದ ರಕ್ಷಣೆ ಮಾಡಿದ್ದಾರೆ. ಇದು ಸತ್ಯ, ಆದ್ದರಿಂದ ಇದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಭಾರತ ಈಗ ಗಣತಂತ್ರ ದೇಶ. ಆದರೆ, ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪ ಕಟ್ಟಿದ್ದರು” ಎಂದು ರಾಹುಲ್ ಗಾಂಧಿ ಹೇಳಿದರು.

“ಸಮಾಜದಲ್ಲಿ ಕತ್ತಲು ಕವೆದ ಸಂದರ್ಭದಲ್ಲಿ ಬಸವಣ್ಣ ಬೆಳಕು ತಂದರು. ಮೊದಲು ತಮ್ಮನ್ನು ತಾವು ಪರಾಮರ್ಶಿಸಿಕೊಂಡರು. ಇತರರನ್ನು ವಿಮರ್ಶಿಸುವುದು ಸುಲಭ ಆದರೆ, ಸ್ವಯಂ ಪರಾಮರ್ಶೆಗೆ ಒಳಪಡಿಸಿಕೊಳ್ಳುವುದು ಕಷ್ಟ” ಎಂದರು.

“ಬಸವಣ್ಣ ತಮ್ಮ ಎಂಟನೇ ವಯಸ್ಸಿಗೆ ಜನಿವಾರ ಹಾಕಿಕೊಳ್ಳುವುದನ್ನು ತೊರೆದಿದ್ದರು. ಅವರ ಸ್ನೇಹಿತರ ಮೇಲೆ ಸಮಾಜ ದಾಳಿ ಮಾಡುತ್ತಿತ್ತು. ಬಸವಣ್ಣನವರ ಸ್ನೇಹಿತರ ಪರಿಸ್ಥಿತಿ ಹೀನಾಯವಾಗಿತ್ತು. ಇದನ್ನೆಲ್ಲಾ ಕಂಡ ಅವರು ಪ್ರತಿಭಟಿಸಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಎಐಸಿಸಿ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್‌ ಬಂಧಿಸಲು ರಾಜ್ಯಕ್ಕೆ ಬಂದ ಅಸ್ಸಾಂ ಪೊಲೀಸರು

“ಜೀವನಪೂರ್ತಿ ಬಸವಣ್ಣನವರು ಸ್ವಯಂ ಪ್ರಶ್ನೆ ಹಾಕಿಕೊಂಡರು, ಸಮಾಜದ ತಾರತಮ್ಯಗಳ ಬಗ್ಗೆ ಪ್ರಶ್ನೆ ಎತ್ತಿದರು. ಜಾತಿವಾದ, ದ್ವೇಷ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನಿಸಿಕೊಂಡರು. ಅಲ್ಲಿಂದ ಸಮಾಜದ ಬದಲಾವಣೆಗೆ ಮುಂದಾದರು” ಎಂದರು.

“ಸಮಾಜದಲ್ಲಿ ಪ್ರಶ್ನೆ ಮಾಡುವುದಕ್ಕೆ ದೈರ್ಯ ಬೇಕು. ಬಸವಣ್ಣನವರು ಭಯ ಪಡಬೇಡಿ ಎಂದಿದ್ದರು. ಸಮಾಜದಲ್ಲಿ ಸತ್ಯ ಹೇಳುವುದು ಕಷ್ಟ. ಬಸವಣ್ಣ ಇದನ್ನು ಅನುಸರಿಸಿದರು” ಎಂದು ಹೇಳಿದರು.

“ಬಸವಣ್ಣನ ವಿರೋಧಿಗಳು ಅವರಿಗೆ ಬೆದರಿಕೆ ಹಾಕಿದ್ದರು. ಜೀವ ಬೆದರಿಕೆ ಒಡ್ಡಿದ್ದರು. ಆದರೆ, ಅವರು ಹಿಂದೆ ಸರಿಯಲಿಲ್ಲ. ಸತ್ಯದ ಮಾರ್ಗದಲ್ಲಿ ಮುಂದುವರಿದರು. ಬಸವಣ್ಣ ಹೆದರಬೇಡಿ ಎಂದರು. ಸತ್ಯದ ಮಾರ್ಗದಲ್ಲಿ ನಡೆಯಿರಿ, ಎಲ್ಲರನ್ನೂ ಗೌರವಿಸಿ ಎನ್ನುವ ಸಂದೇಶ ನೀಡಿದ್ದಾರೆ. ಆದರೆ, ಇಲ್ಯಾರು ಅದನ್ನು ಅನುಸರಿಸುತ್ತಿಲ್ಲ” ಎಂದು ಖೇದ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ದರಾಮ ಸ್ವಾಮೀಜಿ, ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ, ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಎಂ ಬಿ ಪಾಟೀಲ್ ಅವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...