ಸಾಮಾಜಿಕ ಸಮೀಕ್ಷೆ | ಧರ್ಮದ ಕಾಲಂನಲ್ಲಿ ‘ಹಿಂದೂ’ ಬೇಡ; ‘ಲಿಂಗಾಯತ’ ಎಂದು ಬರೆಸಿ: ಮಠಾಧೀಶರ ಒಕ್ಕೂಟ

Date:

ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.7ರ ವರೆಗೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಲಿಂಗಾಯತ ಮಠಾಧೀಶರ ಒಕ್ಕೂಟವು, ಲಿಂಗಾಯತ ಸಮುದಾಯವರು ಧರ್ಮದ ಕಾಲಂನಲ್ಲಿ ‘ಹಿಂದೂ’ ಎಂದು ಬರೆಸಬಾರದು. ‘ಲಿಂಗಾಯತ’ ಎಂದು ಬರೆಸಿಕೊಳ್ಳಬೇಕು ಎಂದು ಒತ್ತಾಯಿಸಿದೆ.

ಬುಧವಾರ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಿಂಗಾಯತ ಮಠಾಧೀಶರ ಒಕ್ಕೂಟದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು, “ಸೆ.22ರಿಂದ ಅ.7ರ ವರೆಗೆ ಹಿಂದುಳಿದ ವರ್ಗಗಳ ಆಯೋಗವು ನಡೆಸಲು ಉದ್ದೇಶಿಸಿರುವ ಸಮೀಕ್ಷೆಯ ವೇಳೆ ಲಿಂಗಾಯತ ಸಮುದಾಯವರು ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದು ಉಪಜಾತಿಯ ಕಾಲಂನಲ್ಲಿ ತಮ್ಮ ತಮ್ಮ ಉಪಜಾತಿಯನ್ನು ಬರೆಸಬೇಕು ಎಂದು ತಿಳಿಸಿದ್ದಾರೆ.

ಲಿಂಗಾಯತವು ಪ್ರತ್ಯೇಕ ಸ್ವತಂತ್ರ ಧರ್ಮವಾದರು, ಅದರೊಳಗೆ 97 ಬೇರೆ ಬೇರೆ ಹೆಸರಿನ ಜಾತಿ(ಒಳಪಂಗಡ)ಗಳಿವೆ. ಈವರೆಗೆ ನಡೆದ ಜನಗಣತಿಗಳಲ್ಲಿ ಬಹುತೇಕ ಲಿಂಗಾಯತರು ತಮ್ಮ ಧರ್ಮವನ್ನು ‘ಹಿಂದೂ’ ಎಂದು ಬರೆಸಿದ್ದು ಕಂಡು ಬರುತ್ತದೆ. ಅದು ತಮ್ಮ ಧರ್ಮದ ಬಗ್ಗೆ ಲಿಂಗಾಯತರಲ್ಲಿದ್ದ ಅರಿವಿನ ಕೊರತೆಯ ಸಂಕೇತವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಗಣತಿಯಲ್ಲಿ ಕೆಲವು ಲಿಂಗಾಯತ ವಿರೋಧಿ ಸಂಸ್ಥೆಗಳು, ಎಲ್ಲ ಲಿಂಗಾಯತರು ಹಿಂದೂ ಎಂದು ಬರೆಸಬೇಕೆಂದು ಹೇಳುತ್ತಾ, ಲಿಂಗಾಯತರನ್ನು ದಾರಿ ತಪ್ಪಿಸುತ್ತಿವೆ. 2023ರ ಡಿಸೆಂಬರ್‌ನಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯು ಲಿಂಗಾಯತರು ಹಿಂದೂಗಳಲ್ಲವೆಂದು ಸ್ಪಷ್ಟವಾಗಿ ನಿರ್ಣಯ ಮಾಡಿದೆ. ಜಾತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ 2002ರಲ್ಲಿ ಹೊರಡಿಸಿದ ಆದೇಶದಲ್ಲಿ ಅನ್ಯಾಯವಾಗಿ ಸತ್ಯಕ್ಕೆ ವಿರುದ್ಧವಾಗಿ ಕೆಲವು ಗುಂಪುಗಳ ಒತ್ತಡಕ್ಕೆ ಮಣಿದು ಲಿಂಗಾಯತರನ್ನು ‘ವೀರಶೈವ ಲಿಂಗಾಯತ’ರೆಂದು ಅಧಿಸೂಚನೆ ಹೊರಡಿಸಿದ್ದು ತಪ್ಪಾಗಿದೆ ಎಂದು ಅವರು ತಿಳಿಸಿದರು.

lingayat 1

ಲಿಂಗಾಯತದಲ್ಲಿರುವ 97 ಉಪಜಾತಿಗಳಲ್ಲಿ ವೀರಶೈವ ಒಂದು ಜಾತಿ ಮಾತ್ರ ಲಿಂಗಾಯತದಲ್ಲಿ ವೀರಶೈವವಿದೆ. ಆದರೆ ವೀರಶೈವದಲ್ಲಿ ಲಿಂಗಾಯತವಿಲ್ಲ. ಆದುದರಿಂದ ‘ವೀರಶೈವ ಲಿಂಗಾಯತ’ ಎನ್ನುವುದು ಸಂಪೂರ್ಣವಾಗಿ ತಪ್ಪು. ಇದೇ ತಪ್ಪನ್ನು ಅಖಿಲ ಭಾರತ ವೀರಶೈವ ಮಹಾಸಭೆಯು ಮುಂದುವರೆಸುತ್ತಿದೆ. ಇದರಲ್ಲಿ ಆ ಸಂಘಟನೆಗಳ ಪದಾಧಿಕಾರಿಗಳ ರಾಜಕೀಯ ಹಿತಾಸಕ್ತಿ ಅಡಗಿದೆ. ಇಂತಹ ರಾಜಕಾರಣಿಗಳ ಮಾತನ್ನು ಲಿಂಗಾಯತರು ಕೇಳಬಾರದು ಎಂದು ಡಾ.ಬಸವಲಿಂಗ ಪಟ್ಟದೇವರು ಸೂಚನೆ ನೀಡಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಸೆ.20ರಂದು ಸಾಮಾಜಿಕ ಮುಖಂಡ ಜಾವೀದ್‌ ಖಾನ್‌ಗೆ ಗೌರವ ಡಾಕ್ಟರೇಟ್

ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮಿಗಳಾದ ತೋಂಟದ ಸಿದ್ಧರಾಮ ಸ್ವಾಮಿ, ಮಹಾಂತ ದೇವರು, ಬೆಳ್ಳಿ ಮಠ ಶಿವರುದ್ರ ಸ್ವಾಮಿ ಬೇಲಿ ಮಠ, ಸಿದ್ದಲಿಂಗ ಮಹಾಸ್ವಾಮಿ, ಅಲ್ಲಮಪ್ರಭು ಮಹಾಸ್ವಾಮಿ, ಗಂಗಾಮಾತಾಜಿ, ಬಸವಲಿಂಗ ಸ್ವಾಮಿ, ಚನ್ನಬಸವ ಸ್ವಾಮಿ, ನಂಜುಂಡಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...