‘ಮೋದಿ ಜಪ ಮಾಡಿದ್ರೆ ಪತಿಗೆ ಊಟ ಬಡಿಸಬೇಡಿ’; ಮಹಿಳಾ ಮತದಾರರಿಗೆ ಕೇಜ್ರಿವಾಲ್ ಕರೆ

Date:

“ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಮಹಿಳೆಯರು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಲೋಕಸಭೆ ಚುನಾವಣೆಯಲ್ಲಿ ಮತ ಹಾಕಿ” ಎಂದು ಮನವಿ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, “ನಿಮ್ಮ ಪತಿ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಪ ಮಾಡಿದರೆ ಅವರಿಗೆ ಊಟ ಬಡಿಸಬೇಡಿ” ಎಂದಿದ್ದಾರೆ.

“ಪ್ರತಿ ಮನೆಯಲ್ಲಿಯೂ ಬಿಜೆಪಿಯ ಬದಲಾಗಿ ಎಎಪಿಗೆ ಬೆಂಬಲ ನೀಡುವಂತೆ ಪುರುಷರನ್ನು ಪ್ರೋತ್ಸಾಹಿಸುವುದು ಮಹಿಳೆಯರ ‘ಜವಾಬ್ದಾರಿ’ಯಾಗಿದೆ” ಎಂದು ಅರವಿಂದ ಕೇಜ್ರಿವಾಲ್ ಹೇಳಿದ್ದು, “ಹೆಚ್ಚಿನ ಪುರುಷರು ಈಗ ಬರೀ ಮೋದಿ ಜಪ ಮಾಡುತ್ತಿದ್ದಾರೆ. ಅದನ್ನು ಸರಿ ಮಾಡಲು ಮನೆಯಲ್ಲಿರುವ ಮಹಿಳೆಯರಿಗೆ ಮಾತ್ರ ಸಾಧ್ಯ. ನಿಮ್ಮ ಪತಿ ಮೋದಿಗೆ ಮತ ಹಾಕುತ್ತೇನೆ ಎಂದು ಹೇಳಿದರೆ ನೀವು ಪತಿಗೆ ಊಟ ಬಡಿಸಲ್ಲವೆಂದು ಹೇಳಿ,” ಎಂದು ಮಹಿಳೆಯರಿಗೆ ಕರೆ ನೀಡಿದರು.

“ಎಎಪಿಗೆ ಮತ ಹಾಕುವಂತೆ ಪತಿಯಿಂದ ನಿಮ್ಮ ಮೇಲೆ ಆಣೆ ಹಾಕಿಸಿಕೊಳ್ಳಿ. ಎಲ್ಲ ಗಂಡಂದಿರೂ ತಮ್ಮ ಪತ್ನಿಯ ಮಾತನ್ನು ಕೇಳಬೇಕಾಗುತ್ತದೆ. ಹೌದು ಅಲ್ಲವೇ? ಪತ್ನಿಯು ತನ್ನ ಮೇಲೆ ಆಣೆ ಹಾಕಿಸಿ ಏನೇ ಹೇಳಿದರೂ ಆತ ಅದನ್ನು ಪಾಲಿಸಲೇಬೇಕಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಪತಿಯ ಬಳಿ ಕೇಜ್ರಿವಾಲ್ ಉಚಿತ ವಿದ್ಯುತ್ ನೀಡುತ್ತಿದ್ದಾರೆ, ಬಸ್ ಟಿಕೆಟ್‌ಗಳನ್ನು ಉಚಿತ ಮಾಡಿದ್ದಾರೆ ಮತ್ತು ಈಗ ಮಹಿಳೆಯರಿಗೆ ಒಂದು ಸಾವಿರ ರೂಪಾಯಿ ನೀಡುತ್ತಿದ್ದಾರೆ ಎಂದು ತಿಳಿಸಿ. ಬಿಜೆಪಿ ನಿಮಗೆ ಏನು ಮಾಡಿದೆ? ಬಿಜೆಪಿಗೆ ಯಾಕೆ ಮತ ಹಾಕುತ್ತೀರಾ? ಎಂದು ನಿಮ್ಮ ಪತಿಯನ್ನು ಪ್ರಶ್ನಿಸಿ” ಎಂದಿದ್ದಾರೆ.

ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ ಅಡಿಯಲ್ಲಿ ಸದೆಹಲಿ ಸರ್ಕಾರವು ಬಜೆಟ್‌ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೂ ಒಂದು ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದೆ. ಇದನ್ನು ಬಿಜೆಪಿ ಹಣ ವ್ಯರ್ಥ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿದ ದೆಹಲಿ ಸಿಎಂ, “ಮಹಿಳೆಯರಿಗೆ ಒಂದು ಸಾವಿರ ರೂಪಾಯಿ ನೀಡುವ ಮೂಲಕ ಕೇಜ್ರಿವಾಲ್ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂದು ಅವರು (ಬಿಜೆಪಿ) ಹೇಳುತ್ತದೆ. ನೀವು ಬಂಡವಾಳಶಾಹಿಗಳಿಗೆ ಸಾಲ ಮನ್ನಾವನ್ನು ಮಾಡಿದಾಗ ನಿಮ್ಮ ಹಣ ವ್ಯರ್ಥವಾಗಿಲ್ಲವೇ?” ಎಂದು ಪ್ರಶ್ನಿಸಿದರು.

“ಸಬಲೀಕರಣ ವಿಚಾರದಲ್ಲಿ ಈವರೆಗೆ ಬಿಜೆಪಿ ವಂಚನೆ ಮಾಡಿದೆ. ಈವರೆಗೂ ಅವರು ಮಹಿಳಾ ಸಬಲೀಕರಣ ಆಗಬೇಕು ಎನ್ನುತ್ತಿದ್ದರು, ಮಹಿಳೆಯರನ್ನು ಕೊಂಡಾಡುತ್ತಿದ್ದರು. ಆದರೆ ಈಗ ನಮ್ಮ ಸರ್ಕಾರ ಒಂದು ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಿದರೆ ಅದನ್ನು ವ್ಯರ್ಥ ಎನ್ನುತ್ತಾರೆ. ಬರಿದಾದ ಪರ್ಸ್‌ನಿಂದಾಗಿ ಸಬಲೀಕರಣ ಆಗಲ್ಲ” ಎಂದು ಕುಟುಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...