ಅಚ್ಚೇ ದಿನ್‌ಗೆ ಕಾಯಬೇಡಿ, ನಿಮಗೆ ಬೇಕಾದ ಸರ್ಕಾರ ಆಯ್ಕೆ ಮಾಡಿ: ರೈತರಿಗೆ ನಟ ನಾನಾ ಪಾಟೇಕರ್ ಕರೆ

Date:

ಮಹಾರಾಷ್ಟ್ರದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಆಗುತ್ತಿರುವ ರಾಜಕೀಯ ಬದಲಾವಣೆಗಳನ್ನು ಕಟುವಾಗಿ ಟೀಕಿಸಿದ ನಟ ನಾನಾ ಪಾಟೇಕರ್, ಇದೇ ಸಂದರ್ಭದಲ್ಲಿ ರೈತರಿಗೆ ಕರೆ ಕೊಟ್ಟಿದ್ದಾರೆ. “ನೀವು ಅಚ್ಚೇ ದಿನ್‌ಗಾಗಿ (ಉತ್ತಮ ದಿನಕ್ಕಾಗಿ) ಕಾಯಬಾರದು, ನಿಮಗೆ ಬೇಕಾದ ಸರ್ಕಾರವನ್ನು ನೀವೇ ಆಯ್ಕೆ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ನಾಸಿಕ್‌ನಲ್ಲಿ ನಡೆದ ‘ಶೇಟ್ಕರಿ ಸಮ್ಮೇಳನ’ದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ನಟ ನಾನಾ ಪಾಟೇಕರ್, “ರೈತರು ಎಂದಿಗೂ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತದೆ ಎಂದು ಕಾದು ಕೂರಬಾರದು. ನಾವಾಗಿಯೇ ನಮಗೆ ಉತ್ತಮ ದಿನಗಳನ್ನು ತಂದುಕೊಳ್ಳಬೇಕು. ಮುಂದಿನ ಬಾರಿ ಯಾವ ಸರ್ಕಾರ ಬರಬೇಕು ಎಂಬುದನ್ನು ನೀವು ತೀರ್ಮಾನ ಮಾಡಬೇಕು,” ಎಂದು ಹೇಳಿದರು.

“ನಮ್ಮ ದೇಶದಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುತ್ತಿರುವಾಗ ಅಕ್ಕಿಯ ಬೆಂಬಲ ಬೆಲೆ ಮಾತ್ರ ಯಾಕೆ ಹೆಚ್ಚಾಗುವುದಿಲ್ಲ? ರೈತರು ಇಡೀ ದೇಶಕ್ಕೆ ಆಹಾರ ನೀಡುವವರು. ಆದರೆ, ರೈತರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರಕ್ಕೆ ಸಮಯವೇ ಇಲ್ಲ. ಇಂತಹ ಸರ್ಕಾರದಿಂದ ರೈತರು ಏನೂ ಕೇಳಬಾರದು. ನೀವೇ ಮುಂದಿನ ಸರ್ಕಾರ ಆಯ್ಕೆ ಮಾಡಬೇಕು,” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಇಂದಿನ ಸ್ಥಿತಿಯನ್ನು ಬದಲಾವಣೆ ಮಾಡಲು ಜೊತೆಯಾಗಬೇಕು. ನಾವೆಂದಿಗೂ ಆತ್ಮಹತ್ಯೆಯ ದಾರಿಯನ್ನು ತುಳಿಯಬಾರದು,” ಎಂದು ರೈತರಿಗೆ ಹೇಳಿದರು.

ರಾಜಕೀಯ ಪಕ್ಷಗಳ ವಿರುದ್ಧ ಹರಿಹಾಯ್ದ ಪಾಟೇಕರ್, “ರಾಜಕೀಯ ನಾಯಕರೇ ನಮ್ಮ ಯುವಜನರಿಗೆ ಯಾವ ನಿದರ್ಶನವನ್ನು ನೀವು ನೀಡುತ್ತಿದ್ದೀರಿ,” ಎಂದು ಪ್ರಶ್ನಿಸಿದರು. ”ನಾನು ಎಂದಿಗೂ ಕಟುವಾಗಿ, ನೇರವಾಗಿ ಟೀಕೆ ಮಾಡುವ ವ್ಯಕ್ತಿ. ಆದ್ದರಿಂದಾಗಿ ನಾನು ರಾಜಕೀಯಕ್ಕೆ ಸೇರಿಕೊಳ್ಳಲು ಸಾಧ್ಯವಿಲ್ಲ” ಎಂದು ಈ ವೇಳೆ ತಿಳಿಸಿದರು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...