ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

Date:

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಕೈಗೆತ್ತಿಕೊಂಡಿರುವ ಗಣಿಗಾರಿಕೆ ಯೋಜನೆಯ ಬಗ್ಗೆ ಕಳವಳ ಬೇಡ ಎಂದು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಕುದುರೆಮುಖ ಕಬ್ಬಿಣ ಅದಿರು ಕಂಪನಿಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗಂಟಿ ವೆಂಕಟ ಕಿರಣ್ ಅವರು ಸೇರಿದಂತೆ ಇನ್ನೂ ಹಲವಾರು ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ಅರಣ್ಯ ನಾಶಕ್ಕೆ ನಾನು ಸಹಿ ಹಾಕಿದ್ದಲ್ಲ. ರಾಜ್ಯದಲ್ಲಿ ಉಕ್ಕು ಉತ್ಪಾದನೆ ಆಗಬೇಕು ಹಾಗೂ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕರಿಗೆ ಉದ್ಯೋಗ ದೊರೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ‌ನಿರ್ಭರ್ ಭಾರತ ಆಶಯದಂತೆ ಜಿಡಿಪಿ ವೃದ್ಧಿಗೆ ಹೆಚ್ಚು ಕಾಣಿಕೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಉಳಿಸಲು ಕ್ರಮ ವಹಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಣ್ಯ ನಾಶದ ಆತಂಕ ಬೇಡ

“ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಪ್ರಚಾರ ಮಾಡಲಾಗುತ್ತಿದೆ. ಜನರಲ್ಲಿ ಸ್ವಲ್ಪ ಮಟ್ಟಿಗಿನ ಆತಂಕ‌ ಉಂಟಾಗುವ ರೀತಿಯಲ್ಲಿ ಪ್ರಚಾರವಾಗಿದೆ. 2019ರಲ್ಲಿ ರಾಜ್ಯ ಸರಕಾರವೇ ದೇವದಾರಿ ಗಣಿಗಾರಿಕೆ ಯೋಜನೆಗೆ 404 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟಿದೆ. ನಂತರ ಕೇಂದ್ರ ಸರಕಾರದ ಪರಿಸರ ಇಲಾಖೆ ಕೂಡ ಅನುಮತಿ ನೀಡಿದೆ. ಆದರೆ, ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ಅನುಮತಿ ನೀಡುವ ಯೋಜನೆಗೆ ಸಹಿ ಹಾಕಿದ್ದಾರೆ. ದೇವದಾರಿ ಭಾಗದಲ್ಲಿ ಅರಣ್ಯ ಮತ್ತು ಜೀವರಾಶಿಗಳಿಗೆ ಹಾನಿ ಆಗುತ್ತದೆ. 99 ಸಾವಿರ ಮರಗಳಿಗೆ ಧಕ್ಕೆ ಆಗುತ್ತದೆ ಎಂದು ವರದಿಗಳು ಬಂದಿವೆ. ಆದರೆ, ಅರಣ್ಯ ನಾಶದ ಬಗ್ಗೆ ಆತಂಕ ಬೇಡ” ಎಂದರು.

“ಕುದುರೆಮುಖ ಕಂಪನಿ ಅದಿರು ತೆಗೆಯುವ ಕೆಲಸ ಪ್ರಾರಂಭ ಮಾಡುವ ಮುನ್ನವೇ ಸುಮಾರು 194 ಕೋಟಿ ರೂಪಾಯಿ ವೆಚ್ಚದಲ್ಲಿ 808 ಹೆಕ್ಟೇರ್ ಪ್ರದೇಶದಲ್ಲಿ ಪರ್ಯಾಯವಾಗಿ ಅರಣ್ಯ ಬೆಳೆಸಲಿದೆ. ಅದಕ್ಕೆ ಅರಣ್ಯ ಇಲಾಖೆಗೆ ಹಣ ಪಾವತಿಸಿದೆ. ಜೀವರಾಶಿಗೆ ತೊಂದರೆಯಾಗದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ವಿಷಯವನ್ನು ಆ ಭಾಗದ ಜನತೆ ಗಮನಿಸಬೇಕು” ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ರಾಜ್ಯ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರ ಹೇಳಿಕೆ‌ ಬಗ್ಗೆ ಪ್ರತಿಕ್ರಿಯಿಸಿ, “ದೇಶದಲ್ಲಿ ಸೆಮಿಕಂಡಕ್ಟರ್ ಕೈಗಾರಿಕೆ ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕಿದೆ. ತೈವಾನ್, ಅಮೆರಿಕದಲ್ಲಿ ಈ ಉದ್ಯಮ ದೊಡ್ಡಮಟ್ಟದಲ್ಲಿದೆ. ಅದಕ್ಕೆ ಮೋದಿಯವರು ಪ್ರೋತ್ಸಾಹ ನೀಡಲು ಒಂದು ಬೃಹತ್ ಯೋಜನೆ ಜಾರಿಗೆ ತಂದಿದ್ದಾರೆ. ಇದರಲ್ಲಿ ಯೂಟರ್ನ್ ಪ್ರಶ್ನೆ ಏನೂ ಇಲ್ಲ. ದೇಶದ ಪ್ರಗತಿ ಅಷ್ಟೇ ಮುಖ್ಯ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...