ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಡಿಪಿಆರ್ ಸಿದ್ಧ; ಆಂಧ್ರ, ತೆಲಂಗಾಣ ಜತೆ ಚ‌ರ್ಚೆ: ಡಿ ಕೆ ಶಿವಕುಮಾರ್

Date:

ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು.

ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ. ಶಿವಕುಮಾರ್, “ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ ಹಾಗೂ ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ. ನಾವು ನಮ್ಮ ಪಾಲಿನ ನೀರು ಉಳಿಸಿಕೊಳ್ಳಲು ಬದ್ಧವಾಗಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾ.18 ಕ್ಕೆ ಪೆನ್ನಾರ್ ಕುರಿತು ಚರ್ಚೆ

“ಇದೇ 18 ರಂದು ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಕರೆದಿದ್ದಾರೆ. ಅಂದು ನವಲಿ ಅಣೆಕಟ್ಟು ನಿರ್ಮಾಣ ಹಾಗೂ ಪರ್ಯಾಯ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಆಂದ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿ, ಪತ್ರ ಕೂಡ ಬರೆದಿದ್ದೇನೆ. ರಾಜಸ್ಥಾನದ ಉದಯಪುರಲ್ಲಿ ನಡೆದ ಸಮಾವೇಶದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜಲಸಂಪನ್ಮೂಲ ಸಚಿವರ ಜತೆ ಚರ್ಚೆ ಮಾಡಿದ್ದು, ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಈ ಯೋಜನೆ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿ ಚರ್ಚೆ ಮಾಡಲು ಸಮಯ ನೀಡಿ ಎಂದು ಕೇಳಿದ್ದೆ. ಎರಡು ರಾಜ್ಯಗಳ ಜತೆ ಚರ್ಚೆ ಮಾಡಿದ ನಂತರ ತುಂಗಭದ್ರಾ ಮಂಡಳಿ ಮುಂದೆ ಈ ಯೋಜನೆಗಳ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದೆ. ಆಂಧ್ರಪ್ರದೇಶ ಸಿಎಂ ಅವರು ಈ ವಿಚಾರವಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

“ತುಂಗಾಭದ್ರ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ” ಎಂದು ಹೇಳಿದರು.

“ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಸಮಯಾವಕಾಶ ನೀಡಿದ ತಕ್ಷಣ ನಾನೇ ಖುದ್ದಾಗಿ ಹೋಗಿ ಮಾತನಾಡುವೆ. ಸಚಿವ ಬೋಸ್ ರಾಜು, ಆ ಭಾಗದ ಇತರೆ ಸಚಿವರು ಹಾಗೂ ಶಾಸಕರು ಈ ಕೆಲಸ ಆಗಲೇಬೇಕು ಎಂದು ಬೆನ್ನು ಹತ್ತಿದ್ದಾರೆ. ಈಗಾಗಲೇ ನಾನು, ಬೋಸರಾಜು ಹಾಗೂ ಸಚಿವ ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...