ತಮಿಳುನಾಡು SIR: 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್, ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಕೈಬಿಟ್ಟ ಆಯೋಗ

Date:

ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ. ವಲಸೆ, ಸಾವು, ನಕಲಿ ಮೊದಲಾದ ಕಾರಣ ನೀಡಿ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ.

ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಒದಗಿಸಿದ ಮಾಹಿತಿಯ ಪ್ರಕಾರ, ವಲಸೆ ಬಂದ ಕಾರಣ 66.4 ಲಕ್ಷ ಜನರನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ, 26.9 ಲಕ್ಷ ಜನರು ಮೃತಪಟ್ಟಿದ್ದಾರೆ ಮತ್ತು 3.98 ಲಕ್ಷ ಮತದಾರರ ಹೆಸರು ಒಂದಕ್ಕಿಂತ ಅಧಿಕ ಸ್ಥಳಗಳಲ್ಲಿ ದಾಖಲಾಗಿರುವುದು ಕಂಡುಬಂದಿದೆ.

ಇದನ್ನು ಓದಿದ್ದೀರಾ? 12 ರಾಜ್ಯಗಳಲ್ಲಿ ನಾಳೆಯಿಂದ ಎಸ್‌ಐಆರ್ ಎರಡನೇ ಹಂತ ಆರಂಭ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

5.43 ಕೋಟಿ ಮತದಾರರಿಂದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇದು ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡ 84.81ರಷ್ಟಿದೆ. 2025ರ ಡಿಸೆಂಬರ್ 19ರ ಹೊತ್ತಿಗೆ 6,41,14,587 ಮತದಾರರಲ್ಲಿ, 5,43,76,755 ಮತದಾರರು ತಮ್ಮ ಮಾಹಿತಿಯನ್ನು ನೀಡಿದ್ದು, ಎಸ್‌ಐಆರ್‌ನ ಮೊದಲ ಹಂತದಲ್ಲಿ ಅಗಾಧ ಪ್ರಮಾಣದಲ್ಲಿ ಜನರು ಭಾಗಿಯಾಗಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.

ಇನ್ನು ತಮಿಳುನಾಡನ್ನು ಹೊರತುಪಡಿಸಿ, ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, 73.7 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ. ಗುಜರಾತ್‌ನ ಮುಖ್ಯ ಚುನಾವಣಾ ಅಧಿಕಾರಿ ಒದಗಿಸಿದ ಮಾಹಿತಿಯ ಪ್ರಕಾರ, 18.07 ಲಕ್ಷ ಮತದಾರರು ಮೃತಪಟ್ಟಿದ್ದಾರೆ. 51.86 ಲಕ್ಷ ಮತದಾರರನ್ನು ಸ್ಥಳಾಂತರರಾಗಿದ್ದಾರೆ ಮತ್ತು 3.81 ಲಕ್ಷ ಮತದಾರರನ್ನು ಒಂದಕ್ಕಿಂತ ಅಧಿಕ ಸ್ಥಳದಲ್ಲಿ ನೋಂದಾಯಿಸಲಾಗಿದೆ.

ಇನ್ನು ತಮಿಳುನಾಡಿನಲ್ಲಿ ಡಿಎಂಕೆ ಆಡಳಿತವು ಎಸ್‌ಐಆರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತೀವ್ರ ವಿರೋಧದ ನಡುವೆಯೂ ಎಸ್‌ಐಆರ್ ನಡೆಯುತ್ತಿದ್ದು, ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. “ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ತಡೆಯಲು, ನಾವು ಸರ್ವಪಕ್ಷ ಸಭೆ ಕರೆದು SIR ಅನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮತದಾರರ ಪಟ್ಟಿಯ ಸಂಪೂರ್ಣ ಪರಿಷ್ಕರಣೆಯನ್ನು ಕೈಗೊಳ್ಳುವ ಚುನಾವಣಾ ಆಯೋಗದ ನಿರ್ಧಾರವು ಕಾನೂನುಬದ್ಧ ಮತದಾರರನ್ನು ಅಳಿಸಲು ಯೋಜಿತ ತಂತ್ರದ ಭಾಗವಾಗಿದೆ” ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

“ಲಕ್ಷಾಂತರ ನಿಜವಾದ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬಿಹಾರದಲ್ಲಿ ಇದೇ ತಂತ್ರವನ್ನು ಮೊದಲು ಬಳಸಲಾಗಿತ್ತು. ಬಿಹಾರದಲ್ಲಿಯೂ ಇದೇ ತಂತ್ರವನ್ನು ಬಳಸಲಾಗಿತ್ತು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...