ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

Date:

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿರಲಿಲ್ಲ. ಇದೀಗ, ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ರಾಜ್ಯಕ್ಕೆ 3,454 ಕೋಟಿ ರೂ. ಪರಿಹಾರ ನೀಡುವುದಾಗಿ ಕೇಂದ್ರ ಘೋಷಿಸಿದೆ.

ಕೇಳಿದ್ದು 18,174 ಕೋಟಿ ರೂ., ಆದರೆ, ಕೇಂದ್ರ ಕೊಟ್ಟಿರುವುದು ಕೇವಲ 3,454 ಕೋಟಿ ರೂ. ಈ ಬಗ್ಗೆ ಸುಪ್ರೀಂ ಗಮನಕ್ಕೆ ತರುತ್ತೇವೆಂದು ರಾಜ್ಯ ಸರ್ಕಾರ ಹೇಳಿದೆ. ಆದರೂ, ಕೊಟ್ಟ ಬಿಡಿಗಾಸನ್ನೇ ಇಟ್ಟುಕೊಂಡು ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾದ ಬಿಜೆಪಿ, ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದು, ನೆಟ್ಟಿಗರ ಟ್ರೋಲ್‌ಗೆ ಗುರಿಯಾಗಿ, ಅಪಹಾಸ್ಯಕ್ಕೆ ಒಳಗಾಗಿದೆ.

ಕೇಂದ್ರ ಸರ್ಕಾರ ಬರ ಪರಿಹಾರ ಘೋಷಿಸುತ್ತಿದ್ದಂತೆ, ಪ್ರಧಾನಿ ಮೋದಿಗೆ ರಾಜ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ. “ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವ ಸಮಯದಲ್ಲೇ ಕನ್ನಡಿಗರಿಗೆ ನೆರವಾದ ಪ್ರಧಾನಿ ನರೇಂದ್ರ ಮೋದಿ… 3,454 ಕೋಟಿ ರೂ. ಪರಿಹಾರ ನೀಡುವ ಮೂಲಕ ಕನ್ನಡಿಗರ ಹಿತ ಕಾಯ್ದಿದೆ ಮೋದಿ ಸರ್ಕಾರ” ಎಂದು ಹೊಗಳಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ ಹಂಚಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಸ್ಟರ್‌ ಹಾಕಿದ ಬಿಜೆಪಿಯನ್ನು ಹಲವರು ತರಾಟೆಗೆ ತೆಗೆದುಕೊಂಡಿದ್ದರೆ, ಇನ್ನೂ ಕೆಲವರು ಅಪಹಾಸ್ಯ ಮಾಡಿದ್ದಾರೆ. “ಬರ ಪರಿಹಾರ ಕೊಡಬೇಕಿದ್ದ ಸಮಯದಲ್ಲಿ ನೀವು ಕೊಡಲಿಲ್ಲ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರ ಪರಿಣಾಮ, ಕೇಂದ್ರ ಸರ್ಕಾರ ಅನಿವಾರ್ಯವಾಗಿ ಪರಿಹಾರ ಬಿಡುಗಡೆ ಮಾಡಿದೆ. ಧನ್ಯವಾದ ಸಲ್ಲಿಸಬೇಕಿರುವ ಕೇಂದ್ರಕ್ಕೆ – ಮೋದಿಗೆ ಅಲ್ಲ. ಸುಪ್ರೀಂ ಕೋರ್ಟಿಗೆ, ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇವೆ” ಎಂದು ನೆಟ್ಟಿಗರು ಬಿಜೆಪಿ ಕಾಲೆಳೆದಿದ್ದಾರೆ.

 

“ರಾಜ್ಯ ಸರ್ಕಾರ ಕೇಳಿದ್ದು, 18 ಸಾವಿರ ಕೋಟಿ ರೂ., ಕೇಂದ್ರ ಸರ್ಕಾರ ಕೊಟ್ಟಿರೋದು 3,454 ಕೋಟಿ ರೂ., ಆನೆ ಕೇಳಿದರೆ, ಇಲಿ ಕೊಟ್ಟಿದ್ದಾರೆ. ಅದನ್ನೂ ಅಭಿನಂದನೆಗೆ ಬಳಸಿಕೊಳ್ಳುತ್ತಿರುವ ನಿಮಗೆ ನಾಚಿಕೆ ಮಾನ ಮರ್ಯಾದೆ ಇದೆಯಾ?” ಎಂದು ಆಕ್ರೋಶ ಕೂಡ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಕಿಡಿಕಾರಿರುವ ನೆಟ್ಟಿಗ ರಮೇಶ್ ಮದಕರಿ ಎಂಬವರು, “ಮೂರೂ ಬಿಟ್ಟೋರು ಊರಿಗೆ ದೊಡ್ಡೋರು ಅನ್ನೋ ಗಾದೆ ಬಿಜೆಪಿ ನೋಡೇ ಬರ್ದಿರಬೋದು” ಎಂದಿದ್ದಾರೆ.

“ಬರ ಪರಿಹಾರ ಕೊಟ್ಟಿಲ್ಲವೆಂದು ರಾಜ್ಯ ಸರ್ಕಾರ ದೂರು ಕೊಟ್ಟಿತ್ತು, ಸುಪ್ರೀಂ ಕೋರ್ಟ್ ಕ್ಯಾಕರಿಸಿ ಕೇಂದ್ರಕ್ಕೆ ಉಗಿದಿತ್ತು. ಹಾಗಾಗಿ ಇಂದು ನಮಗೆ ಬರ ಪರಿಹಾರ ಸಿಕ್ಕಿದೆ. ಯಾವನ್ನಾದ್ರೂ ಮೋದಿ ಕೊಟ್ರು, ಥ್ಯಾಂಕ್ಸ್ ಅಂದ್ರೆ ಕೆರ ಕಿತ್ತೋಗ್ತವೆ ಹುಷಾರ್” ಎಂದು ಮುತ್ತುರಾಜ್ ಎಂಬವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಸ್ವಾಮಿ ಕನ್ನಡಿಗರೇನೂ ದಡ್ಡರಲ್ಲ. ಕಳೆದ ತಿಂಗಳಿನಿಂದ ನೋಡಿದೀವಿ ನೀವೂ ಭಾರೀ ದನಿ ಎತ್ತಿದ್ದನ್ನ. ನೀವೆಲ್ಲಾ ನಾಯಕರು?” ಎಂದು ಉತ್ಸಾಹಿ ಎಂಬವರು ಕಿಡಿಕಾರಿದ್ದಾರೆ.

“ನಿಮ್ಮ ಯೋಗ್ಯತೆ ಜನರಿಗೆ ಗೊತ್ತಿದೆ ಸುಪ್ರೀಂ ಕೋರ್ಟ್ ಉಗಿದಮೇಲೆ ಬುದ್ಧಿ ಬಂದಿದೆ, ತಡವಾಗಿ ಅಂತ ಬೇರೆ ನಾಟಕ” ಎಂದು ಶ್ರವಣ್ ಎಂಬವರು ವ್ಯಂಗ್ಯವಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...