ಕೇಂದ್ರದೊಂದಿಗೆ ಬರ ಪರಿಹಾರ ಚರ್ಚೆ; ದೆಹಲಿಗೆ ನಾಳೆ ರಾಜ್ಯ ಸಚಿವರ ತಂಡ: ಚಲುವರಾಯಸ್ವಾಮಿ

Date:

ಬರ ಪರಿಹಾರ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲು ನ.23ರಂದು ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಕೃಷಿ ಮತ್ತು ಜಲಾನಯನ ಇಲಾಖೆ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

‘ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆಯಾಗಿದೆ. 18000 ಕೋಟಿಗೂ ಅಧಿಕ ಪರಿಹಾರ ಕೋರಲಾಗಿದೆ. ರಾಜ್ಯದ ನಿರಂತರ ಮನವಿಗಳ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವರು ಭೇಟಿಗೆ ಸಮಯ ನಿಗದಿಪಡಿಸಿದ್ದು, ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಜೊತೆಗೆ ತಾನೂ ಕೂಡ ದೆಹಲಿಗೆ ತೆರಳುತ್ತಿದ್ದೇನೆ’ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ರೈತರ ಹಿತ ಸಂರಕ್ಷಣೆಗೆ ರಾಜ್ಯ ಸರ್ಕಾರದ ಆದ್ಯತೆ ಸದಾ ಇರಲಿದೆ. ಅದಕ್ಕೆ ನಾವು ಸದಾ ಬದ್ಧ ಎಂದ ಕೃಷಿ ಸಚಿವರು, ಈ ವರ್ಷ ‌ಕೃಷಿ ಭಾಗ್ಯ ಮರು ಜಾರಿಗೊಳಿಸಿದ್ದು 200 ಕೋಟಿ ರೂ ವೆಚ್ಚದಲ್ಲಿ 30,000ಕ್ಕೂ ಅಧಿಕ ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು. ಇದಕ್ಕೆ ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು.

ಇದೇ ವೇಳೆ, ‘ಬೆಳೆ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ. ಲೋಪ ಎಸಗಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು’ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ಬೆಳೆ ಸಮೀಕ್ಷೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ, ಲೋಪಗಳ ಬಗ್ಗೆ ಜನಪ್ರತಿಧಿಗಳು, ರೈತರು ದೂರು‌ ಸಲ್ಲಿಸಿದ್ದಾರೆ. ರೈತರ ಹಿತ ಇಲಾಖೆ ಹಾಗೂ ಅಧಿಕಾರಿಗಳ ಮೊದಲ‌ ಆದ್ಯತೆಯಾಗಿರಬೇಕು. ನಿರ್ಲಕ್ಷ್ಯ ಧೋರಣೆ ಮುಂದುವರೆಸಿದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯಗಳ ಆಗ್ರಹ: ಡಿಕೆ ಶಿವಕುಮಾರ್

‘ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿ. ಈಗಾಗಲೇ ಕೃಷಿಕರು ನೊಂದಿದ್ದಾರೆ. ಅವರಿಗೆ ಬೆಂಬಲವಾಗಿ ನಿಲ್ಲಬೇಕು. ಬೆಳೆ ಸಮೀಕ್ಷೆ, ವಿಮೆ ಪಾವತಿ ವೇಳೆ ನಷ್ಟವಾಗದಂತೆ ಕಾಳಜಿ ವಹಿಸಬೇಕು’ ಎಂದು ಸಚಿವರು ತಿಳಿಸಿದರು.

‘ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ಮಾನದಂಡಗಳ ಅನ್ವಯ ಬರ ಘೋಷಣೆ ಮಾಡಲಾಗಿದೆ. ಬೆಳೆ ಹಾನಿ ಪರಿಹಾರ ವಿತರಿಸುವಾಗ ರೈತರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ‌ತಲುಪಿಸಬೇಕು. ಕೃಷಿಕರಿಗೆ ತಾಂತ್ರಿಕ ನೆರವು, ಮಾರ್ಗದರ್ಶನ ನೀಡಬೇಕು. ಜಲ ಸಂರಕ್ಷಣೆಗೆ ಗಮನ ಹರಿಸಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.

chaluva

‘ಎಲ್ಲ ಜಿಲ್ಲೆಗಳಲ್ಲಿ ಕೆವೈಸಿ, ಫ್ರೂಟ್ ಐಡಿ ನೋಂದಣಿ ಶೇ 100ರಷ್ಟು ಪೂರ್ಣ ಆಗಬೇಕು. ಎಲ್ಲ ಆರ್.ಟಿ.ಸಿಗಳ ದಾಖಲೆಯಾಗಬೇಕು. ಇದನ್ನು ಆಂದೋಲನದ ಸ್ವರೂಪದಲ್ಲಿ ‌ಮಾಡಬೇಕು’ ಎಂದು ಕೃಷಿ ಸಚಿವರು ಸೂಚಿಸಿದರು.

ಬಿತ್ತನೆಯಲ್ಲಿ ಹೊಸ ತಂತ್ರಜ್ಞಾನ ಯಶಸ್ಸು; ಸಚಿವರ ಮೆಚ್ಚುಗೆ
ದಾವಣಗೆರೆ ಜಿಲ್ಲೆಯ ವಿವಿಧೆಡೆ ಹೊಸ ತಂತ್ರಜ್ಞಾನ ಮತ್ತು ಯಾಂತ್ರಿಕತೆ ಬಳಸಿ ತೊಗರಿ, ಗೋವಿನ ಜೋಳ ಹಾಗೂ ಭತ್ತ ಬೇಸಾಯ ಮಾಡಿ ಅಧಿಕ ಇಳುವರಿ ಪಡೆದಿರುವ ಬಗ್ಗೆ ಜಂಟಿ ಕೃಷಿ ನಿರ್ದೇಶಕರ ಸಭೆಯ ಗಮನಕ್ಕೆ ತಂದರು.

‘ಇದೊಂದು ಅಭಿನಂದನಾರ್ಹ ಬೆಳವಣಿಗೆ. ಮುಂದಿನ ವರ್ಷ ಇನ್ನಷ್ಟು ರೈತರಿಗೆ ಈ ಬಗ್ಗೆ ಅರಿವು ಮೂಡಿಸಿ’ ಎಂದು ಸಚಿವ ಚಲುವರಾಯಸ್ವಾಮಿ ಸಲಹೆ ನೀಡಿದರು.

ಚನ್ನಗಿರಿ ಶಾಸಕರಾದ ಬಸವರಾಜು ಶಿವಗಂಗಾ ಹಾಗೂ ಮಾಯಕೊಂಡ ಶಾಸಕ ಬಸವಂತಪ್ಪ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...