ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

Date:

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಕೇವಲ ರೂ. 3,498 ಕೋಟಿ ಮಾತ್ರ ಬಿಡುಗಡೆ ಮಾಡುವ ಮೂಲಕ ಮತ್ತೊಮ್ಮೆ ರಾಜ್ಯದ ರೈತರಿಗೆ ಅನ್ಯಾಯ ಎಸಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.

ಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.

“ಪ್ರಸ್ತುತ ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳು ಭೀಕರ ಬರ ಎದುರಿಸುತ್ತಿವೆ. ರೈತರಿಗೆ ಮುಂಗಾರು ಬೆಳೆ ಸಂಪೂರ್ಣ ಕೈಕೊಟ್ಟಿದೆ. ಇನ್ನೂ ಹಿಂಗಾರು ಬೆಳೆಯ ಬಗ್ಗೆಯೂ ನಿರೀಕ್ಷೆ ಇಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯದ ರೈತರ ಬೆನ್ನಿಗೆ ನಿಲ್ಲಬೇಕಾದ ಕೇಂದ್ರ ಸರ್ಕಾರ ನಿಯಮದಂತೆ ನೀಡಬೇಕಾದ ಹಣದ
ಶೇ.20ರಷ್ಟನ್ನು ಮಾತ್ರ ಬಿಡುಗಡೆ ಮಾಡುವ ಮೂಲಕ ರಾಜ್ಯದ ರೈತರ ವಿರುದ್ಧದ ತನ್ನ ಮಲತಾಯಿ ಧೋರಣೆಯನ್ನು ಮುಂದುವರೆಸಿದೆ. ಈ ಮೂಲಕ ಕರ್ನಾಟಕದ ಹಕ್ಕಿಗೆ ಕೇಂದ್ರ ಸರ್ಕಾರ ಕಿಂಚಿತ್ತೂ ಬೆಲೆ ನೀಡದಿರುವುದು ಸ್ಪಷ್ಟವಾಗಿದ್ದು, ಉಳಿದ ಹಣವನ್ನು ಕೇಂದ್ರ ಬಿಡುಗಡೆ ಮಾಡುವವರೆಗೆ ರಾಜ್ಯದ ಹೋರಾಟ ಮುಂದುವರೆಯಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಹಾರ ನೀಡಿದ್ದು ಕೇಂದ್ರವಲ್ಲ, ಕೋರ್ಟ್!

“ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿರುವುದು ಸುಪ್ರೀಂ ಕೋರ್ಟ್ ವಿನಃ ಕೇಂದ್ರ ಸರ್ಕಾರವಲ್ಲ. ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಯಾವುದೇ ಉದ್ದೇಶವೂ ಅವರಿಗೆ ಇದ್ದಂತಿರಲಿಲ್ಲ ಎಂದು ಹೇಳಿದರು.

“ರಾಜ್ಯ ಸರ್ಕಾರ ಬರ ಘೋಷಿಸಿ ಎಂದು ಸೆ.22 ರಂದೇ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿತ್ತು. ಕೇಂದ್ರದಿಂದ ತಂಡ ರಾಜ್ಯಕ್ಕೆ ಆಗಮಿಸಿ ಅ.4 ರಿಂದ 9ರ ವರೆಗೆ 13 ಜಿಲ್ಲೆ ಪ್ರವಾಸ ಮಾಡಿ ಕೇಂದ್ರ ಕೃಷಿ- ಗೃಹ ಸಚಿವಾಲಯಕ್ಕೆ ಒಂದೇ ವಾರದಲ್ಲಿ ವರದಿ ಸಲ್ಲಿಸಿತ್ತು. ನ.13ಕ್ಕೆ ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ಶಿಫಾರಸುಗಳೂ ಗೃಹ ಸಚಿವರ ಕಚೇರಿಗೆ ತಲುಪಿವೆ. ಆದರೆ, ಗೃಹ ಕಚೇರಿಯಲ್ಲಿ ಉದ್ದೇಶಪೂರ್ವಕವಾಗಿ ರಾಜ್ಯದ ಮನವಿ ಪರಿಗಣಿಸದೆ ವಿಳಂಬ ಧೋರಣೆ ಅನುಸರಿಸಲಾಗಿತ್ತು” ಎಂದು ಅವರು ಆರೋಪಿಸಿದರು.

“ರಾಜ್ಯಕ್ಕೆ ಕಳೆದ ನವೆಂಬರ್‌ ತಿಂಗಳಲ್ಲೇ ಬರಬೇಕಾದ ಬರ ಪರಿಹಾರವನ್ನು ಆರು ತಿಂಗಳಾದರೂ ಬಿಡುಗಡೆ ಮಾಡಲಿಲ್ಲ. ಕೇಂದ್ರದ ಕೈಯಲ್ಲಿ ಅಧಿಕಾರ ಹಾಗೂ ಸಮಯ ಎರಡೂ ಇದ್ದೂ ಸಹ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ. ಅಸಲಿಗೆ ಅವರಿಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಉದ್ದೇಶವೂ ಇರಲಿಲ್ಲ. ನಮ್ಮ ಮನವಿಗಾಗಲಿ, ಕರ್ನಾಟಕದ ಹಕ್ಕಿಗಾಗಲಿ ಅವರು ಕಿಂಚಿತ್ತೂ ಬೆಲೆ ನೀಡಲಿಲ್ಲ. ವಿಪತ್ತು ನಿರ್ವಹಣಾ ಕಾಯ್ದೆ-2005ರ ಪ್ರಕಾರ ಕಾನೂನಿನಂತೆ ನಮಗೆ ಬರಬೇಕಾದ ಹಣ ಬರದಿದ್ದಾಗ ಅನಿವಾರ್ಯವಾಗಿ ನಾವು ನ್ಯಾಯಾಲಯ ಮೆಟ್ಟಿಲೇರಿ ಕಾನೂನು ಮೊರೆ ಹೋಗಬೇಕಾಯ್ತು” ಎಂದು ವಿವರಿಸಿದರು.

“ರಾಜ್ಯದ ರೈತರಿಗೆ ಅನ್ಯಾಯವಾದಾಗ ಕೈಕಟ್ಟಿ ಕೂರಬಾರದು ಎಂಬ ಕಾರಣಕ್ಕೆ ಸರ್ಕಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಲಯದ ಎರಡು ಹಿಯರಿಂಗ್‌ನಲ್ಲೂ ನಮ್ಮ ಬರ ಪರಿಹಾರದ ಮನವಿಯ ಬಗ್ಗೆ ನ್ಯಾಯಾಧೀಶರಾಗಲಿ ಅಥವಾ ಕೇಂದ್ರ ಸರ್ಕಾರದ ಪರ ವಕೀಲರಾಗಲಿ ಪ್ರಶ್ನೆ ಮಾಡಿಲ್ಲ. ಇದರ ಅರ್ಥ ನಾವು ಕೊಟ್ಟ ಮನವಿ ಕರಾರುವಕ್ಕಾಗಿತ್ತು, ಕಾನೂನು ಬದ್ಧವಾಗಿತ್ತು ಎಂಬುದನ್ನು ಸೂಚಿಸುತ್ತದೆ” ಎಂದರು.

“ಅಲ್ಲದೆ, ಸ್ವತಃ ಕೇಂದ್ರ ಸರ್ಕಾರದ ವಕೀಲರು ಕೋರ್ಟ್‌ನಲ್ಲಿ ಕೈಮುಗಿದು ನಮಗೆ ಈ ವಾದವೇ ಬೇಡ ನಾವು ಶೀಘ್ರದಲ್ಲಿ ಕರ್ನಾಟಕದ ಬರ ಮನವಿ ಮೇಲೆ ನಿರ್ಧಾರ ತೆಗೆದುಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಅದರ ಅನ್ವಯ ಇಂದು ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಇದು ಸರ್ವೋಚ್ಚ ನ್ಯಾಯಾಲಯದಿಂದ ರಾಜ್ಯಕ್ಕೆ ಕಲ್ಪಿಸಲ್ಪಟ್ಟ ನ್ಯಾಯವೇ ವಿನಃ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವುದಲ್ಲ” ಎಂದು ಅವರು ಪುನರುಚ್ಚರಿಸಿದರು.

ಕೇಂದ್ರದಿಂದಲೇ ನಿಯಮ ಉಲ್ಲಂಘನೆ

“ಕೇಂದ್ರ ಸರ್ಕಾರ ಇಂದು ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. ಈ ಬಗ್ಗೆ ರಾಜ್ಯಕ್ಕೆ ಮಾಹಿತಿ ಇಲ್ಲ. ನಿಯಮದಂತೆ ಮೊದಲು ರಾಜ್ಯಕ್ಕೆ ಕೇಂದ್ರ ಹಣಕಾಸು ಇಲಾಖೆಯಿಂದ ಪತ್ರ ಬರಬೇಕು. ಆದರೆ, ಈ ನಿಯಮವನ್ನು ಪಾಲಿಸದೆ ಬರ ಪರಿಹಾರ ಬಿಡುಗಡೆ ಅಧಿಸೂಚನೆಯನ್ನು ಮೊದಲು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ. ನಮಗೂ ಸಾಮಾಜಿಕ ಮಾಧ್ಯಮಗಳ ಮೂಲಕವೇ ವಿಷಯ ತಿಳಿದಿದ್ದು” ಎಂದು ಅಸಮಾಧಾನ ಹೊರಹಾಕಿದರು.

“ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಕಾನೂನು ಹೋರಾಟಕ್ಕೆ ಒಂದು ಹಂತದ ಜಯ ಸಿಕ್ಕಿದ್ದು, ಶೇ.20ರಷ್ಟು ಹಣ ಮಾತ್ರ ಬರ ಪರಿಹಾರದ ರೂಪದಲ್ಲಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಬಾಕಿ ಹಣದ ಬಗ್ಗೆ ಯಾವುದೇ ಉಲ್ಲೇಖಗಳಿಲ್ಲ. ಹೀಗಾಗಿ ಕೇಂದ್ರದಿಂದ ಬಾಕಿ ಹಣ ಪಡೆಯುವವರೆಗೆ ರಾಜ್ಯ ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದೆ” ಎಂದು ಅವರು ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...