₹40 ಕೋಟಿ ಮೌಲ್ಯದ ಡ್ರಗ್ಸ್ ನಾಶ, 10 ಟನ್ ಗಾಂಜಾ ಬೆಂಕಿಗೆ: ಸಚಿವ ಡಾ. ಜಿ.ಪರಮೇಶ್ವರ್‌

Date:

₹40 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್ಸ್ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದರು‌.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

“ರಾಜ್ಯ ಸರ್ಕಾರವು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಯುದ್ಧವನ್ನೆ ಸಾರಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ. ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆಯು 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂನ್ 26ರಂದು ಆಚರಿಸಲು ನಿರ್ಣಯಿಸಿತು. ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ” ಎಂದು ಹೇಳಿದರು.

“ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ. 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ” ಎಂದರು.

“ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17 ರಿಂದ 20 ವರ್ಷದೊಳಗಿನವರೆ ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಗೊತ್ತಾಗುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

“ಪ್ರತಿಯೊಬ್ಬರು ಡ್ರಗ್ಸ್‌ನಿಂದ ದೂರ ಇರುತ್ತೇವೆ ಎಂದು ಪ್ರತಿಯೊಬ್ಬರು ಸಂಕಲ್ಪ ಮಾಡಿಕೊಳ್ಳಬೇಕು. ಐಟಿ‌ ಕಂಪನಿಗಳು ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜ್, ಶಾಸಕ ರಿಜ್ವಾನ್ ಅರ್ಷದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಐಡಿ ವಿಭಾಗದ ಡಿಜಿಪಿ ಡಾ. ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್ ಮೋಹಾಂತಿ, ಆದರ್ಶ ಡೆವಲೆಪರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಜಯಶಂಕರ್ ಅವರು ಕಾರ್ಯಕ್ರಮದಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...