ಕೋಳಿ ಅಂಕ, ಡಿ‌ಜೆ ಮ್ಯೂಸಿಕ್‌ಗೆ ಅವಕಾಶಕ್ಕಾಗಿ ವಿಧಾನಸಭೆಯಲ್ಲಿ ಬಡಿದಾಡುವ ಶಾಸಕರುಗಳ ಮೇಲೆ ನಿರೀಕ್ಷೆಯಿಲ್ಲ: ಮುನೀರ್ ಕಾಟಿಪಳ್ಳ

Date:

ಕೋಳಿ ಅಂಕ, ಡಿ‌ಜೆ ಮ್ಯೂಸಿಕ್‌ಗೆ ಅವಕಾಶ ಒದಗಿಸಲು ವಿಧಾನ ಸಭೆ ಅಧಿವೇಶನದಲ್ಲಿ ಬಡಿದಾಡುವ ಶಾಸಕರುಗಳಿಂದ ಸರಕಾರಿ ಆಸ್ಪತ್ರೆಗಳ ಉಳಿವಿಗಾಗಿ ಧ್ವನಿ ಎತ್ತುವ ನಿರೀಕ್ಷೆ ಇಟ್ಟುಕೊಳ್ಳುವ ಹಾಗಿಲ್ಲ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)- ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿ ‘ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್’ ನೇತೃತ್ವದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ 12 ತಾಸುಗಳ ಸಾಮೂಹಿಕ ಧರಣಿ ನಡೆದಿದೆ. ಈ ಧರಣಿಯಲ್ಲಿ ಹಲವು ಜನಪರ ಸಂಘಟನೆಗಳು, ಸ್ಥಳೀಯ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.

ಇದನ್ನು ಓದಿದ್ದೀರಾ? ಮಂಗಳೂರು| ಕೃಷಿ ಭೂಮಿ ರಕ್ಷಣೆಗಾಗಿ ಸಂಘಟಿತ ಹೋರಾಟ ಅಗತ್ಯ – ಮುನೀರ್ ಕಾಟಿಪಳ್ಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮೂಹಿಕ ಧರಣಿಯನ್ನು ಉದ್ಘಾಟಿಸಿ ಮಾತನಾಡಿದ ಮುನೀರ್ ಕಾಟಿಪಳ್ಳ, “ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೂರು ದಶಕದ ಹಿಂದೆ ಹೆರಿಗೆ ಸೌಲಭ್ಯಗಳನ್ನು ಒದಗಿಸುತ್ತಿತ್ತು. ದಿನದ 24 ತಾಸು ಕಾರ್ಯಾಚರಿಸುತ್ತಿತ್ತು. ಜನ ಸಾಮಾನ್ಯರ ಪಾಲಿಗೆ ಆಶಾಕಿರಣವಾಗಿತ್ತು. ಆದರೆ, ಇಂದು ಅದು ಮಕ್ಕಳ‌‌ ಲಸಿಕೆ, ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ‌ ಕಲಿಕೆಗೆ ಸೀಮಿತವಾಗಿದೆ. ಕನಿಷ್ಟ ಪಕ್ಷ ಪೂರ್ಣಕಾಲಿಕ ವೈದ್ಯರನ್ನು ಒದಗಿಸಲೂ ಸಾಧ್ಯವಾಗಿಲ್ಲ. ಸಂಜೆ ನಾಲ್ಕು ಗಂಟೆಗೆ ಆರೋಗ್ಯ ಕೇಂದ್ರಕ್ಕೆ ಬೀಗ ಜಡಿಯಲಾಗುತ್ತಿದೆ” ಎಂದರು.

muneer2

“ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ಹಿತಾಸಕ್ತಿಗಳ ಭಾಗವಾಗಿ ಸರಕಾರಿ ಆರೋಗ್ಯ ಕೇಂದ್ರ, ಆಸ್ಪತ್ರೆಗಳ ಕತ್ತು ಹಿಸುಕಲಾಗುತ್ತಿದೆ. ಸ್ಥಳೀಯ ಶಾಸಕರುಗಳಿಗೆ ಈ ಸಮಸ್ಯೆಗಳೆಲ್ಲ ಆದ್ಯತೆಯಾಗಿ ಉಳಿದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣವಂತೂ ಖಾಸಗಿ ಮೆಡಿಕಲ್ ಲಾಭಿಯ ಹಿಡಿತಕ್ಕೆ ಪೂರ್ಣವಾಗಿ ಸಿಲುಕಿದೆ. ಜನತೆಯೇ ಒಗ್ಗಟ್ಟಾಗಿ ಹೋರಾಟ ನಡೆಸದೆ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಬಲವರ್ಧನೆ ಅಸಾಧ್ಯ. ಇಂದಿನ ಸಾಮೂಹಿಕ ಧರಣಿ ಆರಂಭ ಮಾತ್ರ, ಸುರತ್ಕಲ್‌ನಲ್ಲಿ ಸಮುದಾಯ ಆಸ್ಪತ್ರೆ ನಿರ್ಮಾಣವಾಗದೆ ವಿರಮಿಸುವುದಿಲ್ಲ, ಆ ನಿಟ್ಟಿನಲ್ಲಿ ಹೋರಾಟ ಮುಂದುವರಿಯಲಿದೆ” ಎಂದು ಮುನೀರ್ ಕಾಟಿಪಳ್ಳ ಹೇಳಿದರು.

ರಂಗ ಕಲಾವಿದೆ ಗೀತಾ ಸುರತ್ಕಲ್ ಮಾತನಾಡಿ, “ಹುಟ್ಟೂರು ಸುರತ್ಕಲ್‌ನಲ್ಲಿ ಸಮುದಾಯ ಆಸ್ಪತ್ರೆಗಾಗಿ ಸಂಘಟಿತ ಹೋರಾಟ ನಡೆಯುತ್ತಿರುವುದು ಸಂತೋಷದ ಸಂಗತಿ, ಆರೋಗ್ಯದ ಹಕ್ಕು ಪ್ರತಿಯೊಬ್ಬರಿಗೂ ಸಿಗಬೇಕಿದೆ” ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಮುನೀರ್ ಕಾಟಿಪಳ್ಳ ಮೇಲೆ ಮತ್ತೊಂದು FIR ಹಾಕಿದ ಮಂಗಳೂರು ನಗರ ಪೊಲೀಸ್ ಕಮಿಷನರ್

ಇನ್ನು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ ಮಾತನಾಡಿ, “ದಲಿತರು, ಬಡವರಿಗೆ ದುಬಾರಿ ಖಾಸಗಿ ಆಸ್ಪತ್ರೆಗಳಲ್ಲಿ ಪ್ರವೇಶ ಇಲ್ಲ. ಇರುವ ಸರಕಾರಿ ಆಸ್ಪತ್ರೆಗಳಲ್ಲಿ ಸೇವೆಗಳಿಲ್ಲ, ಹಾಸಿಗೆಗಳು ಖಾಲಿ ಇಲ್ಲ. ಸರ್ಕಾರಿ ಆಸ್ಪತ್ರೆಗಳಿಗಾಗಿ ಬಲವಾದ ಹೋರಾಟ ನಡೆಸದಿದ್ದರೆ ಕೆಳ ವರ್ಗದ ಜನತೆಗೆ ಬದುಕೆ ಇಲ್ಲ. ಎಂದು ಹೇಳಿದರು.

ಸುರತ್ಕಲ್ ಪ್ರದೇಶದ ಸಾಮಾಜಿಕ ಮುಂದಾಳು ವೈ. ರಾಘವೇಂದ್ರ ರಾವ್ ಮಾತನಾಡಿ, “ಜನಸಮಾನ್ಯರ ಕೂಗಿಗೆ ಯಾವುದೆ ರಾಜಕೀಯ ನಾಯಕರು ಸ್ಪಂದಿಸುತ್ತಿಲ್ಲ, ಸುರತ್ಕಲ್ ಸಮುದಾಯ ಆಸ್ಪತ್ರೆಗಾಗಿ ಟೋಲ್ ತೆರವು ಹೋರಾಟದ ಮಾದರಿಯಲ್ಲಿ ಹೋರಾಟ ನಡೆಸಬೇಕಿದೆ” ಎಂದು ಕರೆ ನೀಡಿದರು.

ಧರಣಿಯ ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಡಾ. ಸುಜಯ್ ಭಂಡಾರಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ‌ ನೀಡಿ ಮನವಿ ಸ್ವೀಕರಿಸಿದರು.

ಏನಿದು ಕೋಳಿ ಅಂಕದ ಚರ್ಚೆ?

ವಿಧಾನಸಭೆಯಲ್ಲಿ ಇತ್ತೀಚೆಗೆ ಕೋಳಿ ಅಂಕದ ಬಗ್ಗೆ ಚರ್ಚೆ ನಡೆದಿದೆ, ಇದು ಸಾಂಪ್ರದಾಯಿಕ ಆಚರಣೆಯಾಗಿರುವ ಕಾರಣ ಅನುಮತಿ ನೀಡಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ. ಶಾಸಕ ಹರೀಶ್ ಪೂಂಜಾ ಸೇರಿದಂತೆ ಇತರ ಪ್ರತಿನಿಧಿಗಳು ಸಾಂಪ್ರದಾಯಿಕ ಆಚರಣೆ ನಡೆಯುವ ದೇವಸ್ಥಾನಗಳು ಮತ್ತು ದೈವಸ್ಥಾನಗಳ ಪಟ್ಟಿಯನ್ನು ತಯಾರಿಸಲು ಸಮೀಕ್ಷೆ ನಡೆಸಬೇಕು ಮತ್ತು ಜೂಜಾಟವಿಲ್ಲದೆ ಸಾಂಪ್ರದಾಯಿಕ ರೀತಿಯಲ್ಲಿ ಕೋಳಿ ಅಂಕ ನಡೆಸಲು ಅವಕಾಶ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ್ದರು.

muneer1
ಮನವಿ ಸ್ವೀಕರಿಸಿದ ತಾಲೂಕು ವೈದ್ಯಾಧಿಕಾರಿ ಡಾ. ಸುಜಯ್ ಭಂಡಾರಿ

ಡಿವೈಎಫ್ಐ ನಾಯಕರುಗಳಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ರಿಜ್ವಾನ್ ಹರೇಕಳ, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಎಂ ದೇವದಾಸ್, ರಘು ಎಕ್ಕಾರು, ಶೇಖರ ಹೆಜಮಾಡಿ, ಆದಿವಾಸಿ ಹಕ್ಕುಗಳ ಸಮಿತಿಯ ಕರಿಯ ಕೆ, ಕೃಷ್ಣಾ ಇನ್ನಾ, ಸಾಮಾಜಿಕ ಕಾರ್ಯಕರ್ತರಾದ ರಮೇಶ್ ಟಿ ಎನ್, ರವಿ ಪೂಜಾರಿ ಸೂರಿಂಜೆ, ದಯಾನಂದ ಶೆಟ್ಟಿ ಪಂಜಿಮೊಗರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜನವಾದಿ ಮಹಿಳಾ ಸಂಘಟನೆಯ ಪ್ರಮೀಳಾ, ಅಸುಂತಾ, ಸಿಲ್ವಿಯಾ, ಸಾಮಾಜಿಕ ಕಾರ್ಯಕರ್ತರಾದ ಬಾವಾ ಪದರಂಗಿ, ದೀಪಕ್ ಪೆರ್ಮುದೆ, ಸಲೀಂ ಶ್ಯಾಡೋ, ಹರೀಶ್ ಪೇಜಾವರ, ಸದಾಶಿವ ಕುಪ್ಪೆಪದವು, ವಸಂತಿ, ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ಪ್ರಮುಖರಾದ ಮಕ್ಸೂದ್ ಬಿ ಕೆ, ಅಜ್ಮಾನ್ ಕಾನ, ಶೆರೀಫ್ ಕಾಲೊನಿ, ಚಂದ್ರಕಾಂತ ದೇವಾಡಿಗ, ಕಬೀರ್ ಕೃಷ್ಣಾಪುರ, ಮುಸ್ತಫಾ ಬೈಕಂಪಾಡಿ, ಹಮೀದ್ ಕಟ್ಲ, ರಶೀದ್ ಸೂರಲ್ಪಾಡಿ, ಜಬ್ಬಾರ್ ಮಲ್ಲೂರು ಮತ್ತಿತರರು ಉಪಸ್ಥಿತರಿದ್ದರು. ಹೋರಾಟ ಸಮಿತಿ ಸುರತ್ಕಲ್ ಘಟಕದ ಸಂಚಾಲಕರಾದ ಶ್ರೀನಾಥ್ ಕುಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...